Wednesday 1 April 2015

ಏ.3ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಮಂಡ್ಯ: ಶ್ರೀ ವೆಂಕಟೇಶ್ವರ ಧ್ಯಾನಕೇಂದ್ರ ಹಾಗೂ ಅಭಿನವ ಭಾರತಿ ವಿದ್ಯಾಕೇಂದ್ರ, ಮೈಷುಗರ್ ಕಾರ್ಖಾನೆ, ಮೈಷುಗರ್ ಜೆಂಟ್ಸ್ ಕ್ಲಬ್, ಮಂಡ್ಯ ಮೈಷುಗರ್ ಕೋ-ಆಪರೇಟಿವ್ ಸೊಸೈಟಿ, ಮಂಡ್ಯ ಅಪೋಲೋ ಆಸ್ಪತ್ರೆ, ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ದಿವ್ಯದೃಷ್ಟಿ ಸಂಸ್ಥೆ ವತಿಯಿಂದ ಇದೇ ಏ.3ರಂದು ಬೆಳಿಗ್ಗೆ 9.30 ರಿಂದ 1.30ರವರೆಗೆ ನಗರದ ಮೈಷುಗರ್ ಆಸ್ಪತ್ರೆ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿನವ ಭಾರತಿ ವಿದ್ಯಾಕೇಂದ್ರದ ಸಂಸ್ಥಾಪಕ ಶ್ರೀ ಅನಂತಕುಮಾರ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ ಬೆಂಗಳೂರು ಹಾಗೂ ಮೈಸೂರಿನ ಹೆಸರಾಂತ ತಜ್ಞ ವೈದ್ಯರುಗಳಿಂದ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಸಕ್ಕರೆ ಖಾಯಿಲೆ, ಹೃದಯ ತಪಾಸಣೆ ಹಾಗೂ ಮೂಳೆಗೆ ಸಂಬಂಧಿಸಿದ ತಪಾಸಣೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಶಿವಮೂರ್ತಿ ಕೀಲಾರ, ಶಶಿಕುಮಾರ್, ಅಕ್ಷರಂ ವೆಂಕಟೇಶ್ ಸೇರಿದಂತೆ ಇನ್ನಿತರರಿದ್ದರು.


ದುದ್ದ ನಾಡಕಛೇರಿಯಲ್ಲಿ ಕಂಪ್ಯೂಟರ್ ಕಳವು
ಮಂಡ್ಯ: ತಾಲ್ಲೂಕಿನ ದುದ್ದ ಗ್ರಾಮದ ನಾಡಕಛೇರಿಯಲ್ಲಿ ಕಂಪ್ಯೂಟರ್, ಪ್ರಿಂಟರ್, ಯುಪಿಎಸ್ ಸೇರಿದಂತೆ ಇತರ ಪರಿಕರಗಳನ್ನು ಕಳವು ಮಾಡಿರುವ ಘಟನೆ ಕಳೆದ ರಾತ್ರಿ ಜರುಗಿದೆ.
ಶಿವಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

No comments:

Post a Comment