Friday 25 July 2014

ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾದ ಟಿ.ಮಂಜುಳಾ ಪರಮೇಶ್, ಉಪಾಧ್ಯಕ್ಷರಾಗಿ ಸುಜಾತ ಆಯ್ಕೆ .

ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾದ ಟಿ.ಮಂಜುಳಾ ಪರಮೇಶ್, ಉಪಾಧ್ಯಕ್ಷರಾಗಿ ಸುಜಾತ ಆಯ್ಕೆ
    ಮಂಡ್ಯ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನದ ಮೂರನೇ ಅವಧಿಗೆ ಅಧ್ಯಕ್ಷರಾಗಿ ಟಿ.ಮಂಜುಳಾ ಪರಮೇಶ್ ಹಾಗೂ ಉಪಾಧ್ಯಕ್ಷರಾಗಿ ಸುಜಾತ ಅವರು ಅವಿರೋಧವಾಗಿ ಆಯ್ಕೆಯಾಗಿದೆ.
    ಚುನಾವಣಾಧಿಕಾರಿಗಳೂ ಆಗಿರುವ ಮೈಸೂರು ಪ್ರಾದೇಶಿಕ ಆಯುಕ್ತರಾದ ಎಂ.ವಿ. ಜಯಂತಿ ಅವರು ಅವರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಂಚಾಯತ್‍ನ ಕಾವೇರಿ ಸಭಾಂಗಣದಲ್ಲಿ ಘೋಷಿಸಿದರು.
ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಧಿಯು 2016ರ ಫೆಬ್ರವರಿ 14ರ ವರೆಗೆ ಇರುತ್ತದೆ ಎಂದು ಅವರು ಪ್ರಾದೇಶಿಕ ಆಯುಕ್ತರು ತಿಳಿಸಿದರು.

No comments:

Post a Comment