Sunday 21 September 2014

ಮಂಡ್ಯ: ಬುದ್ಧ ಮತ್ತು ಅಂಬೇಡ್ಕರ್ ಅವರನ್ನು ಅನುಸರಿಸಿದವರು ಜಾತಿ ಮಾನವರಲ್ಲ, ವಿಶ್ವಮಾನವರು ಎಂದು ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದರು.
ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಯುವಕರ ಸಂಘ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿ,  ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಬುದ್ಧ ಅಂಬೇಡ್ಕರ್ ಅವರು ಸಮಾನತೆ, ಪ್ರೀತಿ, ಬದುಕಿನ ಮಾರ್ಗ ಮತ್ತು ಶಾಂತಿಯನ್ನು ಜನತೆಗೆ ತಿಳಿಸಿದ್ದಾರೆ. ಅವರ ಬರಹಗಳು, ಸಮಾಜಕ್ಕೆ ದಾರಿದೀಪವಾಗಿವೆ.
ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ತೋರಿಸಿಕೊಟ್ಟಿದ್ದಾರೆ. ದೇಶದಲ್ಲಿ ಬಡವ, ಶ್ರೀಮಂತ ಯಾರೇ ಆದರೂ, ಎಲ್ಲರಿಗೂ ಒಂದೇ ಕಾನೂನು. ಸಮಾನ ಅವಕಾಶಗಳನ್ನು ಒದಗಿಸಿಕೊಟ್ಟಿದ್ದಾರೆ.
ಎಸ್ಸಿ, ಎಸ್ಟಿಯವರಿಗೆ ಜನಸಂಖ್ಯೆಗನುಗುಣವಾಗಿ ಎಸ್‍ಇಪಿ, ಟಿಎಸ್‍ಪಿ ಯೋಜನೆಯಡಿ 15,308 ಕೋಟಿ ರೂ. ಹಣವನ್ನು ನಿಗದಿಮಾಡಿದ್ದಾರೆ. ಯಾವುದೇ ಸರ್ಕಾರ ಮಾಡಿಲ್ಲ. ನಮಮ್ ಸರ್ಕಾಋ ಮಾಡಿದೆ.
ಮಂಡ್ಯ-ಗುಬ್ಬಿ ಮಾರ್ಗದ 110 ಕಿ.ಮೀ. ರಸ್ತೆಯ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದು,ಬರುವ ಜನವರಿ ವೇಳೆಗೆ ಆರಂಭವಾಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ರೇಖಾ ದೇವರಾಜು, ಸದಸ್ಯರಾದ ಲಕ್ಷ್ಮಮ್ಮ, ರೇಣುಕಾ, ದ್ವಾರಕ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖgದಸಂಸ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಸುಂಡಹಳ್ಳಿ ನಾಗರಾಜು, ವಿಜಯಲಕ್ಷ್ಮಿ ರಘುನಂದನ್, ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಕೆ.ಬಿ.ಮೋಹನ್, ಉಪಾಧ್ಯಕ್ಷರಾದ ಕೆ.ವಿ.ನಾರಾಯಣಸ್ವಾಮಿ, ಎಸ್. ವಿಜಯಕುಮಾರ್, ಕಾರ್ಯದರ್ಶಿ ಮಹೇಶ್ ಉಪಸ್ಥಿತರಿದ್ದರು.


No comments:

Post a Comment