Friday 12 September 2014

14 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ

ಮೈಸೂರು,ಸೆ.12.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 14  ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 14  ರಂದು ಬೆಳಿಗ್ಗೆ 10-45 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಅಮೃತ ಮಹೋತ್ಸವ ಸಭಾಭವನದಲ್ಲಿ 5ನೇ ಅಖಿಲ ಕನ್ನಡ ದಲಿತ ಸಾಹಿತ್ಯ ಸಮ್ಮೇಳನ ಉದ್ಘಾಟಿಸುವರು. ಮಧ್ಯಾಹ್ನ 2-30 ಗಂಟೆಗೆ ಮೈಸೂರು ತಾಲ್ಲೂಕಿನ ಯಲಚಹಳ್ಳಿಯಲ್ಲಿ ಮೈಸೂರು ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.  ಸಂಜೆ 4-30 ಗಂಟೆಗೆ ವಿಜಯನಗರದ 2ನೇ ಹಂತದಲ್ಲಿರುವ ಶ್ರೀ ಕಲಾನಿಕೇತನ್ ಸ್ಕೂಲ್ ಆಫ್ ಆಟ್ರ್ಸ್ ಆವರಣದಲ್ಲಿ ಪಿ.ಆರ್. ತಿಪ್ಪೇಸ್ವಾಮಿ ಕಲಾಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸಂಜೆ 6 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ  ತೆರಳುವರು.

ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳು
     ಮೈಸೂರು,ಸೆ.12.ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ, 60 ರಿಂದ 70 ವರ್ಷ 71 ರಿಂದ 80 ವರ್ಷ ಹಾಗೂ 81 ವರ್ಷಕ್ಕಿಂತ ಮೇಲ್ಪಟ್ಟವರುಗಳ ಮೂರು ಗುಂಪುಗಳಲ್ಲಿ ಪುರುಷ ಮತ್ತು ಮಹಿಳೆ ಹಿರಿಯ ನಾಗರಿಕರುಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ.
     ಬಾಲ್ ಇನ್ ದಿ ಬಕೆಟ್, ಗುಂಡು ಎಸೆತ, ಮ್ಯೂಜಿಕಲ್ ಚೇರ್, ಥ್ರೋಬಾಲ್ ಸ್ಪರ್ಧೆಗಳು ದಿನಾಂಕ  16.09.2014 ರಂದು ಬೆಳಿಗ್ಗೆ 09.30ಕ್ಕೆ ಜೆ.ಎಸ್.ಎಸ್ ಹಳೇ ಆಸ್ಪತ್ರೆ ಆವರಣದಲ್ಲಿ ಹಾಗೂ ದಿನಾಂಕ 17.09.2014ರಂದು ಬೆಳಿಗ್ಗೆ 09.30ಕ್ಕೆ ಡಾ|| ಶ್ರೀ ಶಿವರಾತ್ರಿ ರಾಜೇಂದ್ರ ಭವನ ಜೆಎಸ್‍ಎಸ್ ಹಳೇ ಆಸ್ಪತ್ರೆ ಆವರಣದಲ್ಲಿ ಭಾವಗೀತೆ, ಜನಪದ ಗೀತೆ, ದೇಶ ಭಕ್ತಿಗೀತೆ ಮತ್ತು ಏಕಪಾತ್ರಾಭಿನಯ ಸ್ಪರ್ಧೆಗಳು ನಡೆಯಲಿದೆ.
     ಆಸಕ್ತ ಹಿರಿಯ ನಾಗರಿಕರು ತಮ್ಮ ಹೆಸರನ್ನು ದಿನಾಂಕ 15.09.2014ರೊಳಗೆ ನೋಂದಾಯಿಸಿ ಕೊಳ್ಳಬೇಕಿದ್ದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ತಿಲಕ್ ನಗರ, ಮೈಸೂರು. ದೂರವಾಣಿ ಸ0ಖ್ಯೆ:0821-2490111 ಅಥವಾ  ಜೆಎಸ್‍ಎಸ್ ಹಿರಿಯ ನಾಗರಿಕರ ಸಹಾಯವಾಣಿ, ಜೆಎಸ್‍ಎಸ್ ಆಸ್ಪತ್ರೆ ಆವರಣ, ಮೈಸೂರು. ದೂರವಾಣಿ ಸಂಖ್ಯೆ:0821-2548253ನ್ನು ಸಂಪರ್ಕಿಸಬಹುದು.
     ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಾದವರನ್ನು ಇಲಾಖಾವತಿಯಿಂದ ರಾಜ್ಯ ಮಟ್ಟದ ಸ್ಪರ್ಧೆಗೆ ಕಳುಹಿಸಿ ಕೊಡಲಾಗುವುದು ಹಾಗೂ ಹಿರಿಯ ನಾಗರಿಕರ ದಿನಾಚರಣೆಯಂದು ಬಹುಮಾನಗಳನ್ನು ನೀಡಲಾಗುವುದು.
ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
    ಮೈಸೂರು,ಸೆ.12.ಮೈಸೂರು ಜಿಲ್ಲೆಯ ಡಿ.ಎಂ.ಜಿ. ಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕಾಗಿ 2014-15ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಿದೆ.
   ಪ್ರವೇಶ ಪರೀಕ್ಷೆಯು 2015 ಫೆಬ್ರವರಿ 7 ರಂದು  ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.
   ಆಸಕ್ತರು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 31 ರೊಳಗಾಗಿ  ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2905068ನ್ನು ಸಂಪರ್ಕಿಸಬಹುದು. 


ಸೆ. 17 ರಂದು ಕೃಷ್ಣ ಜಯಂತಿ
     ಮೈಸೂರು,ಸೆ.12.ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ನಂಜರಾಜಬಹುದ್ದೂರ್ ಛತ್ರದಲ್ಲಿ ಕೃಷ್ಣಜಯಂತಿ ಆಚರಿಸಲಾಗುವುದು. ಇದೇ ಆವರಣದಲ್ಲಿ ಜಯಂತಿಯ ಅಂಗವಾಗಿ ಮಧ್ಯಾಹ್ನ 11-30ಕ್ಕೆ  ಮೊಸರು ಮಡಿಕೆ ಒಡೆಯುವ ಆಟವನ್ನು ಆಯೋಜಿಸಲಾಗಿದೆ.
     ಚಿತ್ರದುರ್ಗ ಜಿಲ್ಲೆಯ ಯಾದವ್ ಮಠದ  ಶ್ರೀ ಶ್ರೀ ಶ್ರೀ ಕೃಷ್ಣಯಾದವಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸಿ ಕೃಷ್ಣ ವಿಗ್ರಹಕ್ಕೆ ಪುಷ್ಪ ನಮನ ಮಾಡುವರು. ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು. 
    ಲೋಕೋಪಯೋಗಿ ಸಚಿವ ಡಾ| ಹೆಚ್.ಸಿ. ಮಹದೇವಪ್ಪ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಎನ್.ಎಂ.ರಾಜೇಶ್ವರಿ ಸೋಮು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಡಾ| ಪುಷ್ಪಾವತಿ ಅಮರನಾಥ್,  ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ್, ಪ್ರತಾಪ ಸಿಂಹ, ಸಿ.ಎಸ್. ಪುಟ್ಟರಾಜು,  ವಿಧಾನಸಭಾ ಸದಸ್ಯರಾದ ತನ್ವೀರ್ ಸೇಠ್, ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಕೆ.ವೆಂಕಟೇಶ್, ಸಾ.ರಾ.ಮಹೇಶ್, ಹೆಚ್.ಪಿ. ಮಂಜುನಾಥ್, ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಸಿ.ಹೆಚ್.ವಿಜಯಶಂಕರ್, ಗೋ. ಮಧುಸೂದನ್, ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್. ಧರ್ಮಸೇನ,  ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ವಿ.ಶೈಲೇಂದ್ರ,  ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ಮೈಸೂರು ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್ ಹಾಗೂ ಉಪಾಧ್ಯಕ್ಷೆ ಲೋಕಮಣಿ ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
    ಅಂದು ಬೆಳಿಗ್ಗೆ 9-30ಕ್ಕೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದ್ದು, ಮೆರವಣಿಗೆಯು ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಕೆ.ಆರ್.ವೃತ್ತ, ಡಿ.ದೇವರಾಜ ಅರಸು ರಸ್ತೆ, ವಿನೋಬಾ ರಸ್ತೆ ಮೂಲಕ ನಂಜರಾಜ ಬಹದ್ದೂರು ಛತ್ರ ತಲುಪಲಿದೆ.
ಏರ್‍ಮನ್ ಹುದ್ದೆಗೆ ಅರ್ಜಿ ಆಹ್ವಾನ
     ಮೈಸೂರು,ಸೆ.12.ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಏರ್‍ಮನ್ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     1995 ಆಗಸ್ಟ್ 1 ರಿಂದ 1998 ನವೆಂಬರ್  30 ರೊಳಗೆ ಜನಿಸಿದವರು, ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ/ 3 ವರ್ಷದ ಡಿಪ್ಲೊಮೋದಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸೆಪ್ಟೆಂಬರ್ 22 ರೊಳಗೆ ದ ಪ್ರೆಸಿಡೆಂಡ್, ಸೆಂಟ್ರಲ್ ಏರ್‍ಮೆನ್ ಸೆಲೆಕ್ಷನ್ ಬೋರ್ಡ್, ಪೋಸ್ಟ್ ಬಾಕ್ಸ್ ನಂ.11807, ನ್ಯೂ ದೆಹಲಿ-110010 ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ತಿತಿತಿ.iಟಿಜiಚಿಟಿಚಿiಡಿಜಿoಡಿಛಿe.ಟಿiಛಿ.iಟಿನ್ನು ಅಥವಾ ನಂ.7 ಏರ್‍ಮೆನ್ ಸೆಲೆಕ್ಷನ್ ಸೆಂಟರ್, ನಂ.1 ಕಬ್ಬನ್ ರೋಡ್, ಬೆಂಗಳೂರು, ದೂ.ಸಂ. 080-25592199 ಇವರನ್ನು ಸಂಪರ್ಕಿಸುವುದು.
ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
      ಮೈಸೂರು,ಸೆ.12.ಮೈಸೂರು ನಗರದ ಗಂಗೋತ್ರಿ ಬಡಾವಣೆಯಲ್ಲಿರುವ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಕುವೆಂಪುನಗರದಲ್ಲಿರುವ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
      ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನಿಲಯಪಾಲಕರಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 25 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸುವುದು.
     ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ 216, 2ನೇ ಮಹಡಿ ಮಿನಿವಿಧಾನಸೌಧ, ನಜûರ್‍ಬಾದ್ ಮೈಸೂರು ಇಲ್ಲಿ ಸಂಪರ್ಕಿಸಬಹುದು.
ಮರು ಮೌಲ್ಯಮಾಪನ ಪರೀಕ್ಷಾ  ಫಲಿತಾಂಶ ಪ್ರಕಟ
    ಮೈಸೂರು,ಸೆ.12.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಏಪ್ರಿಲ್/ಮೇ 2014ರಲ್ಲಿ ನಡೆದ ಬಿ.ಎ./ಬಿ.ಕಾಂ ಮರು ಮೌಲ್ಯಮಾಪನ ಪರೀಕ್ಷಾ  ಫಲಿತಾಂಶವನ್ನು ತಿತಿತಿ.ಞsoumಥಿsoಡಿe.eಜu.iಟಿ ನಲ್ಲಿ ಪ್ರಕಟಿಸಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಸೆಪ್ಟೆಂಬರ್ 15 ರೊಳಗಾಗಿ ದಂಡ ಶುಲ್ಕವಿಲ್ಲದೆ. ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು.
    ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2515169, 2519942ನ್ನು ಸಂಪರ್ಕಿಸಬಹುದು.
10ನೇ ಕನ್ನಡ ವಿಜ್ಞಾನ ಸಮ್ಮೇಳನ
    ಮೈಸೂರು,ಸೆ.12.ಮೈಸೂರು ವಿಶ್ವವಿದ್ಯಾನಿಲಯ  ಹಾಗೂ ಸ್ವದೇಶಿ ವಿಜ್ಞಾನ ಆಂದೋಲನದ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10-30 ಗಂಟೆಗೆ ಕ್ರಾಫರ್ಡ್ ಹಾಲ್‍ನಲ್ಲಿ 10ನೇ ಕನ್ನಡ ವಿಜ್ಞಾನ ಸಮ್ಮೇಳನ ನಡೆಯಲಿದೆ.
   ಯೋಜನೆ ಹಾಗೂ ಸಾಂಖ್ಯಿಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೈಸೂರು ಕುಲಪತಿ ರಂಗಪ್ಪ ಅವರು ಅಧ್ಯಕ್ಷತೆ ವಹಿಸುವರು.

ಪುಸ್ತಕ ಆಹ್ವಾನ
     ಮೈಸೂರು,ಸೆ.12.2014ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ, ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ/ಆಂಗ್ಲ/ಇತರೆ ಭಾರತೀಯ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕ, ಲೇಖಕ ಪ್ರಕಾಶಕರಿಂದ ಪುಸ್ತಕ ಆಹ್ವಾನಿಸಿದೆ. ವಿವರಗಳಿಗೆ ಸರಸ್ವತಿಪುರಂನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ದೂರವಾಣಿ ಸಂಖ್ಯೆ 0821-2425875 ಅಥವಾ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ರವರ ಕಛೇರಿಯನ್ನು ಸಂಪರ್ಕಿಸಲು ಕೋರಿದೆ.

ಪ್ರಾಜೆಕ್ಟ್ ಕಡೆಗೆ ಪಯಣ ಕುರಿತು ಕಾರ್ಯಾಗಾರ
    ಮೈಸೂರು,ಸೆ.12.ಮೈಸೂರಿನ ’ಯೋº‘ýú ಸಂಸ್ಥೆಯಲ್ಲಿ  ಡಿಪ್ಲಮೊ, ಇಂಜಿನಿಯರಿಂಗ್ ಮತ್ತು ಸ್ನಾಥಕೋತ್ತರ ಪದವಿಯ ಕಡೆಯ ಸೆಮಿಸ್ಟರ್À  ಅಭ್ಯರ್ಥಿಗಳಿಗೆ   ದಿನಾಂಕ:14-09-2014 ರಂದು ಉಚಿತ “ಪ್ರಾಜೆಕ್ಟ್ ಕಡೆಗೆ ಪಯಣ” (ಎouಡಿಟಿeಥಿ oಜಿ Pಡಿoರಿeಛಿಣ)  ದ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
      „ೈÐಕ್ತರು ಕಿಯೋನಿಕ್ಸ್ ಯುವ.ಕಾಂ., # 47/ಡಿ. ಎಂ. ಬ್ಲಾಕ್, 2ನೇ ಹಂತ, ಕುವೆಂಪುನಗರ, ಒob: 9880622747   ಇಲ್ಲಿ ಹೆಸರು ನೊಂದಾಯಿಸಿಕೊಳ್ಳುವುದು.

No comments:

Post a Comment