Wednesday 1 April 2015

ಮಂಡ್ಯ: ಪ್ರತಿಯೊಬ್ಬರೂ ಜೀವನದಲ್ಲಿ ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಂಡು ಗುರು-ಹಿರಿಯರಿಗೆ ಗೌರವ ಕೊಡುವ ಮೂಲಕ ಶಿವಕುಮಾರಸ್ವಾಮೀಜಿಗಳ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಯಕರ್ನಾಟಕ ಸಂಘಟನೆ ರಾಜ್ಯಉಪಾಧ್ಯಕ್ಷ ಎಸ್. ನಾರಾಯಣ್ ತಿಳಿಸಿದರು.
ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿರಿಗನ್ನಡ ವೇದಿಕೆ ವತಿಯಿಂದ ನಡೆದ ಡಾ. ಶ್ರೀ ಶಿವಕುಮಾರಸ್ವಾಮೀಜಿಯವರ 108ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಒಳ್ಳೆಯ ಕೆಲಸಗಳಿಗೆ ಕೈ ಜೋಡಿಸಬೇಕು. ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಾ. ಶಿವಕುಮಾರಸ್ವಾಮೀಜಿಯವರು ಅನ್ನದಾಸೋಹ, ಶೈಕ್ಷಣಿಕ ಕ್ರಾಂತಿಯನ್ನು ಮಾಡುವ ಮೂಲಕ ಲಕ್ಷಾಂತರ ಮಂದಿಗೆ ದಾರೀದೀಪವಾಗಿದ್ದಾರೆ. ಒಳ್ಳೆಯ ಕೆಲಸಗಳಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಪದ್ಮಭೂಷಣ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿಗಳು ಶ್ರೀಗಳ ಮುಡಿಗೇರಿವೆ. ಮುಂದಿನ ದಿನಗಳಲ್ಲಿ ಭಾರತ ರತ್ನ ಪ್ರಶಸ್ತಿಯನ್ನೂ ಕೇಂದ್ರ ಸರ್ಕಾರ ಅವರಿಗೆ ನೀಡುವ ಮೂಲಕ ಗೌರವ ಸಲ್ಲಿಸಬೇಕು. 108 ವಸಂತಗಳನ್ನು ಪೂರೈಸಿರುವ ಶ್ರೀಗಳು ಇನ್ನಷ್ಟು ವರ್ಷಗಳು ನಮ್ಮೊಡನಿದ್ದು ಸಾಮಾಜಿಕ ಕಾರ್ಯಗಳನ್ನು ಮಾಡಲು ಭಗವಂತನು ಅನುಗ್ರಹ ತೋರಲಿ ಎಂದು ಪ್ರಾರ್ಥಿಸಿದರು.
ಶ್ರೀಗಳ 108ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜಯಭಾರತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಜವರೇಗೌಡ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿದರು. ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಪೆÇೀತೇರ ಮಹದೇವು, ವಕೀಲ ಎಂ. ಗುರುಪ್ರಸಾದ್, ಮಹಿಳಾ ಜಿಲ್ಲಾಧ್ಯಕ್ಷೆ ಪದ್ಮಾ ಮೋಹನ್, ಮುಖ್ಯ ಶಿಕ್ಷಕ ಬಿ.ವಿ. ಶ್ರೀನಿವಾಸಮೂರ್ತಿ, ತಾಲೂಕು ಅಧ್ಯಕ್ಷೆ ಕಮಲಾರಾಜು, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಿರ್ಮಲಾ ರಘು, ಸಾಹಿತಿ ಎಂ.ಬಿ. ರಾಮೇಗೌಡ ಸಮಾರಂಭದಲ್ಲಿ ಭಾಗವಹಿಸಿದ್ದರು.
ನಂತರ ನಾಗಪ್ಪ ಮತ್ತು ತಂಡದವರಿಂದ ತತ್ವಪದ ಗಾಯನ ನಡೆಯಿತು.


ಮಂಡ್ಯ: ಇಲ್ಲಿನ ಲೋಕೋಪಯೋಗಿ ಇಲಾಖೆಯಲ್ಲಿ ಲೆಕ್ಕ ಪರಿಶೋಧಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶಂಕರ್ ಅವರನ್ನು ಕಾರ್ಯಪಾಲಕ ಅಭಿಯಂತರ ಶಂಕರ್ ಸನ್ಮಾನಿಸಿ ಬೀಳ್ಕೊಟ್ಟರು.
ನಂತರ ಮಾತನಾಡಿದ ಅವರು, ಸರ್ಕಾರಿ ಸೇವೆಯಲ್ಲಿ ನಿವೃತ್ತಿ ಸಹಜ. ಇದ್ದಂತಹ ಸಂದರ್ಭದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಬೇಕು. ಶಂಕರ್ ಅವರು ಕೆಲಸದಲ್ಲಿ ಕಠಿಣವಾಗಿ ನಿಷ್ಠೆಯಿಂದ ರಾತ್ರಿ ಎಷ್ಟೊತ್ತಾದರೂ ಅಂದಿನ ಕೆಲಸ ಕಾರ್ಯಗಳನ್ನು ಮುಗಿಸಿ ಹೋಗುತ್ತಿದ್ದರು. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಕೋರಿದರು.
ಸಹಾಯಕ ಕಾರ್ಯಪಾಲಕ ಅಭಿಯಂತರ ಮಾಧು, ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಎಂ. ಅಪ್ಪಾಜಪ್ಪ, ತಾಂತ್ರಿಕ ಸಹಾಯಕ ಮಹಾಲಿಂಗೇಗೌಡ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.


No comments:

Post a Comment