Wednesday 1 October 2014

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 145ನೇ ಜನ್ಮ ದಿನಾಚರಣೆ
    ಮಂಡ್ಯ,sಆ.1.ಜಿಲ್ಲಾಡಳಿತ, ಮಂಡ್ಯ, ಜಿಲ್ಲಾ ಪಂಚಾಯತ್,ಮಂಡ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನೆಹರು ಯುವ ಕೇಂದ್ರ ಇವರ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 145ನೇ ಜನ್ಮ ದಿನಾಚರಣೆ ಹಾಗೂ ಮಾಜಿ ಪ್ರಧಾನಿ ದಿ|| ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಆಕ್ಟೋಬರ್ 2ರಂದು ಬೆಳಿಗ್ಗೆ 9ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಯುವಜನ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ,ಮಂಡ್ಯ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 145ನೇ ಜನ್ಮ ದಿನಾಚರಣೆ
ನೆಹರು ಯುವ ಕೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ, ಸರ್ಕಾರಿ ಪದವಿ ಪೂರ್ವ ಕಾಲೇಜು, ರಾ.ಸೆ.ಯೋ.ಕೊಡಿಯಾಲ ಹಾಗೂ ನವ ಕರ್ನಾಟಕ ಯುವ ಸಂಘ (ರಿ), ವೈ. ಯರಹಳ್ಳಿ ಇವರ ಸಹಯೋಗದಲ್ಲಿ ಅಕ್ಟೋಬರ್ 2 ರಂದು ಬೆಳಿಗ್ಗೆ 9.00 ಗಂಟೆಗೆ ಕೊಡಿಯಾಲದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 145ನೇ ಜನ್ಮ ದಿನಾಚರಣೆ ಹಾಗೂ ಮಾಜಿ ಪ್ರಧಾನಿ ದಿ|| ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.  ಮೈಸೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ಕಾರ್ಯಕ್ರಮ ಅಧಿಕಾರಿ ಸಿ.ಆರ್.ದಿನೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊಡಿಯಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಆರ್. ಪುಟ್ಟಸ್ವಾಮಿ ಅವರು ಅಧ್ಯಕ್ಷತೆ ವಹಿಸುವರು.
                               ಅರ್ಜಿ ಆಹ್ವಾನ
2014-15ನೇ ಸಾಲಿಗೆ ಮಂಡ್ಯ ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಪ್ರವರ್ಗ-1, 2ಎ, 3ಎ & 3ಬಿ ಅಭ್ಯರ್ಥಿಗಳಿಗೆ   ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಬಿ.ಎಸ್.ಸಿ ನರ್ಸಿಂಗ್, ಜಿ.ಎನ್.ಎಂ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ (ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ) ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ವಿವಿಧ ಭತ್ಯೆಗಳ ಪಾವತಿಗಾಗಿ ಅರ್ಹ ನವೀಕರಣ ಮತ್ತು ಹೊಸ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿ.ಎಸ್.ಸಿ ನರ್ಸಿಂಗ್ ಹಾಗೂ ಜಿ.ಎನ್.ಎಂ ನರ್ಸಿಂಗ್‍ಗೆ 17 ರಿಂದ 35 ವರ್ಷ  ವಯೋಮಿತಿ ಮತ್ತು ಪ್ಯಾರಾಮೆಡಿಕಲ್ ಕೋರ್ಸ್‍ಗೆ 17 ರಿಂದ 25 ವರ್ಷ ವಯೋಮಿತಿ ಇರಬೇಕು.  ತಂದೆ ತಾಯಿ/ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ ರೂ. 2.50 ಲಕ್ಷ ಪ್ರವರ್ಗ 2ಎ, 3ಎ, ಮತ್ತು 3ಬಿ ಈ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ.1.00 ಲಕ್ಷ ಮೀರಬಾರದು.
ನಿಗದಿತ ಅರ್ಜಿಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಂಡ್ಯ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 30 ರೊಳಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ  ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು (ದೂರವಾಣಿ ಸಂಖ್ಯೆ 08232-220835) ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
                      ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2014-15ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿನಾಯಿತಿ ಸೌಲಭ್ಯ ನೀಡಲಾಗುವುದು. ಹಿಂದುಳಿದ ಪ್ರವರ್ಗಗಳಾದ 2ಎ, 3ಎ, 3ಬಿ ಮತ್ತು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಸಮುದಾಯಗಳಿಗೆ ಕುಟುಂಬದ ವಾರ್ಷಿಕ ವರಮಾನ ಮಿತಿ 10 ಲಕ್ಷ  ರೂ. ಒಳಗಿರಬೇಕು.  ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 10 ಆಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು/ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳನ್ನು ಹಾಗೂ ಇಲಾಖೆಯ ವೆಬ್‍ಸೈಟ್ ಞಚಿಡಿeಠಿಚಿss.ಛಿgg.gov.iಟಿ  ಹಾಗೂ  ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ಸಂಪರ್ಕಿಸಬಹುದೆಂದು ಬೆಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.                                                    
               ವಿವರಣಾ ಪುಸ್ತಕಗಳನ್ನು ನೀಡುತ್ತಿರುವ ಬಗ್ಗೆ
ಕರ್ನಾಟಕ  ರಾಜ್ಯ  ಮುಕ್ತ  ವಿಶ್ವವಿದ್ಯಾನಿಲಯದ  ಮಂಡ್ಯ ಪ್ರಾದೇಶಿಕ ಕೇಂದ್ರದಲ್ಲಿ 200ರೂದಂಡ ಶುಲ್ಕದೊಂದಿಗೆ ಪ್ರಥಮ ಬಿ.ಎ/ಬಿ.ಕಾಂ ಪ್ರವೇಶಾತಿಗೆ ದಿ:16-10-2014 ಹಾಗೂ ಪ್ರಥಮ  ಎಂ.ಎ/ಎಂ.ಕಾಂ ಪ್ರವೇಶಾತಿಗೆ ದಿ:31-10-2014  ಕಡೆಯ ದಿನಾಂಕವಾಗಿದೆ. ಬಿ.ಎಲ್.ಐ.ಸಿ,  ಎಂ.ಎಲ್.ಐ.ಸಿ,  ಎಲ್.ಎಲ್.ಎಮ್, ಎಂ.ಎಸ್.ಸಿ, ಡಿಪ್ಲೊಮ,/ಸರ್ಟಿಫಿಕೇಟ್‍ಬಿ.ಎಡ್.ಸ್ವೆಷಲ್ ಗೆ ವಿವರಣಾ ಪುಸ್ತಕಗಳು ದೊರೆಯುತ್ತವೆ.ಹೆಚ್ಚಿನ ವಿವರಗಳಿಗಾಗಿ ಮಂಡ್ಯ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ: 08232–229555.

No comments:

Post a Comment