Tuesday 6 September 2016

ಹೊಳಲು ಶ್ರೀಧರ್‍ಗೆ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ

 ಹೊಳಲು ಶ್ರೀಧರ್‍ಗೆ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ
    ಕರ್ನಾಟಕ ಸರ್ಕಾರ,ಸಾರ್ವಜನಿಕ ಶಿಕ್ಷಣ ಇಲಾಖೆ,ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಡಾ||ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ,ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ 2016 ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕøತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ತನ್ವೀರ್‍ಸೇಠ್ ಅವರು ಜಿಲ್ಲೆಯ ಬಸರಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹೊಳಲು ಶ್ರೀಧರ್ ಅವರಿಗೆ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಮಾಡಿದರು.
     ಹೊಳಲು ಶ್ರೀಧರ್ ಅವರು ತಾವು ಬೋಧಿಸುತ್ತಿರುವ ಕನ್ನಡ ವಿಷಯದಲ್ಲಿ ಉತ್ತಮ ಫಲಿತಾಂಶ ತಂದಿರುವುದಲ್ಲದೇ,ಶೈಕ್ಷಣಿಕ ತಂತ್ರಜ್ಞಾನದ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಕಲಿಕೆಗೆ ಒತ್ತು ನೀಡಿದ್ದಾರೆ.ಕಾಲೇಜಿನ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.ಇದಲ್ಲದೇ ಜಿಲ್ಲಾ ಕ.ಸಾ.ಪ,ಸಂಸ್ಕøತಿ ಸಂಘಟನೆ,ಜಿಲ್ಲಾ ಜಾಗೃತ ಅಂಕಣಕಾರರ ವೇದಿಕೆ,ಉಪನ್ಯಾಸಕರ ಸಂಘ ಮುಂತಾದ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಈಗಾಗಲೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ,ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರಾಗಿದ್ದು,ಹವ್ಯಾಸಿ ಪತ್ರಕರ್ತರಾಗಿಯೂ ಇವರ ಲೇಖನ,ವರದಿಗಳು,ಪದಬಂಧ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿವೆ.
ಅಭಿನಂದನೆ:ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದಿರುವ ಶ್ರೀಧರ್ ಅವರನ್ನು ಜಿಲ್ಲಾ ಪ.ಪೂ.ಶಿ.ಇಲಾಖೆ ಉಪನಿರ್ದೇಶಕರಾದ ಬಿ.ಎಂ.ಶ್ರೀಕಂಠಯ್ಯ, ಬಸರಾಳು ಕಾಲೇಜಿನ ಪ್ರಾಂಶುಪಾಲರಾದ ಚಂದ್ರೇಗೌಡ ಹಾಗೂ ಉಪನ್ಯಾಸಕ ವರ್ಗ ಜಿಲ್ಲಾ ಕ.ಸಾ.ಪ ಅಧ್ಯಕ್ಷ ರವಿಕುಮಾರ್ ಚಾಮಲಾಪುರ,ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹೆಚ್.ವಿ.ಜಯರಾಂ,ತೈಲೂರು ವೆಂಕಟಕೃಷ್ಣ ಸಂಸ್ಕøತಿ ಸಂಘಟನೆ ಅಧ್ಯಕ್ಷರಾದ ಕೆ.ಪ್ರಹ್ಲಾದರಾವ್,ಕಾರ್ಯದರ್ಶಿ ಎಂವಿ.ಧರಣೇಂದ್ರಯ್ಯ, , ಅಂಕಣಕಾರರ ವೇದಿಕೆಯ ಅಧ್ಯಕ್ಷ ಸಿದ್ದರಾಜು ಆಲಕೆರೆ, ತೂಬಿನಕೆರೆ ಲಿಂಗರಾಜು,ಅನಾರ್ಕಲಿ ಸಲೀಂ,ಮಂಡ್ಯ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪುಟ್ಟಲಿಂಗಯ್ಯ, ಮಂಡ್ಯ ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಹನುಮಂತಯ್ಯ,ಮಂಗಲ ಯೋಗೇಶ್,ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕøತೆ ಅನುಪಮಾ,ಸಾರಿಗೆ ಅಧಿಕಾರಿ ಸೋಮಶೇಖರ್ ಮುಂತಾದವರು ಅಭಿನಂದಿಸಿದ್ದಾರೆ.

No comments:

Post a Comment