Wednesday 24 September 2014

   
ಸೆಪ್ಟೆಂಬರ್ 25 ರಿಂದ ದಸರಾ ಚಲನಚಿತ್ರೋತ್ಸವ
ಮೈಸೂರು, ಸೆಪ್ಟೆಂಬರ್ 23 . ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ  ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆÉಗೆ ಮೈಸೂರು ನಗರದ ಕಲಾಮಂದಿರದಲ್ಲಿ ಉದ್ಘಾಟನೆಗೊಳ್ಳಲಿದೆ. 
  ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ ವಾರ್ತಾ, ಮೂಲಸೌಲಭ್ಯ ಹಾಗೂ ಹಜ್ ಸಚಿವರಾದ ಆರ್.ರೋಷನ್ ಬೇಗ್ ಅವರು ದಸರಾ ಚಲನಚಿತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸುವರು.  ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವಾಸು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
  ಕಂದಾಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಲೋಕೋಯೋಗಿ ಲಾಖೆ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಸಹಕಾರ ಹಾಗೂ ಸಕ್ಕರೆ ಸಚಿವರಾದ ಮಹದೇವ ಪ್ರಸಾದ್, ವಸತಿ ಸಚಿವರಾದ ಎಂ.ಹೆಚ್.ಅಂಬರೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಲಾಖೆ ಸಚಿವರಾದ ಉಮಾಶ್ರೀ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಡಾ. ಬಿ.ಪುಷ್ಪಾ ಅಮರನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಹೆಚ್.ಡಿ.ಗಂಗರಾಜು, ಲೋಕ ಸಭಾ ಸದಸ್ಯರಾದ ಪ್ರತಾಪ ಸಿಂಹ, ಚಾಮರಾಜನಗರ ಲೋಕ ಸಭಾ ಕ್ಷೇತ್ರದ ಸದಸ್ಯರಾದ ಆರ್.ಧ್ರುವನಾರಾಯಣ, ಮಂಡ್ಯ ಲೋಕ ಸಭಾ ಕ್ಷೇತ್ರದ ಸದಸ್ಯರಾದ ಸಿ.ಎಸ್.ಪುಟ್ಟರಾಜು,   ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ, ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ವೆಂಕಟೇಶ್, ಕೃಷ್ಣರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂಕೆ.ಸೋಮಶೇಖರ್,  ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಾ.ರಾ.ಮಹೇಶ್, ಹುಣಸೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಸಿ.ಮಂಜುನಾಥ್, ಹೆಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಹೆಚ್.ವಿಜಯಶಂಕರ್, ಗೋ.ಮಧುಸೂಧನ್, ಮರಿತಿಬ್ಬೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್.ಧರ್ಮಸೇನ, ಮೈಸೂರು ಮಹಾನಗರ ಪಾಲೀಕೆ ಉಪ ಮಹಾ ಪೌರರಾದ ವಿ.ಶೈಲೇಂದ್ರ, ಮೈಸೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಜಿ.ಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಲ್.ಮಾದಪ್ಪ ಹಾಗೂ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲೋಕಮಣಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
 ವಿಶೇಷ ಆಹ್ವಾನಿತರಾಗಿ ಹಿರಿಯ ಕಲಾವಿದರಾದ ಭಾರತಿ ವಿಷ್ಣುವರ್ಧನ್, ಸಾಹುಕಾರ್ ಜಾನಕಿ, ಶ್ರೀನಾಥ್, ಜಯಮಾಲಾ, ಖ್ಯಾತ ನಿರ್ದೇಶಕರಾದ ಟಿ.ಎಸ್.ನಾಗಾಭರಣ, ಟ.ಎನ್.ಸೀತರಾಮ್, ಕೆ.ಶಿವರುದ್ರಯ್ಯ, ಕಲಾವಿದರಾದ ದುನಿಯಾ ವಿಜಯ್, ಪ್ರಮೀಳಾ ಜೋಷಾಯ್, ಶರಣ್, ರಾಗಿಣಿ, ರೂಪಿಕಾ, ಭವ್ಯ, ಸುಂದರ್‍ರಾಜ್, ಸಾಧುಕೋಕಿಲ, ಪೂಜಾ ಗಾಂಧಿ, ಮೇಘನಾ ರಾಜ್ ಮಾಸ್ಟರ್ ಚಿರಂಜೀವಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.           

No comments:

Post a Comment