Saturday 28 February 2015

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನ*
ಮಂಡ್ಯ : ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿದ ಸಾಧಕರನ್ನು ನಗರದ ಪೊಲೀಸ್ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.*
ಇಂದು ಶಾಲೆಯಲ್ಲಿ ಜರುಗಿದ 2014-15ನೇ ಸಾಲಿನ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಪೋಷಕರ ಸಭೆ ಜರುಗಿತು.*
ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಯಲ್ಲಿಸಿ ಹೆಚ್.ಡಿ.ಚೌಡಯ್ಯ, ಕ್ರೀಡಾಕ್ಷೇತ್ರದಿಂದ ಪಿ.ಎಂ.ಸೋಮಶೇಖರ್, ಪತ್ರಿಕಾ ಛಾಯಾಗ್ರಾಹಕ ಹಾಗೂ ಜಿಲ್ಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕೆ.ವೇಣುಗೋಪಾಲ್, ಜಿ.ಎಸ್.ಶಿವರುದ್ರಪ್ಪ, ತಬಲನಾಣಿ ಸೇರಿದಂತೆ ಹಲವು ಗಣ್ಯರನ್ನು ಸನ್ಮಾನಿಸಲಾಯಿತು.*
ನಂತರ ಮಾತನಾಡಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಎಂ.ಸೋಮಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.*
ಕ್ರೀಡೆಯಲ್ಲಿ ಹೆಚ್ಚು ತೊಡಗಿಸುಕೊಂಡು ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಸಿಕೊಳ್ಳಬೇಕು.  ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಷ್ಟ್ರಕ್ಕೆ ಕೀರ್ತಿ ತರಬೇಕೆಂದು ಹೇಳಿದರು.*
ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ ಮೈಗೂಡಿಸಿಕೊಂಡು ಸಾಧನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.*
ಚಿಕ್ಕನಾಗೇಗೌಡ, ರುಸಿಯಾ ಸಾದತ್, ಖಾದರ್, ಶಿವಚಿದಂಬರ್, ರಾಜಶೇಖರ್, ಸೌಭಾಗ್ಯಮ್ಮ ಇತರರಿದ್ದಾರೆ.*

No comments:

Post a Comment