Sunday 1 November 2015

ಪತ್ರಕರ್ತ ನಜೀರ್ ಅಹಮದ್‍ಗೆ ರಾಜ್ಯೋತ್ಸವ ಪ್ರಶಸ್ತಿ
ಪಾಂಡವಪುರ : ಕಳೆದ 15 ವರ್ಷಗಳಿಂದ ಇಲ್ಲಿ ಪರ್ತಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ನಜೀರ್ ಅಹಮದ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವರಿಗೆ 60ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪಾಂಡವಪುರ ತಾಲ್ಲೂಕು ಆಡಳಿತದ ವತಿಯಿಂದ  ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನ.1 ರಂದು ಸಂಜೆ ನಡೆದ ವರ್ಣರಂಜಿತ ಸಾಂಸ್ಕøತಿಕ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ನಜೀರ್ ಅಹಮದ್, ಆಂದೋಲನ ವರದಿಗಾರ ಎಸ್.ನಾಗಸುಂದರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್, ದಸಂಸ ಮುಖಂಡರಾದ ಬಿ.ಪ್ರಕಾಶ್, ಅಂಕಯ್ಯ ಸೇರಿದಂತೆ ಹಲವರನ್ನು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಮಾತನಾಡಿ  ತಾಲ್ಲೂಕಿನಲ್ಲಿ ತಮ್ಮದೇ ಆದ ವ್ಯಾಪ್ತಿಯಲ್ಲಿ ವಿಶೇಷವಾಗಿ ಸಾಧನೆ ಮಾಡಿದವರನ್ನು ಸನ್ಮಾನಿಸುವುದರ ಮೂಲಕ ತಾಲ್ಲೂಕು ಆಡಳಿತ ಸಾರ್ವಜನಿಕರಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಒತ್ತಾಸೆಯಾಗಿದ್ದು ಮುಂದೆಯೂ ತಾಲ್ಲೂಕು ಆಡಳಿತ ಮುಂದುವರೆಸಲಿದೆ ಎಂದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮತ್ತು ಕನ್ನಡದಲ್ಲಿ ಹೆಚ್ಚು ಅಂಕಗಳಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೇ ಪೌರಕಾರ್ಮಿಕರಿಗೆ ಉಚಿತ ಸೈಕಲ್ ವಿತರಿಸಲಾಯಿತು.
ನಂತರ ನಟ ನಾಟಕಕಾರ ಮಂಡ್ಯ ರಮೇಶ್ ನಿರ್ದೇಶನದಲ್ಲಿ ಮೈಸೂರಿನ ನಟನಾ ತಂಡದವರಿಂದ ಚಾಮ ಚೆಲುವೆ ಜಾನಪದ ನಾಟಕ ಪ್ರದರ್ಶಿಸಲಾಯಿತು.
ತಹಸಿಲ್ದಾರ್ ಬಿ.ಶಂಕರಯ್ಯ, ಬಿಇಒ ಚಂದ್ರಶೇಖರ್, ಪುರಸಭೆ ಅಧ್ಯಕ್ಷ ಎಂ.ಗಿರೀಶ್, ತಾಲ್ಲೂಕು ಕಸಾಪ ಅಧ್ಯಕ್ಷ ಧನ್ಯಕುಮಾರ್, ಜಿ.ಪಂ.ಸದಸ್ಯ ಎ.ಎಲ್.ಕೆಂಪೂಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

No comments:

Post a Comment