Tuesday 7 July 2015

 10 ರಂದು ನಗರ ಸಭೆ ಸಾಮಾನ್ಯ ಸಭೆ
       ನಗರಸಭೆ ಸಾಮಾನ್ಯ  ಸಭೆಯನ್ನು  ಜುಲೈ 10 ರಂದು ಬೆಳಿಗ್ಗೆ 11.00 ಗಂಟೆಗೆ ಮಂಡ್ಯ ನಗರಸಭಾ ಕಾರ್ಯಾಲಯದ ಶ್ರೀ ಧರಣಪ್ಪ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
              ಬ್ಯಾಂಕಿಂಗ್ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ  2015
 ಕರ್ನಾಟಕದಾದ್ಯಂತ  ಇರುವ  ಕಾವೇರಿ, ಪ್ರಗತಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕುಗಳಲ್ಲಿನ  ಗ್ರೂಪ್ ‘ಬಿ’ ಆಫೀಸ್ ಅಸಿಸ್ಟೆಂಟ್ಸ್ ಮತ್ತು   ಗ್ರೂಪ್ ‘ಎ’ ಆಫೀಸರ್ ಹುದ್ದೆಗಳನ್ನು  ಒಂದೇ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ‘ಆನ್‍ಲೈನ್’ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.ಈ ಪರೀಕ್ಷೆಯಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ , ಮೇಲಿನ ಗ್ರಾಮೀಣ ಬ್ಯಾಂಕುಗಳಲ್ಲಿನ   ಗ್ರೂಪ್ ‘ಬಿ’ ಆಫೀಸ್ ಅಸಿಸ್ಟೆಂಟ್ಸ್ ಮತ್ತು   ಗ್ರೂಪ್ ‘ಎ’ ಆಫೀಸರ್ ಹುದ್ದೆಗಳಿಗೆ ನೇರವಾಗಿ ಸಂದರ್ಶನಕ್ಕೆ ಅರ್ಹತೆ ಪಡೆಯಬಹುದು.  ಪ್ರತಿಯೊಂದು ಬ್ಯಾಂಕಿನ  ನೇಮಕಾತಿಗೆ ಪ್ರತ್ಯೇಕ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಹತೆ ದಿನಾಂಕ:1-07-2015 ಕ್ಕೆ ಯಾವುದಾದರೂ ಪದವಿ  ತೇರ್ಗಡೆ ಹೊಂದಿರಬೇಕು. ವಯೋಮಿತಿ ದಿನಾಂಕ:1-7-2015 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು.ಗರಿಷ್ಟ 28ವರ್ಷ ಮೀರಿರಬಾರದು. ಪರಿಶಿಷ್ಟಜಾತಿ/ಪಂಗಡ & ಓಬಿಸಿ (ಕೇಂದ್ರ) ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ   ಇರುತ್ತದೆ. ಅರ್ಜಿ ಸಲ್ಲಿಸುವ ವಿಧಾನ  ವೆಬ್ ಸೈಟ್ ತಿತಿತಿ.ibಠಿs.iಟಿ   ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೊನೆ ದಿನಾಂಕ: ಅರ್ಜಿ ಸಲ್ಲಿಸಲು 28-07-2015 ಆನ್‍ಲೈನ್ ಶುಲ್ಕ ಪಾವತಿಸಲು 28-07-2015.                           ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್ ಸೈಟ್ ತಿತಿತಿ.ibಠಿs.iಟಿ ನೋಡಿ  ಅಥವಾ  ಎ.ವೆಂಕಟೇಶಪ್ಪ, ಉಪ ಮುಖ್ಯಸ್ಥರು,ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು. ವಿಶ್ವವಿದ್ಯಾನಿಲಯ, ಮೈಸೂರು ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಿ. ದೂರವಾಣಿ- 0821-2516844/9449686641.

No comments:

Post a Comment