Saturday 23 August 2014

ಕೆ.ಆರ್.ಪೇಟೆ ಸುದ್ದಿಗಳು.

ಕೆ.ಆರ್.ಪೇಟೆ -ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಕ್ರೀಡಾ ಚಟುವಟಿಕೆಗಳ ಪಾತ್ರ ಪ್ರಮುಖವಾದದ್ದು ಎಂದು ಕೆ.ಆರ್.ಪೇಟೆ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪ್ರಭಾವತಿ ಜಗದೀಶ್‍ರವರು ಕ್ರೀಡಾಪಟುಗಳಿಗೆ ತಿಳಿಸಿದರು.
ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಡ್ಯ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಬೆಂಗಳೂರು ಇವರ ಸಹಯಗದಲ್ಲಿ ಹಮ್ಮಿಕೊಂಡಿದ್ದ ಕೆ.ಆರ್.ಪೇಟೆ ತಾಲ್ಲೂಕು ಮಟ್ಟದ ರಾಜೀವ್ ಗಾಂಧಿ ಖೇಲ್ ಅಭಿಯಾನದ ಗ್ರಾಮೀಣ, ದಸರಾ ಮತ್ತು ಮಹಿಳಾ ಕ್ರೀಡಾಕೂಟದ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಕ್ರೀಡಾ ಪಟುಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವುದನ್ನು ಗಮನಿಸಿದರೆ ಮುಂಬರುವ ದಿನಗಳಲ್ಲಿ ರಾಜ್ಯ, ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಕ್ರೀಡೆಗಳಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಉತ್ತೇಜಿಸುವಲ್ಲಿ ಸಹಕಾರಿಯಾಗುತ್ತದೆ.
ಪುರಸಭೆಯ ಉಪಾಧ್ಯಕ್ಷರಾದ ಶ್ರೀ ಅಶೋಕ್‍ಕುಮಾರ್‍ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮಾïಯ ಪುರಸಭೆಯ ಅಧ್ಯಕ್ಷರಾದ ಕೆ.ಗೌಸ್‍ಖಾನ್‍ರವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಕೆ.ಸಿ. ರೇವಣ್ಣ, ಕೆ.ಆರ್. ಪೇಟೆ ಶಾಸಕರ ಆಪ್ತ ಕಾರ್ಯದರ್ಶಿ ರಾಜಶೇಖರ್ ತಹಶೀಲ್ದಾರ್‍ರಾದ ಶಿವರಾಮ್, ಪುರಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ರವೀಂದ್ರ ಕ್ರೀಡಾ ಇಲಾಖೆಯ ಭಾರ ಎತ್ತುವ ತರಬೇತಿದಾರರಾದ ಶಿವರಾಮು ಹನಿಯಂಬಾಡಿ ನಾಗರಾಜು, ಮತ್ತಿತರರು ಹಾಜರಿದ್ದರು.  ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಇದೇ ಪ್ರಥಮ ಬಾರಿಗೆ  950 ಮಂದಿ ಕ್ರೀಡಾ ಪಟುಗಳು ಭಾಗವಹಿಸಿದರು.

No comments:

Post a Comment