Friday 30 September 2016

                               ದಸರಾ ಚಲನಚಿತ್ರೋತ್ಸವಕ್ಕೆ ತಾರೆಯರ ರಂಗಿನ ಜೊತೆ
                                 ಗಾನಯಾನ- ಕನ್ನಡ ಚಿತ್ರಗೀತೆಗಳ ಭಾವಯಾನ
       ಮೈಸೂರು.ಸೆ.29.-ಕನ್ನಡ ಚಲನಚಿತ್ರರಂಗದ ಸುಮಧುರ ಕನ್ನಡ ಚಲನಚಿತ್ರಗೀತೆಗಳ ಭಾವಯಾನ ‘ಗಾನಯಾನ’ ಕಾರ್ಯಕ್ರಮ ಅಕ್ಟೋಬರ್ 1 ರಂದು ಕಲಾಮಂದಿರದಲ್ಲಿ ನಡೆಯುವ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಗೂ ಮುನ್ನ  ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
     ದಸರಾ ಚಲನಚಿತ್ರೋತ್ಸವ ಸಮಿತಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ  ಉದಯೋನ್ಮುಖ ಗಾಯಕ, ಗಾಯಕಿಯರು ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ.
      ಕನ್ನಡ ಚಿತ್ರರಂಗದ ಇತಿಹಾಸವನ್ನು ಚಿತ್ರಗೀತೆಗಳ ಮೂಲಕ ಮೆಲುಕುಹಾಕುವ ಪ್ರಯತ್ನ ಇದಾಗಿದೆ. ವೃತ್ತಿ ರಂಗಭೂಮಿ ಹಿನ್ನೆಲೆಯ ಕನ್ನಡ ಚಲನಚಿತ್ರ ರಂಗ ಪೌರಾಣಿಕ ಚಿತ್ರಗಳಿಂದ ಆರಂಭಿಸಿ, ಸಾಮಾಜಿಕ ಚಿತ್ರಗಳಿಗೆ ಹೊರಳಿ, ಹೊಸ ಅಲೆಯ ಚಿತ್ರಗಳನ್ನು ನಿರ್ಮಿಸಿ ಇದೀಗ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮುಂದುವರಿಯುತ್ತಿದ್ದು, ಈ ಎಲ್ಲಾ ಕಾಲಘಟ್ಟಗಳನ್ನು ಗುರುತಿಸುವ ಪ್ರಯತ್ನವನ್ನು ಕಾರ್ಯಕ್ರಮದ ಮೂಲಕ ಮಾಡಲಾಗಿದೆ.
      ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಅಮೂಲ್ಯ ಕೊಡುಗೆ ನೀಡಿರುವ ಚಲನಚಿತ್ರ ಕಲಾವಿದರು, ತಂತ್ರಜ್ಞಾರು,  ಗೀತರಚನಕಾರರು, ಗಾಯಕರು, ನಿರ್ದೇಶಕರು ವಿವಿಧ ವಿಭಾಗಗಳಲ್ಲಿ ಪ್ರಮುಖರು ಕೊಡುಗೆಯನ್ನು ಸ್ಮರಿಸುವ ಯತ್ನವನ್ನು ಮಾಡಲಾಗಿದೆ.
         ಆಯ್ದ ಚಿತ್ರಗೀತೆಗಳನ್ನು ಪ್ರಸ್ತುತಪಡಿಸುತ್ತಲೇ ಚಿತ್ರರಂಗದ ಇತಿಹಾಸವನ್ನು ಹಾಗೂ ವಿವಿಧ ಕಾಲಘಟ್ಟಗಳಲ್ಲಿ ಕನ್ನಡ ಚಿಂತ್ರರಂಗದಲ್ಲಿ ಉಂಟಾದ ಬದಲಾವಣೆಗಳನ್ನು ಬಿಂಬಿಸಲಾಗುವುದು. ಹಾಡಿನ ಜತೆಗೆ ಆಯಾ ಕಾಲಘಟ್ಟದ ಪ್ರಮುಖ ಚಿತ್ರಗಳ ತುಣಕುಗಳನ್ನು ಪ್ರದರ್ಶಿಸಲಾಗುವುದು.
      ಮೈಸೂರಿನ ಹೆಸರಾಂತ ಸಂಗೀತ ಸಂಯೋಜಕರು ರಘುಲೀಲಾ ಸಂಗೀತ ಶಾಲೆಯ ಸುನೀತಾ ಚಂದ್ರಕುಮಾರ್ ಅವರು ಕಾರ್ಯಕ್ರಮದ ಸಮನ್ವಯ ನಿರ್ವಹಿಸುತ್ತಿದ್ದು,   ಸಿ ವಿಶ್ವನಾಥ್( ಮ್ಯಾಂಡೋಲೀನ್), ಷಣ್ಮುಗ (ಕೀಬೋರ್ಡ್), ವಿನ್‍ಸೆಂಟ್ (ರಿದಂಸ್ಯಾಟ್), ಕಿರಣ್ (ತಬಲ) ವಾದ್ಯ ಸಹಕಾರ ನೀಡುವರು.ಶ್ರೇಯ ಕೆ ಭಟ್ಟ,  ವಸುಧಾ ಶಾಸ್ತ್ರಿ, ನವನೀತ್ ಕೃಷ್ಣ, ಕಾರ್ತೀಕ ಹಾಗೂ ರಕ್ಷಿತಾ ಸುರೇಶ್ ಚಲನಚಿತ್ರಗೀತೆಗಳಿಗೆ ದನಿಯಾಗಲಿದ್ದಾರೆ.
      ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಚಲನಚಿತ್ರ ಕಲಾವಿದರಾದ ಭಾರತಿ ವಿಷ್ಣುವರ್ಧನ್, ಹಿರಿಯ ಚಲನಚಿತ್ರ ನಿರ್ದೇಶಕರಾದ ಎಸ್.ಕೆ. ಭಗವಾನ್, ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಹಿರಿಯ ಚಲನಚಿತ್ರ ಕಲಾವಿದರಾದ ಸುಧಾರಾಣಿ, ಚಲನಚಿತ್ರ ನಿರ್ದೇಶಕ ಪವನ್ ಕುಮಾರ್, ಚಲನಚಿತ್ರ ಕಲಾವಿದರಾದ ವಿಜಯ್ ಸೂರ್ಯ, ಚಲನಚಿತ್ರ ಕಲಾವಿದರಾದ ಕು|| ಮಯೂರಿ, ಕು|| ಕಾವ್ಯ ಶೆಟ್ಟಿ ಹಾಗೂ ಚಿತ್ರೋದ್ಯಮದ ಗಣ್ಯರು ಭಾಗವಹಿಸಿ ದಸರಾ ಚಲನಚಿತ್ರೋತ್ಸವಕ್ಕೆ ವಿಶೇಷ ರಂಗು ನೀಡಲಿದ್ದಾರೆ.
      ಅಕ್ಟೋಬರ್ 2 ರಿಂದ 6 ರವರೆಗೆ ಮೈಸೂರು ನಗರದ ಸ್ಕೈಲೈನ್, ಒಲಂಪಿಯಾ, ಡಿ.ಆರ್.ಸಿ., ಐನಾಕ್ಸ್, ಲಕ್ಷ್ಮೀ, ಹೆಚ್.ಡಿ.ಕೋಟೆಯ ಮಂಜುನಾಥ್, ಕೆ.ಆರ್.ನಗರದ ಗೌರಿಶಂಕರ, ನಂಜನಗೂಡು ಲಲಿತ, ಪಿರಿಯಾಪಟ್ಟಣದ ಮಹದೇಶ್ವರ, ಹುಣಸೂರಿನ ಲೀಲಾ ಹಾಗೂ ಟಿ.ನರಸೀಪುರದ ಭಗವಾನ್ ಚಲನಚಿತ್ರ ಮಂದಿರಗಳಲ್ಲಿ ಬೆಳಗಿನ ಪ್ರದರ್ಶನದಲ್ಲಿ ಪ್ರದರ್ಶಿಸಲಾಗುವುದು. ಪ್ರವೇಶ ದರ ನೆಲ ಅಂತಸ್ತಿಗೆ ರೂ. 10/-, ಬಾಲ್ಕನಿ ರೂ. 20/- ಹಾಗೂ ಮಲ್ಟಿಫ್ಲೆಕ್ಸ್‍ಗೆ ರೂ. 30/- ನಿಗಧಿಪಡಿಸಲಾಗಿದೆ.
    ಚಿತ್ರಮಂದಿರಗಳಲ್ಲಿ ಮಾಣಿಕ್ಯ, ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ರನ್ನ, ಇಷ್ಟಕಾಮ್ಯ, ಬಬ್ರುವಾಹನ, ಉಳಿದವರು ಕಂಡಂತೆ, ಜೂಮ್, ಬುಲ್ ಬುಲ್, ವಾಸ್ತುಪ್ರಕಾರ, ಕ್ರಾಂತೀ ವೀರಾ ಸಂಗೊಳ್ಳಿ ರಾಯಣ್ಣ, ದೇವರ ನಾಡಲ್ಲಿ, ಕಿರಗೂರಿನ ಗಯ್ಯಾಳಿಗಳು, ಗೋಭಿ ಬಣ್ಣ ಸಾಧಾರಣ ಮೈಕಟ್ಟು, ಯುಟರ್ನ್, ಫಸ್ಟ್ ರ್ಯಾಂಕ್ ರಾಜು, ತಿಥಿ, ಸಂತೆಯಲ್ಲಿ ನಿಂತ ಕಬೀರ, ರಂಗಿತರಂಗ, ಲಾಸ್ಟ್ ಬಸ್, ಪ್ರಿಯಾಂಕ, ನಾನು ಅವನಲ್ಲ ಅವಳು, ನಾನು ನನ್ನ ಕನಸು, ರಿಕ್ಕಿ, ಅಸ್ತಿತ್ವ, ಕೆಂಡಸಂಪಿಗೆ, ಶಿವಲಿಂಗ, ಕನ್ನಡದ ಜನಪ್ರಿಯ ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು.
     ಅಕ್ಟೋಬರ್ 2 ರಿಂದ 8 ರವರೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ-ಪುರಸ್ಕಾರ ಪಡೆದ ಚಲನಚಿತ್ರಗಳ ಜೊತೆಗೆ ದೇಶ-ವಿದೇಶಗಳ ಅತ್ಯುತ್ತಮ ಹಾಗೂ ಜಾಗತಿಕ ಮನ್ನಣೆ ಪಡೆದ ಚಲನಚಿತ್ರ ಹಾಗೂ ಸಾಕ್ಷ್ಯಚಿತ್ರಗಳನ್ನು ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮತ್ತು ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಪ್ರದರ್ಶಿಸಲಾಗುವುದು. ಪ್ರವೇಶ ಉಚಿತವಾಗಿರುತ್ತದೆ.
      ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮತ್ತು ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಆಗಸಿ ಪಾರ್ಲರ್, ಅತ್ತಿ ಹಣ್ಣು ಮತ್ತು ಕಣಜ, ಚುರುಕುಮಾರ, ಗಾಳಿ ಬೀಜ, ಮುನ್ಸೀಫಾ, ಪ್ರಕೃತಿ, ಪುಟ ತಿರುಗಿಸಿ ನೋಡಿ, ತಲ್ಲಣ, ತಿಥಿ ಹಾಗೂ ವಿದಾಯ ಕನ್ನಡ ಚಲನಚಿತ್ರಗಳು ಪನೋರಮಾ ಚಿತ್ರಗಳಾದ ಆಂಖೋ ದೇಖಿ, ಸಿನಿಮಾ ವಾಲಾ, ಕೋರ್ಟ್ ಏಕ್ ಹಜಾರ್ ಜಿ ನೋಟ್, ಎಲಿಝಬೆತ್ ಏಕಾದಶಿ, ಜಲ್, ಕುತ್ಯಾರ್ ಕಾಲ್ವಾತ್ ಗುರ್ಲಿ, ಕಿಲ್ಲ, ಕೋ ಯಾದ್, ಮಸಾನ್, ನಚೋಮ್-ಇ ಕುಂಪಸರ್, ರಾಮ್‍ಸಿಂಗ್ ಚಾರ್ಲಿ ಹಾಗೂ ದಿ ಹೆಡ್ ಹಂಟರ್ ಪ್ರದರ್ಶಿಸಲಾಗುವುದು.
     ವಿಶ್ವ ಚಿತ್ರಗಳಾದ 35 ರಮ್ಸ್, ಲಾರೆನ್ಸ್ ಎನಿವೇಸ್, ಮ್ಯಾಕ್‍ಬೆತ್, ಮಾನ್ ಅಂಕಲ್, ಮೈ ವಡ್ರ್ಸ್, ಮೈ ಲೈಸ್-ಮೈ ಲವ್, ಓ ಬಾಯ್, ಪೇರೆಂಟ್ಸ್, ಪೇಟರ್, ಪೋಲ್, ಸೋಲ್ ಕಿಚನ್, ಟಾಮ್ ಬಾಯ್, ಟೇಸ್ಟ್ ಆಫ್ ಚೆರ್ರಿ ಹಾಗೂ ದಿ ವಿಂಡ್ ವಿಲ್ ಕ್ಯಾರಿ ಅಸ್ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು. ಮುಂಬೈ ಇಂಟರ್ ನ್ಯಾಷನಲ್ ಚಲನಚಿತ್ರಗಳಾ ಅಗ್ಲಿ ಬಾರ್, ಆಲೈಸ್/ಕಮಲಾಕ್ಷಿ, ಛಾಯಾ, ಫೇಮಸ್ ಇನ್ ಅಹ್ಮದಾಬಾದ್, ಫಿಶರ್ ವುಮನ್ ಅಂಡ್ ಟುಕ್ ಟುಕ್, ಗೋಲ್ಡನ್ ಬರ್ಡ್, ಲೆಟರ್ ಫ್ರಂ ಕಾರ್ಲೈ, ನಪ್ಯಿಯಲ್ ಮೆಮೋರಿಸ್, ರೋಟರಿ ಲೈಫೈನ್, ಸೋಲೋ ಫಿನಾಲೆ, ಟಾಕಿಂಗ್ ವಾಲ್ಸ್, ದ ಲಾಸ್ಟ್ ಮ್ಯಾಂಗೊ ಬಿಫೋರ್ ದ ಮಾನ್ಸೂನ್, ಪಾರ್ ಪ್ರೌಂ ಹೋಂ, ಫೈರ್‍ಪೈಸ್ ಇನ್ ದಿ ಎಬಿಸ್, ಮೈ ನೇಮ್ ಇಸ್ ಸಾಲ್ಟ್, ಪುಮ್ ಶಾಂಗ್, ಪ್ಲೆಸಿಬೊ, ರಸನ್ ಪಿಯ, ದಿ ಇಮ್ಮಾರ್ಟಲ್ಸ್ ಹಾಗೂ ದಿ ಕ್ವೀನ್ ಆಫ್ ಸೈಲೆನ್ಸ್ ಪ್ರದರ್ಶಿಸಲಾಗುವುದು.
     ಉದ್ಘಾಟನಾ ಹಾಗೂ ಚಲನಚಿತ್ರೋತ್ಸವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಸರಾ ಚಲನಚಿತ್ರೋತ್ಸವ ಸಮಿತಿಯ ಉಪವಿಶೇಷಧಿಕಾರಿ, ಕಾರ್ಯಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕೋರಿದ್ದಾರೆ.   
ದಸರಾ ದರ್ಶನ ಉದ್ಘಾಟನಾ  ಸಮಾರಂಭ
      ಮೈಸೂರು.ಸೆ.29.-ದಸರಾ ಮಹೋತ್ಸವ-2016 ದಸರಾ ದರ್ಶನ ಉಪಸಮಿತಿಯ ಕಾರ್ಯಕ್ರಮದ  ಉದ್ಘಾಟನಾ  ಸಮಾರಂಭ ದಿನಾಂಕ : 02.10.2016 ರಂದು ಬೆಳಿಗ್ಗೆ 7.30 ಗಂಟೆಗೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ನಡೆಯಲಿದೆ.
      ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ. ಮಹದೇವಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಡಿ. ರಂದೀಪ್, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 1 ರಂದು ದಸರಾ ಮಹೋತ್ಸವ ಉದ್ಘಾಟನೆ
      ಮೈಸೂರು.ಸೆ.29. ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಡನೆ ದಸರಾ ಮಹೋತ್ಸವ 2016 ರನ್ನು ಅಕ್ಟೋಬರ್ 1 ರಂದು ಬೆಳಿಗ್ಗೆ 11-40 ರಿಂದ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಖ್ಯಾತ ಸಾಹಿತಿ ನಾಡೋಜ ಚನ್ನವೀರ ಕಣವಿ ಅವರು ಉದ್ಘಾಟಿಸಲಿದ್ದಾರೆ.
      ಮುಖ್ಯಮಂತ್ರಿ ಸಿದ್ಧರಾಮಯ್ಯ, ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಸಹಕಾರ ಹಾಗೂ ಸಕ್ಕರೆ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್,ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರುಗಳು ಭಾಗವಹಿಸಲಿದ್ದು, ಶಾಸಕ ಜಿ.ಟಿ. ದೇವೇಗೌಡ ಅವರು ಅಧ್ಯಕ್ಷತೆ ವಹಿಸುವರು.
   ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ ಅಕ್ಟೋರಬರ್ 1 ರಂದು ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಆಯೋಜಿಸಲಾಗಿದೆ.
   ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸುವರು.
   ಕರ್ನಾಟಕ ವಿಧಾನಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಸಹಕಾರ ಹಾಗೂ ಸಕ್ಕರೆ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್,ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
  ಅಕ್ಟೋಬರ್ 1 ರಂದು ಮಧ್ಯಾಹ್ನ 12-30 ಗಂಟೆಗೆ ಚಾಮುಂಡಿಬೆಟ್ಟ ಗೃಹ ಸಚಿವರಾದ ಡಾ|| ಜಿ. ಪರಮೇಶ್ವರ್ ಅವರು ಪೊಲೀಸ್ ಸಹಾಯವಾಣಿ ಕೇಂದ್ರದ ಉದ್ಘಾಟಿಸುವರು. ಮಧ್ಯಾಹ್ನ 12-40 ಗಂಟೆಗೆ ಚಾಮುಂಡೇಶ್ವರಿ ದೇವಾಲಯದ ಎದುರಿನಲ್ಲಿ ದಸರಾ ಕ್ರೀಡಾ ಜ್ಯೋತಿಯನ್ನು ಯುವ ಸಬಲೀಕರಣ ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸುವರು. ಅಂತರÀರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಕು|| ಅಶ್ವಿನಿ ಪೊನ್ನಪ್ಪ ಅವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ದಸರಾ ಚಲನಚಿತ್ರೋತ್ಸವವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ, ಮಧ್ಯಾಹ್ನ 1-15 ಗಂಟೆಗೆ ವರುಣಾ ಕೆರೆ ಆವರಣದಲ್ಲಿ ಸಾಹಸ ಕ್ರೀಡೋತ್ಸವವನ್ನು ಯುವ ಸಬಲೀಕರಣ ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸುವರು. ಮಧ್ಯಾಹ್ನ 1-15 ಗಂಟೆಗೆ ಜೆ.ಕೆ. ಮೈದಾನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಹಾಗೂ ಮಧ್ಯಾಹ್ನ 1-30 ಗಂಟೆಗೆ ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಅವರು ಉದ್ಘಾಟಿಸುವರು.
  ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ. ಖಾದರ್ ಅವರು ಮಧ್ಯಾಹ್ನ 1-30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರವಿರುವ ಸ್ಕೌಟ್ಸ್ ಮತ್ತು ಗೈಡ್ ಆವರಣದಲ್ಲಿ ಆಹಾರ ಮೇಳ ಉದ್ಘಾಟಿಸುವರು. ಮಧ್ಯಾಹ್ನ 3 ಗಂಟೆಗೆ ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್ ಅವರು ಮೈಸೂರಿನ ದೇವರಾಜಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸುವರು. ಅರಣ್ಯ, ಪರಿಸರ ಜೀವಶಾಸ್ತ್ರ ಸಚಿವ ಬಿ. ರಮಾನಾಥ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
 ಮಧ್ಯಾಹ್ನ 3-30 ಗಂಟೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಅವರು ಕಾಡಾ ಕಚೇರಿ ಆವರಣದಲ್ಲಿ ದಸರಾ ಪುಸ್ತಕ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.   
  ಸಂಜೆ 4 ಗಂಟೆಗೆ ಯುವ ಸಬಲೀಕರಣ ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್, ಅಂತರರಾಷ್ಟ್ರೀಯ ಪ್ಯಾರಾ ಅಥ್ಲಿಟ್ ದೀಪಾ ಮಲ್ಲಿಕ್, ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಕು|| ಅಶ್ವಿನಿ ಪೊನ್ನಪ್ಪ ಅವರುಗಳು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಕ್ರೀಡಾಕೂಟ ಉದ್ಘಾಟಿಸುವರು.
  ಸಂಜೆ 4 ಗಂಟೆಗೆ ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಪ್ಪಣ ಪಾರ್ಕ್(ನಿಶಾದ್‍ಬಾಗ್) ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು.
  ಸಂಜೆ 4 ಗಂಟೆಗೆ ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್. ಮಹದೇವಪ್ರಸಾದ್ ಅವರು ರಂಗಾಯಣದಲ್ಲಿ ರಂಗಾಯಣ ನಾಟಕೋತ್ಸವಕ್ಕೆ ಚಾಲನೆ ನೀಡುವರು.
  ಸಂಜೆ 4-30 ಗಂಟೆಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ಕೈಗಾರಿಕೆ ಸಚಿವ ಜಾರಕಿಹೊಳಿ ರಮೇಶ್ ಲಕ್ಷ್ಮಣರಾವ್ ಅವರು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ವಸ್ತುಪ್ರದರ್ಶನ ಉದ್ಘಾಟಿಸುವರು.
  ಸಂಜೆ 6-30 ಗಂಟೆಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಸಯ್ಯಾಜಿರಾವ್ ರಸ್ತೆಯಲ್ಲಿ ಹಸಿರು ಮಂಟಪ ದಸರಾ ದೀಪಾಲಂಕಾರ ಉದ್ಘಾಟಿಸುವರು.
ದಸರಾ ಮಹೋತ್ಸವ:  ಅ. 30 ರಂದು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
       ಮೈಸೂರು.ಸೆ.29.ವಿಶ್ವವಿಖ್ಯಾತ ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಲು ಜನ ಜಾಗೃತಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸುವ ದೃಷ್ಟಿಯಿಂದ ವಿವಿಧ ಯೋಜನೆಗಳನ್ನು ದಸರಾ ವ್ಯವಸ್ಥೆ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಅಕ್ಟೋಬರ್ 30 ರಂದು ರಾತ್ರಿ 9-30 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ದಸರಾ ಸ್ವಚ್ಛತಾ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಚಾಲನೆ ನೀಡಲಾಗುವುದು.
      ದಸರಾ-2016 ರ ಸಂದರ್ಭದಲ್ಲಿ  13 ದಿನಗಳ ಅವಧಿಗೆ ಸ್ವಚ್ಛತೆ ಕಾರ್ಯ ನಿರ್ವಹಿಸಲು ಹೆಚ್ಚುವರಿಯಾಗಿ 280 ಕಾರ್ಮಿಕರನ್ನು ನೇಮಿಸಿಕೊಂಡು 280 ಮಂದಿಯನ್ನು 4 ಪ್ಯಾಕೇಜ್‍ಗಳಲ್ಲಿ ವಿಂಗಡಿಸಿ, ಪ್ರತಿ ಪ್ಯಾಕೇಜ್‍ನಲ್ಲಿ 70 ಜನರನ್ನು ನಿಯೋಜಿಸಲಾಗುವುದು ನಗರದ ಪ್ರಮುಖ ರಸ್ತೆಗಳನ್ನು ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ.
     ಮೈಸೂರಿನ ಪ್ರವಾಸಿ, ಧಾರ್ಮಿಕ ಹಾಗೂ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಾದ ಅರಮನೆ ಮತ್ತು ಪ್ರವಾಸೋದ್ಯಮ, ಸ್ಥಬ್ದಚಿತ್ರ ಮೆರವಣಿಗೆ, ಚಾಮುಂಡಿ ಬೆಟ್ಟ, ವ್ಯವಸ್ಥೆ ಮತ್ತು ಸ್ವಚ್ಛತೆ ಹಾಗೂ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ  ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಕ್ರಮವಹಿಸಲಾಗಿರುತ್ತದೆ.
     ನಾಡಹಬ್ಬದ ದಸರಾದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಸ್ವಚ್ಛತೆಯ ಜಾಗೃತಿ ಮೂಡಿಸುವ ದೃಷ್ಟಿಯಿಂದ ದಸರಾ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment