Thursday 2 October 2014

ಗಾಂಧಿ ಜಯಂತಿ: ಅರ್ಥಪೂರ್ಣ ಆಚರಿಣೆ
      ಮೈಸೂರು,ಅ.2. ಮೈಸೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ದಸರಾ ಚಲನಚಿತ್ರೋತ್ಸವ ಸಹಯೋಗದಲ್ಲಿ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
     ರಘುಲೀಲಾ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆಗಳನ್ನು ಆಯೋಜಿಸಲಾಗಿತ್ತು.  ರಾಷ್ಟ್ರಪಿತ ಮಹಾತ್ಮ ಗಾಂಧಿ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಚಾರ ಇಲಾಖೆಯ ಚಲನಚಿತ್ರ ಶಾಖೆಯಿಂದ ಹೊರತರಲಾದ ಗ್ಲಿಂಪ್ಸಸ್ ಆಫ್ ಗಾಂಧಿ ಎಂಬ ಸಾಕ್ಷ್ಯಚಿತ್ರವನ್ನು ಇದೇ ವೇಳೆ ಪ್ರದರ್ಶಿಸಲಾಯಿತು.
     ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ವೈ.ಸಿ.ರೇವಣ್ಣ ಅವರು ಮಹಾತ್ಮ ಗಾಂಧಿಜೀ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಜೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆಕಾಶವಾಣಿ ಕೃಷಿ ವಿಭಾಗದ ಅಧಿಕಾರಿ ಎನ್.ಕೆ.ಕೇಶವಮೂರ್ತಿ ಅವರು ಗಾಂಧಿ ಸ್ಮøತಿ ವಾಚಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಎ.ಆರ್.ಪ್ರಕಾಶ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

No comments:

Post a Comment