Wednesday 30 July 2014

ವಿ.ಸಿ.ಫಾರಂ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಬೇಕು-ರವಿಶಂಕರ್

ಮಂಡ್ಯ, ಜು.30- ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಹೆಚ್ಚಾಗಿ ಕ್ರೀಡೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯ ರವಿಶಂಕರ್ ಹೇಳಿದರು.
ತಾಲ್ಲೂಕಿನ ವಿ.ಸಿ.ಫಾರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ದುದ್ದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಅವರು ಮಾತನಾಡಿ, ಕ್ರೀಡೆಯಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಉನ್ನತ ಶಿಕ್ಷಣ ಪಡೆಯುವಲ್ಲಿಯೂ ಸಹಕಾರಿಯಾಗುತ್ತದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡು ಶಾಲೆ ಹಾಗೂ ಜಿಲ್ಲೆಯ ಕೀರ್ತಿಯನ್ನು ಬೆಳಗಬೇಕು ಎಂದು ಸಲಹೆ ನೀಡಿದರು.
ದುದ್ದ ಗ್ರಾಪಂ ಉಪಾಧ್ಯಕ್ಷ ಮಹದೇವು, ಸದಸ್ಯೆ ಯಶೋಧಮ್ಮ, ಶಿಕ್ಷಕರಾದ ಪರಮೇಶ್, ರಾಜಶೇಖರ್, ರಾಮಚಂದ್ರಪ್ಪ, ವಿಜಯಕುಮಾರ್ ಇತರರು ಭಾಗವಹಿಸಿದ್ದರು

No comments:

Post a Comment