Wednesday 24 September 2014

ಸೆಪ್ಟೆಂಬರ್ 24, 25 ಇಂಧನ ಸಚಿವರ ಜಿಲ್ಲಾ ಪ್ರವಾಸ
ಮೈಸೂರು, ಸೆಪ್ಟೆಂಬರ್ 23. ಇಂಧನ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಸೆಪ್ಟೆಂಬರ್ 24 ಹಾಗೂ 25 ರಂದು ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.
 ಸೆಪ್ಟೆಂಬರ್ 24 ರಂದು ಮೈಸೂರಿಗೆ ರೈಲು ಮೂಲಕ ರಾತ್ರಿ 7 ಗಂಟೆಗೆ ಸಚಿವರು ಆಗಮಿಸಿ ವ್ಯಾಸ್ತವ್ಯ ಹೂಡುವರು.
 ಸೆಪ್ಟೆಂಬರ್ 25 ರಂದು ಬೆಳಿಗ್ಗೆ 8:30 ಗಂಟೆಗೆ ರಸ್ತೆ ಮೂಲಕ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ  ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ತೆರಳಿ 10:30 ಗಂಟೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ರಾಜ್ಯ ಮಟ್ಟದ ಜಾನಪದ ಮೇಳ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 4 ಗಂಟೆಗೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಕ್ರೀಡಾಕೊಟಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 6:30 ಗಂಟೆಗೆ ಮೈಸೂರು ನಗರ ವಿದ್ಯುದೀಕರಣ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ರಸ್ತೆ ಮೂಲಕ ಮಂಡ್ಯಕ್ಕೆ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
    ಸೆ. 24 ರಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಜಿಲ್ಲಾ ಪ್ರವಾಸ
ಮೈಸೂರು, ಸೆಪ್ಟೆಂಬರ್ 23.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಉಮಾಶ್ರೀ ಅವರು ಸೆಪ್ಟೆಂಬರ್ 24, 25 ಹಾಗೂ 26 ರಂದು 3 ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
 ಸೆಪ್ಟೆಂಬರ್ 24 ಮೈಸೂರಿಗೆ ರೈಲು ಮೂಲಕ ರಾತ್ರಿ 7:30 ಗಂಟೆಗೆ ಸಚಿವರು ಆಗಮಿಸಿ ವ್ಯಾಸ್ತವ್ಯ ಹೂಡುವರು. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 8:15 ಗಂಟೆಗೆ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ 10 ಗಂಟೆಗೆ ನಗರದ ಕಲಾಮಂದಿರದಲ್ಲಿ ನಡೆಯಲಿರುವ ಮೈಸೂರು ದಸರಾ ಚಲನಚಿತೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಹ್ನಾ 3:30 ಗಂಟೆÉಗೆ ಮೈಸೂರು ದಸರಾ ಕುಸ್ತಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಕಾಡಾ ಕಚೇರಿಯಲ್ಲಿ  ಕನ್ನಡ ಪುಸ್ತಕ ಮೇಳವನ್ನು ಉದ್ಘಾಟಿಸಲಿದ್ದಾರೆ. 6 ಗಂಟೆಗೆ ಅರವನೆ ಆವರಣದಲ್ಲಿ ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೂಳ್ಳುವರು. 
  ಸೆಪ್ಟೆಂಬರ್ 26 ರಂದು ಬೆಳಿಗ್ಗೆ 7 ಗಂಟೆಗೆ ರಂಗಚಾರ್ಲು ಪುರಭವನದಲ್ಲಿ ಪಾರಂಪರಿಕೆ ನಡಿಗೆ ಕಾಯಕ್ರಮದಲ್ಲಿ ಭಾಗವಹಿಸುವರು. ನಂತರ 11 ಗಂಟೆಗೆ ಅಮೃತ ಮಹೋತ್ಸವ ಭವನದ ಅಲ್ಯುಮಿನಿ ಅಸೋಸಿಯೇಷನ್ ಹಾಲ್‍ನಲ್ಲಿ ನಡೆಯುವ ಮಹಿಳಾ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಮೈಸೂರಿನಿಂದ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.        




No comments:

Post a Comment