Friday 23 June 2017

ಕೃಷ್ಣರಾಜಪೇಟೆ.ಬಹುತೇಕ ಬಡ ಕುಟುಂಬಗಳು ವಾಸಿಸುತ್ತಿರುವ ಹೇಮಾವತಿ ಬಡಾವಣೆಗೆ ದಶಕಗಳಿಂದ ಪುರಸಭೆ ಮತ್ತು ಸರ್ಕಾರದ ವತಿಯಿಂದ ಯಾವುದೇ ಸೌಲಭ್ಯ ನೀಡದೇ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಬಿಟ್ಟು ತಕ್ಷಣ ಶೌಚಾಲಯ ನಿರ್ಮಾಣಕ್ಕೆ ನೆರವು, ಮನೆಗಳ ಖಾತೆ ಬದಲಾವಣೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಇಲ್ಲವಾದರೆ ಐನೂರಕ್ಕೂ ಹೆಚ್ಚು ಮಹಿಳೆಯರು ಪುರಸಭಾ ಕೆಛೇರಿ ಮುಂಭಾಗ ಅಮರಣಾಂತ ಉಪವಾಸದೊಂದಿಗೆ ಧರಣಿ ನಡೆಸಬೇಕಾಗುತ್ತದೆ ಎಂದು ಹೇಮಾವತಿ ಬಡಾವಣೆಯ ಮಹಿಳೆಯರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
 ಹೇಮಾವತಿ ಬಡಾವಣೆಯಲ್ಲಿ ಮಹಿಳೆಯರು ಪತ್ರಿಕಾ ಪ್ರತಿನಿಧಿಗಳನ್ನು ಬಡಾವಣೆಗೆ ಕರೆಸಿಕೊಂಡು ಅಲ್ಲಿನ ಸಮಸ್ಯಗಳ ಬಗ್ಗೆ ಖುದ್ದು ಪರಿಚಯಿಸಿ ಅಲ್ಲಿನ ನಿವಾಸಿಗಳು ನುಭವಿಸುತ್ತಿರುವ ನೋವನ್ನು ತೋಡಿಕೊಂಡು ನೀವಾದರು ನಮಗೆ ನ್ಯಾಯಾಕೊಡಿಸಿ ಎಂದು ಅಂಗಲಾಚಿ ತಮ್ಮ ಅಸಾಯಕತೆಯನ್ನು ತೋಡಿಕೊಂಡರು.
ಹೇಮಾವತಿ ಬಡಾವಣೆಯಲ್ಲಿ ಕೆಲವು ನಿವೇಶನಗಳನ್ನು ಅಕ್ರಮವಾಗಿ ವಿತರಣೆ ಮಾಡಿರುವ ಬಗ್ಗೆ ಎರಡು ದಶಕಗಳ ಹಿಂದೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಅಕ್ರಮ ನಡೆದಿರುವ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಈ ಬಡಾವಣೆಯಲ್ಲಿ ಯಾವುದೇ ಖಾತೆಗಳನ್ನು ಮಾಡಕೂಡದು, ಯಾವುದೇ ಮನೆಗಳನ್ನು ನಿರ್ಮಾಣ ಮಾಡಕೂಡದು ಎಂಬ ನಿಯಮಗಳನ್ನು ವಿಧಿಸಿ ಯಾಥಾ ಸ್ಥಿತಿ ಕಾಪಾಡುವಂತೆ ಆದೇಶಿಸಿತ್ತು. ಆದರೆ ದಶಕಗಳೇ ಕಳೆದರು ಪ್ರಕರಣ ಮುಕ್ತಾಯವಾಗಿಲ್ಲಾ. ಹಣ ಹೊಂದಿರುವವವರು ಲಂಚಾನೀಡಿ ನೂರಾರು ಮನೆಗಳನ್ನು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುವ ಜೊತೆಗೆ ನೂರಾರು ಮನೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.
ಬಡವರಾದ ಮನೆಗ ಮನೆ ನಿರ್ಮಾಣ ಮಾಡಲು ಸರ್ಕಾರದ ಯಾವುದೇ ಸವಲತ್ತುಗಳನ್ನು ನೀಡುತ್ತಿಲ್ಲಾ. ದೇಶದಲ್ಲಿ ಸ್ವಚ್ಛ ಭಾರತ್ ಎಂಬ ಯೋಜೆಯನ್ನು ಜಾರಿಗೆ ತಮದು ಪ್ರತಿಯೊಬ್ಬರೂ ಶೌಚಾಲಯ ನಿರ್ಮಾ ಮಾಡಿಕೊಳ್ಳಿ ನಾವುಹಣ ನೀಡುತ್ತೇವೆ ಎಂದು ಹೇಳುತ್ತಾರೆ ನಮ್ಮ ಬಡಾವಣೆಯವರು ಅರ್ಜಿಸಲ್ಲಿಸಿ ಹಣ ಬಿಡುಗಡೆ ಮಾಡಿ ಎಮದು ಮನವಿ ಸಲ್ಲಿಸಿದರೆ ನಿಮ್ಮ ಬಡಾವಣೆಯ ಪ್ರಕರಣ ಲೋಕಾಯುಕ್ತದಲ್ಲಿರುವುದರಿಂದ ಹಣ ನೀಡುವುದಿರಲಿ ನಿಮ್ಮ ಸ್ವಂತ ಹಣದಲ್ಲಿಯೂ ಯಾವುಧೇ ಕಾಮಗಾರಿ ಮಾಡಬೇಡಿ ಎಂದು ಬೆದರಿಕೆಯನ್ನು ಪುರಸಭಾ ಅಧಿಕಾರಿಗಳು ಹಾಕುತ್ತಿದ್ದಾರೆ. ಮುಂದಿನ ಒಂದು ವಾರದೊಳಗೆ ನಮ್ಮ ಬಡಾವಣೆಗೂ ಇತರ ಬಡಾವಣೆಗಳವಂತೆ ಮನೆ ನಿರ್ಮಾಣ ಮಾಡಿಕೊಳ್ಳಲು ಧನ ಸಹಾಯ ಮತ್ತು ಪರವಾನಿಗೆ ನೀಡಬೇಕು  ಆರ್ಥಿಕವಾಗಿ ಸಂಕಷ್ಠದಲ್ಲಿರುವ ಕುಟುಂಬಗಳ ನಿವೇಶನಗಳನ್ನು ಪರಬಾರೆ ಮಾಡಲು ಅನುಮತಿ ನೀಡಬೇಕು ಇಲ್ಲವಾದರೆ ನೂರಾರು ಮಹಿಳೆಯರು ಪುರಸಭಾ ಕಛೇರಿ ಮುಂಭಾಗ ಉಪವಾಸಧರಣಿ ನಡೆಸಬೇಕಾಗುತ್ತದೆ ಎಂದು ಮಹಿಳೆಯರು ಎಚ್ಚರಿಕೆ ನೀಡಿದರು.
ಹಿರಿಯ ಮಹಿಳೆಯರಾದ ಸಾವಿತ್ರಮ್ಮ, ಕೆಂಪಮ್ಮ, ಬೀರಮ್ಮ, ನಿಂಗಮ್ಮ, ಪುಟ್ಟಮ್ಮ, ರತ್ನಾ, ಕಮಲಮ್ಮ, ವನಜಾಕ್ಷಿ, ಬೆಡದಹಳ್ಳಿಲತಾ, ಚಂದ್ರಮ್ಮ, ವರಲಕ್ಷ್ಮಿ, ರುಕ್ಷ್ಮಿಣಿ ಸೇರಿದಂತೆ ಬಡಾವಣೆಯ ಮಹಿಳೆಯರು ಹಾಜರಿದ್ದರು.
ಚಿತ್ರಶೀರ್ಷಿಕೆ: 23-ಏಖPಇಖಿಇ-02  ಕೆ.ಆರ್.ಪೇಟೆ ಪಟ್ಟಣದ ಹೇಮಾವತಿ ಬಡಾವಣೆಗೆ ಮೂಲಕ ಭೂತ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಬಡಾವಣೆಯ ಸಮಸ್ಯೆಗಳನ್ನು ಮಹಿಳೆಯರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕೃಷ್ಣರಾಜಪೇಟೆ. ಮುಸ್ಲಿಂ ಬಂಧುಗಳು ತಮ್ಮ ಪವಿತ್ರ ಹಬ್ಬವಾದ ರಂಜಾನ್’ಅನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಬೇಕು. ವದಂತಿಗಳಿಗೆ ಕಿವಿಗೊಡದೇ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. ಸಮಾಜದ ಶಾಂತಿಗೆ ಭಂಗತರುವ ಕಿಡಿಗೇಡಿಗಳ ಬಗ್ಗೆ ಪೋಲಿಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ತಹಶೀಲ್ದಾರ್ ಕೆ.ರತ್ನಾ ಮನವಿ ಮಾಡಿದರು.
ಅವರು ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ನಡೆದ ಮುಸ್ಲಿಂ ಬಂದುಗಳ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಸಾಲಿನ ರಂಜಾನ್ ಹಬ್ಬದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮುಸ್ಲಿಂ ಬಂದುಗಳ ಎರಡು ಗುಂಪುಗಳ ನಡುವೆ ತೀವ್ರವಾದ ಮಾರಾಮಾರಿಯೇ ನಡೆದು ಘರ್ಷಣೆಯಾಗಿ ಪೋಲಿಸ್ ಠಾಣೆ ಮತ್ತು ನ್ಯಾಯಾಲಯದ ಮೆಟ್ಟಿಲನ್ನು ಹತ್ತಬೇಕಾದ ಸಂದರ್ಭವು ನಿರ್ಮಾಣವಾಗಿತ್ತು. ಆದರೆ ಈ ಭಾರಿ ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಸಮಾಜದ ಶಾಂತಿ ನೆಮ್ಮದಿಗೆ ಭಂಗ ತರುವ ಕಿಡಿಗೇಡಿಗಳ ಬಗ್ಗೆ ತಾಲೂಕು ಆಡಳಿತಕ್ಕೆ ಇಲ್ಲವೇ ಪೋಲಿಸರಿಗೆ ಮಾಹಿತಿಯನ್ನು ನೀಡಿ ಸಮಾಜದಲ್ಲಿ ಶಾಂತಿ ನೆಲೆಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ ತಹಶೀಲ್ದಾರ್ ಕೆ.ರತ್ನಾ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ದಯಮಾಡಿ ಎಲ್ಲರೂ ಕಾನೂನನ್ನು ಪಾಲಿಸಬೇಕು. ಕಾನೂನನ್ನು ಗೌರವಿಸಿ ಜೀವನ ನಡೆಸುವವರನ್ನು ಸಮಾಜವು ಗೌರವಿಸುತ್ತದೆ ಎಂಬ ಸತ್ಯವನ್ನು ಅರಿಯಬೇಕು ಎಂದು ಕಿವಿಮಾತು ಹೇಳಿದ ಅವರು ತಾಲೂಕಿನ ಸಿಂದಘಟ್ಟ, ಅಕ್ಕಿಹೆಬ್ಬಾಳು, ತೆಂಡೇಕೆರೆ, ಆನೆಗೊಳ, ಕಿಕ್ಕೇರಿ, ಮಂದಗೆರೆ, ದೊಡ್ಡಯಾಚೇನಹಳ್ಳಿ, ಚಾಕನಾಯಕನಹಳ್ಳಿ ಮುಂತಾದ ಗ್ರಾಮಗಳಲ್ಲಿಯೂ ಮುಸ್ಲಿಂ ಬಂಧುಗಳು ಹಬ್ಬ ಆಚರಣೆ ಮಾಡುತ್ತಾರೆ. ಎಲ್ಲಿಯೂ ಹಬ್ಬದ ಸಂಭ್ರಮಕ್ಕೆ ಚ್ಯುತಿಬರಬಾರದು, ಯಾರೂ ಗಲಾಟೆ ಗದ್ದಲಕ್ಕೆ ಅನುವು ಮಾಡಿಕೊಡಬಾರದು, ನಾವೆಲ್ಲರೂ ಒಂದು ನಮ್ಮ ಭಕ್ತಿಯು ಅಲ್ಲಾಹನಿಗೆ, ಶಿವ ಪರಮಾತ್ಮನಿಗೆ ಸಲ್ಲಬೇಕು ಎಂಬ ನಿಶ್ಕಲ್ಮಷವಾದ ಮನಸ್ಸಿನಿಂದ ಹಬ್ಬವನ್ನು ಆಚರಿಸಬೇಕು ಎಂದು ರತ್ನಾ ಮನವಿ ಮಾಡಿದರು.
ಸರ್ಕಲ್ ಇನ್ಸ್‍ಪೆಕ್ಟರ್ ಹೆಚ್.ಬಿ.ವೆಂಕಟೇಶಯ್ಯ, ಸಬ್ ಇನ್ಸ್‍ಪೆಕ್ಟರ್ ಅರುಣ್‍ಕುಮಾರ್, ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್‍ಖಾನ್, ಮುಸ್ಲಿಂ ಸಮಾಜದ ಮುಖಂಡರಾದ ಉಮ್ಮರ್‍ಬೇಗ್, ಶಬೀರ್ ಅಹಮದ್, ನಿಸಾರ್‍ಖಾನ್, ಆಫೀಜುಲ್ಲಾಷರೀಫ್, ದಡದಹಳ್ಳಿ ಅತೀಕ್, ಆಶ್ರಫ್ ಪಾಶ, ತಂಜೀಮಾಕೌಸರ್, ನವೀದ್ ಅಹಮದ್, ಅಕ್ಬರ್‍ಪಾಶ, ಸೈಯ್ಯದ್‍ಅಕ್ಬರ್, ಪಠಾಣ್‍ಬಾಬೂ, ನೂರ್ ಅಹಮದ್, ಸೈಯ್ಯದ್ ಮುನಾವರ್, ಸೈಯ್ಯದ್ ಖಲೀಲ್, ನೂರುಲ್ಲಾ ಷರೀಫ್ ಸೇರಿದಂತೆ ನೂರಾರು ಜನರು ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಚಿತ್ರಶೀರ್ಷಿಕೆ: 23-ಏಖPಇಖಿಇ-01  ಕೆ.ಆರ್.ಪೇಟೆ ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ನಡೆದ ಮುಸ್ಲಿಂ ಬಂದುಗಳ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಕೆ.ರತ್ನಾ ಮಾತನಾಡಿದರು. ಸರ್ಕಲ್ ಇನ್ಸ್‍ಪೆಕ್ಟರ್ ಹೆಚ್.ಬಿ.ವೆಂಕಟೇಶಯ್ಯ, ಸಬ್ ಇನ್ಸ್‍ಪೆಕ್ಟರ್ ಅರುಣ್‍ಕುಮಾರ್, ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್‍ಖಾನ್, ಮುಸ್ಲಿಂ ಸಮಾಜದ ಮುಖಂಡರಾದ ಉಮ್ಮರ್‍ಬೇಗ್, ಶಬೀರ್ ಅಹಮದ್, ನಿಸಾರ್‍ಖಾನ್, ಆಫೀಜುಲ್ಲಾಷರೀಫ್, ದಡದಹಳ್ಳಿ ಅತೀಕ್ ಮತ್ತಿತರರು ಚಿತ್ರದಲ್ಲಿದ್ದಾರೆ.

ಮಂಡ್ಯ : ಅಂಬೇಡ್ಕರ್ ಬ್ರಾಹ್ಮಣರನ್ನು ವಿರೋಧ ಮಾಡಲಿಲ್ಲ. ಬದಲಿಗೆ ಬ್ರಾಹ್ಮಣ್ಯವನ್ನು ವಿರೋಧ ಮಾಡಿದ್ದರು ಎಂದು ಚಿತ್ರನಟ ಕೆ. ಶಿವರಾಂ ಅಭಿಪ್ರಾಯಿಸಿದರು.

ಮಂಡ್ಯ : ಅಂಬೇಡ್ಕರ್ ಬ್ರಾಹ್ಮಣರನ್ನು ವಿರೋಧ ಮಾಡಲಿಲ್ಲ. ಬದಲಿಗೆ ಬ್ರಾಹ್ಮಣ್ಯವನ್ನು ವಿರೋಧ ಮಾಡಿದ್ದರು ಎಂದು ಚಿತ್ರನಟ ಕೆ. ಶಿವರಾಂ ಅಭಿಪ್ರಾಯಿಸಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಶ್ಯಾಂಪ್ರಕಾಶ್ ಮುಖರ್ಜಿ ಅವರ ಬಲಿದಾನ ದಿವಸ್ ಆಚರಣಾ ಸಮಾರಂಭದಲ್ಲಿ ಭಾಗವಹಿಸಿ ಮತಾನಾಡಿದ ಅವರು, ಅಂಬೇಡ್ಕರ್‍ರವರು ಬ್ರಾಹ್ಮಣ್ಯವನ್ನು ವಿರೋಧಿಸಿದರು. ದಲಿತರನ್ನು ಕೀಳಾಗಿ ಕಾಣುವ ಮನುಸ್ಮೃತಿಯನ್ನು ಸುಟ್ಟುಹಾಕಿದರು ಎಂದು ತಿಳಿಸಿದರು.
ವಿಶ್ವದ ನಾನಾ ದೇಶಗಳನ್ನು ಸುತ್ತಿ ಅಲ್ಲಿನ ಸಂವಿಧಾನವನ್ನು ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ. ಸಂವಿಧಾನ ಕರ್ತೃವಾಗಿರುವ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್ಸಿಗರೇ ಸೋಲಿಸಿದರು. ಬಳಿಕ ಅವರನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಶ್ಯಾಂಪ್ರಕಾಶ್ ಅವರು ಅಂಬೇಡ್ಕರ್‍ವರನ್ನು ಗೆಲ್ಲಿಸಿ ಕಳುಹಿಸುತ್ತಾರೆ. ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ. ಇಂತಹವರನ್ನು ದಲಿತರು ಎಂದಿಗೂ ಮರೆಯಬಾರದು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ತೊರೆದ ಅಂಬೇಡ್ಕರ್‍ರವರು ಸಂಘ ಪರಿವಾರದ ಧ್ಯೇಯೋದ್ದೇಶಗಳನ್ನು, ಶಿಸ್ತನ್ನು ಮೆಚ್ಚಿಕೊಂಡಿದ್ದರು. ಆರ್.ಎಸ್.ಎಸ್.ನ ಕ್ಯಾಂಪ್‍ಗಳಿಗೂ ಹೋಗಿ ಭಾಗವಹಿಸಿದ್ದರು. ಇದಾವುದನ್ನು ತಿಳಿಯದ ಕೆಲ ವಿಚಾರವಾದಿಗಳು, ಬಹುಜನ ಸಮಾಜವಾದಿ ಬುದ್ದಿವಂತರು ಆರ್.ಎಸ್.ಎಸ್.ನ್ನು ಸುಖಾಸುಮ್ಮನೆ ಟೀಕಿಸುತ್ತಾರೆ ಎಂದು ಅಸಮಾಧಾನ ವ್ಯಂಗ್ಯವಾಡಿದರು.
ಶ್ಯಾಂಪ್ರಕಾಶ್‍ರವರು ಅಂಬೇಡ್ಕರ್‍ರವರನ್ನು ಕರೆದೊಯ್ದು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಇಡೀ ದಲಿತ ಸಮುದಾಯಕ್ಕೆ ಜಯ ತಂದುಕೊಡುವಲ್ಲಿ ಸಹಕಾರಿಯಾದರು. ಇಂತಹ ಮಹನೀಯರನ್ನು ನಾವು ಮರೆಯಬಾರದು ಎಂದು ತಿಳಿಸಿದರು.
ಬಿಜೆಪಿ ದಲಿತ ವಿರೋಧಿಯಲ್ಲ, ನಿಜವಾದ ದಲಿತ ವಿರೋಧಿ ಎಂದರೆ ಅದು ಕಾಂಗ್ರೆಸ್. ಕಾಂಗ್ರೆಸ್‍ನವರು ಅಂಬೇಡ್ಕರ್‍ರವರನ್ನು ಆಯ್ಕೆ ಮಾಡಬಹುದಿತ್ತು. ದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾದ ಸಂದರ್ಭದಲ್ಲಿ ಕೇವಲ 44 ಮಂದಿ ಸಂಸದರು ಮಾತ್ರ ಆಯ್ಕೆಯಾಗಿದ್ದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದ್ದರು. ಶೇ. 10ರಷ್ಟು ಹೆಚ್ಚಳವಾಗಿದ್ದರೆ ಖರ್ಗೆಯವರು ವಿರೋಧ ಪಕ್ಷದ ನಾಯಕರಾಗುತ್ತಿರಲಿಲ್ಲ ಎಂದು ತಿಳಿಸಿದರು.
ನಗರ ಬಿಜೆಪಿ ಅಧ್ಯಕ್ಷ ಎಚ್.ಆರ್. ಅರವಿಂದ್, ಪ.ನಾ. ಸುರೇಶ್, ಕೆಂಪಬೋರಯ್ಯ, ನಿತ್ಯಾನಂದ, ಎನ್.ಆರ್.ಆತ್ಮಾನಂದ, ಮಹಂತೇಶಪ್ಪ ಇತರರಿದ್ದರು.

ಜೂ.25 ರಂದು ಉಪನ್ಯಾಸ ಹಾಗೂ ಕವಿಗೋಷ್ಠಿ

ಜೂ.25 ರಂದು ಉಪನ್ಯಾಸ ಹಾಗೂ ಕವಿಗೋಷ್ಠಿ
ಮಳವಳ್ಳಿ : ತಾಲೂಕು ಕÀಸ್ತೂರಿ ಸಿರಿಗನ್ನಡ ವೇದಿಕೆ ಹಾಗೂ ತಾಲೂಕು ಕರ್ನಾಟಕ ಪ್ರಾಂತ ರೈತ ಸಂಘದ ಸಂಯುಕ್ತ ಆಶ್ರಯದಲ್ಲಿ ಜೂ.25 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ,ಮೀಸಲಾತಿ ಮತ್ತು ಸಂವಿಧಾನದ ಆಶಯಗಳ ಕುರಿತು ಉಪನ್ಯಾಸ ಹಾಗೂ ಕವಿಗೋಷ್ಠಿಯು ನಡೆಯಲಿದೆ ಎಂದು ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಎನ್.ಎಲ್.ಭರತ್ ರಾಜ್ ತಿಳಿಸಿದ್ದಾರೆ.
 ಪ್ರಸಿದ್ಧ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜೇ ಅರಸ್ ಸಮಾರಂಭ ಉದ್ಘಾಟಿಸಲಿದ್ದು,ಕಸ್ತೂರಿ ಸಿರಿಗನ್ನಡ ವೇದಿಕೆಯ ಅಧ್ಯಕ್ಷೆ ಪಿ.ನಾಗರತ್ನಮ್ಮ ಅಧ್ಯಕ್ಷತೆ ವಹಿಸುವರು.ಮೀಸಲಾತಿ ಮತ್ತು ಸಂವಿಧಾನದ ಆಶಯಗಳ ಕುರಿತು ಸಾಹಿತಿ ಡಾ.ರಾಜು ಗುಂಡಾಪುರ ಉಪನ್ಯಾಸ ನೀಡುವರು.ತಾಲೂಕು ಪಂಚಾಯಿತಿ ಅಧ್ಯಕ್ಷ ಆರ್.ಎನ್.ವಿಶ್ವಾಸ್,ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ವಿ.ಕೃಷ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
    ಬಳಿಕ ನಡೆಯಲಿರುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ವಹಿಸಲಿದ್ದು,ಚುಸಾಪ ಅಧ್ಯಕ್ಷ ಬಸಪ್ಪ ನೆಲಮಾಕನಹಳ್ಳಿ,ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ದೇವಿ,ಕಾರ್ಯದರ್ಶಿ ಲಿಂಗರಾಜ ಮೂರ್ತಿ,ಸಂಘಟಕ ಪೊತೇರ ಮಹದೇವು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
   ಕವಿ-ಕವಿಯತ್ರಿಯರಾದ ಎಂ.ಬಿ.ರಾಮೇಗೌಡ,ನಾಗವೇಣಿ ರುದ್ರಸ್ವಾಮಿ,ಉಷಾ ನಂಜನಗೂಡು,ದಾಕ್ಷಾಯಿಣಿ,ಅನಾರ್ಕಲಿ ಸಲೀಂ,ಪುನೀತ್ ಭಾಸ್ಕರ್,ಚಿಕ್ಕರಾಜು,ಕೊ.ನಾ.ಪು.,ಸಾಲಮರದ ಸಿ.ನಾಗರಾಜು,ಶಿವಮಲ್ಲು,ಹೆಚ್.ಎನ್.ರಾಘವೇಂದ್ರ,ಕೆ.ಸಿ.ಚಲುವರಾಜು,ಪ್ರತಾಪ್ ಕಲಾವಿದ,ವಿ.ರಮೇಶ್,ಕೃಷ್ಣಸ್ವಾಮಿ,ವಸಂತ್,ಷಣ್ಮುಖಸ್ವಾಮಿ,ಸಿದ್ದರಾಜು ಕಂದೇಗಾಲ,ಕಂಠಿರಾಜ್,ಮಹೇಶ್ ತಮ್ಮ ಸ್ವರಚಿತ ಕವನ ವಾಚನ ಮಾಡುವರು.  

Friday 19 May 2017

ಸಾವಯವ ಕೃಷಿಗೆ ಉತ್ತೇಜನ ನೀಡಲು ಸೂಚನೆ: ಎಂ.ಕೃಷ್ಣಪ್ಪ


  ಸಾವಯವ ಕೃಷಿಗೆ ಉತ್ತೇಜನ ನೀಡಲು ಸೂಚನೆ: ಎಂ.ಕೃಷ್ಣಪ್ಪ
 ಮಂಡ್ಯ ಮೇ.19.  ರಾಸಾಯನಿಕ ಗೊಬ್ಬರವನ್ನು ಕೃಷಿಯಲ್ಲಿ ಕಡಿಮೆ ಮಾಡುವ ಸಲುವಾಗಿ ನೈಸರ್ಗಿಕ, ಸಾವಯವ ಕೃಷಿಯನ್ನು ರೈತರಿಗೆ ಪರಿಚಯಿಸಿ ಉತ್ತೇಜನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರು ತಿಳಿಸಿದರು.
    ಅವರು ಇಂದು ಶುಕ್ರವಾರ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  ಪ್ರಸ್ತುತ ಮುಂಗಾರು ಮಳೆ ಉತ್ತಮವಾಗಿದ್ದು, ರಾಸಾಯನಿಕ ಹಾಗೂ ಬಿತ್ತನೆ ಬೀಜಗಳಿಗೆ ತೊಂದರೆಯಾಗದಂತೆ ಕೃಷಿ ಅಧಿಕಾರಿಗಳು ಮುಂಜಾಗ್ರತ ಕ್ರಮ ವಹಿಸಬೇಕೆಂದು ಕೃಷಿ ಅಧಿಕಾರಿಗೆ ಸೂಚಿಸಿದ ಸಚಿವರು ರಾಸಾಯನಿಕ ಗೊಬ್ಬರವನ್ನು ಕೃಷಿಯಲ್ಲಿ ಕಡಿಮೆ ಮಾಡುವ ಸಲುವಾಗಿ ನೈಸರ್ಗಿಕ, ಸಾವಯವ ಕೃಷಿಯನ್ನು ರೈತರಿಗೆ ಪರಿಚಯಿಸಿ ಎಂದು ಅವರು ತಿಳಿಸಿದರು.
   ವಿವಿಧ ಇಲಾಖೆಗಳಿಂದ ರೈತರು, ಅರ್ಹರಿಗೆ ರೂಪಿಸಲಾಗಿರುವ ಯೋಜನೆಗಳ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸಾರ್ವಜನಿಕ ಹಾಗೂ ಪ್ರಮುಖ ಸ್ಥಳಗಳನ್ನು ಗುರುತಿಸಿ ಅಲ್ಲಿ ವಿವಿಧ ಯೋಜನೆಗಳ ಬಗ್ಗೆ ಹೋಬಳಿ ಕೇಂದ್ರಗಳಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಹಾಕುವುದರೊಂದಿಗೆ ಜನರಿಗೆ ತಿಳಿಯಪಡಿಸುವಂತೆ ಸಲಹೆ ನೀಡಿದರು.
    ಜಂಟಿ ಕೃಷಿ ನಿರ್ದೇಶಕಿ ರಾಜಾ ಸುಲೋಚನಾ ಪ್ರತಿಕ್ರಿಯಿಸಿ ಮಾತನಾಡಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಸಬ್ಸಿಡಿ ದರದಲ್ಲಿ ದ್ವಿದಳ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗುತ್ತಿದೆ. ರಾಗಿ ಬಿತ್ತನೆ ಬೀಜ ಕೊರತೆ ಇದ್ದು, ಪೂರೈಕೆಗೆ ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.
  ಅರಣ್ಯ ಇಲಾಖೆಯಿಂದ ಹಸಿರ ವನಸಿರಿ ಬೆಳೆಸುವ ಸಲುವಾಗಿ ಸೀಡ್‍ಬಾಲ್ ವಿಶೇಷ ಅಭಿಯಾನ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅದರ ಪೂರ್ವ ತಯಾರಿಗೆ ಸಾಕಷ್ಟು ಖರ್ಚು, ಸಮಯ ವ್ಯರ್ಥವಾಗುತ್ತದೆ. ಅದಕ್ಕಾಗಿ ಬೆಟ್ಟ-ಗುಡ್ಡ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಹೆಲಿಕಾಪ್ಟರ್ ಮೂಲಕ ಮರಗಳ ಬಿತ್ತನೆ ಬೀಜ ಚೆಲ್ಲುವಂತೆ ಮಾಡುವುದರಿಂದ ಹಸಿರ ವನಸಿರಿಯನ್ನು ವೃದ್ಧಿಸಬಹುದು ಎಂದು  ಸಚಿವರು ತಿಳಿಸಿದರು.
  ಇದೇ ಸಂದರ್ಭದಲ್ಲಿ ಮಾತನಾಡಿದ ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಎಷ್ಟೋ ದಶಕಗಳಿಂದ ಒಣಗಿರುವ ಮರಗಳಿವೆ. ಗಾಳಿಯ ರಭಸಕ್ಕೆ ಮರದ ಕೊಂಬೆಗಳು ಮುರಿದು ಬೀಳುತ್ತಿವೆ.ಇದರಿಂದ ಸಾಕಷ್ಟು ಅಪಾಯ ಸೃಷ್ಟಿಯಾಗುವ ಸಾಧ್ಯತೆಗಳಿದ್ದು ಆ ಮರಗಳನ್ನು ಕೂಡಲೇ ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ  ಸೂಚಿಸಿದರು. ಅಲ್ಲದೇ ನರೇಗಾ ಯೋಜನೆಯಡಿ ತೋಟಗಾರಿಕೆ, ಅರಣ್ಯ, ಕೃಷಿ ಸೇರಿದಂತೆ ಅನೇಕ ಇಲಾಖೆಗಳಡಿ ಕಾಮಗಾರಿಗಳನ್ನು ತೆಗೆದುಕೊಳ್ಳುವುದಕ್ಕೆ ಅವಕಾಶಗಳಿವೆ. ಆದರೆ, ಪಿಡಿಒಗಳು ಪಂಚಾಯಿತಿ ಕಾಮಗಾರಿಗಳಿಗಷ್ಟೇ ಆದ್ಯತೆ ನೀಡುತ್ತಿದ್ದಾರೆ. ಇದರ ಅಗತ್ಯ ಕ್ರಮವಹಿಸುವಂತೆ ಸಭೆಯಲ್ಲಿ ಸೂಚಿಸಿದರು.
    ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶರತ್ ಅವರು ಜಿಲ್ಲೆಯಲ್ಲಿರುವ 234 ಗ್ರಾಮ ಪಂಚಾಯಿತಿಗಳ ಪೈಕಿ 55 ಪಿಡಿಒ ಹುದ್ದೆಗಳು ಖಾಲಿ ಇವೆ. ಇದರಿಂದ ಹಲವು ಕಡೆಗಳಲ್ಲಿ ಒಬ್ಬ ಪಿಡಿಒಗೆ ಎರಡೆರಡು ಪಂಚಾಯಿತಿಗಳಿಗೆ ಉಸ್ತುವಾರಿ ವಹಿಸಲಾಗಿದ್ದು ವಿವಿಧ ಇಲಾಖೆಗಳಡಿ ಕಾಮಗಾರಿಗಳನ್ನು ತೆಗೆದುಕೊಳ್ಳುವುದಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
  ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ, ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಪ್ರೇಮಾ ಕುಮಾರಿ, ನಗರಸಭೆ ಅಧ್ಯಕ್ಷರಾದ ಬೋರೆಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಾಯಿತ್ರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದರು.

ಮೇ.20 ರಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಪ್ರವಾಸ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್.ವೆಂಕಟೇಶ, ಸದಸ್ಯರಾದ ಮೀನಾಕ್ಷಮ್ಮ, ಗೋಕುಲನಾರಾಯಣಸ್ವಾಮಿ ಅವರು ಮೇ 20 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅವರು ಅಂದು ಬೆಳಿಗ್ಗೆ 9 ಗಂಟೆಗೆ ಪೌರಕಾರ್ಮಿಕರ ಕಾಲೋನಿಗಳಿಗೆ ಭೇಟಿ ನೀಡುವರು ನಂತರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಪೌರಕಾರ್ಮಿಕರ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ಮೇ 20 ರಂದು ವಿದ್ಯುತ್ ವ್ಯತ್ಯಯ
ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 20 ರಂದು ಬೆಳಿಗ್ಗೆ 9 ರಿಂದ ಸಂಜೆ 2 ಗಂಟೆಯ ವರೆಗೆ ಈ ಕೆಳಗೆ ತಿಳಿಸಿರುವ ಪ್ರದೇಶಗಳಲ್ಲಿ ವಿದ್ಯುತ್‍ನಲ್ಲಿ ಅಡಚಣೆವುಂಟಾಗುವುದರಿಂದ ಕಂಪನಿಯೊಂದಿಗೆ ಸಹಕರಿಸಬೇಕೆಂದು ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯತ್ಯಯ ಉಂಟಾಗುವ ಪ್ರದೇಶಗಳ ವಿವರ ನಗರ ಪ್ರದೇಶಗಳಾದ ಕಲ್ಲಹಳ್ಳಿ, ಚಾಮುಂಡೇಶ್ವರಿ ನಗರ, ಮರಿಗೌಡ ಬಡಾವಣಿ, ಶಂಕರನಗರ, ಇಂಡುವಾಳು, ಕಿರಗಂದೂರು, ಕ್ಯಾತುಂಗೆರೆ ಗ್ರಾಮಾಂತರ ಪ್ರದೇಶಗಳಾದ   ಪಣಕನಹಳ್ಳಿ, ತಂಡಸನಹಳ್ಳಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಎ. ಹುಲ್ಲುಕೆರೆ, ಬಿ.ಹುಲ್ಲುಕೆರೆ  ಹಾಗೂ ಸುತ್ತಮುತ್ತಲಿನ ಗ್ರಾಮಗಳು.



sanjemitraepaper.blogspot.in: ‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರ...

sanjemitraepaper.blogspot.in: ‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರ...: ‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರಿಂದ ಯೋಗಾಸನ’      ಮೈಸೂರು.ಮೇ.19. ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ...

‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರಿಂದ ಯೋಗಾಸನ’

‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರಿಂದ ಯೋಗಾಸನ’
     ಮೈಸೂರು.ಮೇ.19. ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗಾ ದಿನಾಚರಣೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತೆ ಹಾಗೂ ಯೋಗಾ ರಾಜಧಾನಿಯಾಗಿ ಮೈಸೂರನ್ನು ಬಿಂಬಿಸುವ ರೀತಿಯಲ್ಲಿ ಆಚರಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ರಂದೀಪ್ ಡಿ. ಅವರು ತಿಳಿಸಿದರು.
    ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗಾ ದಿನಾಚರಣೆ ಆಚರಿಸುವ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಯೋಗಾಸಾನ ತರಬೇತಿ ನೀಡುವ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ 50 ಸಾವಿರಕ್ಕೂ ಹೆಚ್ಚು ಜನ ಏಕಕಾಲದಲ್ಲಿ ಯೋಗಾ ದಿನಾಚರಣೆಯ ಯೋಗಾಭ್ಯಾಸದಲ್ಲಿ ಭಾಗವಹಿಸುವಂತೆ ಸಂಘಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಮೈಸೂರಿನಲ್ಲಿ ಯೋಗಾ ತರಬೇತಿ ನಡೆಸುವ ಹಲವಾರು ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಸಭೆಯಲ್ಲಿ ಭಾಗವಹಿಸಿ ಈ ಬೃಹತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಭರವಸೆ ನೀಡಿದವು. ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ, ನೆಹರೂ ಯುವಕೇಂದ್ರ, ಯೋಗಾ ಮತ್ತು ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯ ಮುಂತಾದ ಸಂಸ್ಥೆಗಳು ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
    ಯೋಗಾ ದಿನಾಚರಣೆಗೆ ಅರಮನೆ ಆವರಣವನ್ನು ಕೇಂದ್ರವಾಗಿಟ್ಟುಕೊಂಡು  ಸಂಘಟಿಸಲಾಗುತ್ತಿದ್ದು ಇಲ್ಲಿ ಸುಮಾರು 10 ಸಾವಿರ ಜನ  ಯೋಗಾಸಾನ ಮಾಡಬಹುದಾಗಿದೆ. ಉಳಿದವರಿಗೆ ಅರಮನೆ ಆಸು-ಪಾಸಿನ ಸಾರ್ವಜನಿಕ ಸ್ಥಳಗಳಲ್ಲಿ ಕೋಟೆ ಆಂಜನೇಸ್ವಾಮಿ ದೇವಸ್ಥಾನದ ಮುಂಭಾಗ, ರಾಜಪಥ ರಸ್ತೆ, ದೇವರಾಜ ಅರಸು ರಸ್ತೆ ಮುಂತಾದ ಸ್ಥಳಗಳಲ್ಲಿ ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಧ್ವನಿವರ್ಧಕ ವ್ಯವಸ್ಥೆ ಮಾಡಲಾಗಿದ್ದು, ಮಾರ್ಗದರ್ಶಕರು ನೀಡುವ ಸೂಚನೆಗಳು ಎಲ್ಲಾ ಸ್ಥಳಗಳಲ್ಲೂ ಧ್ವನಿಸಲಿದೆ ಎಂದರು.
    ಖಾಸಗಿ ಹಾಗೂ ಸರ್ಕಾರಿ ಶಾಲಾ/ ಕಾಲೇಜು ವಿದ್ಯಾರ್ಥಿಗಳು, ಎನ್.ಎನ್.ಎಸ್., ಎನ್.ಸಿ.ಸಿ. ಕೆಡೆÀಟ್‍ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಸಹ ಭಾಗವಹಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
     ಭಾಗವಹಿಸುವವರು ಬಿಳಿವಸ್ತ್ರ ಧರಿಸಿದರೇ ಸೂಕ್ತ. ಯೋಗಾ ಶಾಲೆಗಳಲ್ಲಿ ಬೇರೆ ಬಣ್ಣದ ಸಮವಸ್ತ್ರವಿದ್ದರೆ ಅದಕ್ಕೂ ಅವಕಾಶ ಕಲ್ಪಿಸಲಾಗುವುದು. ಕಾರ್ಪೆಟ್ ವ್ಯವಸ್ಥೆ ಇರುತ್ತದೆ. ಭಾಗವಹಿಸುವವರು ಶಿಷ್ಟಾಚಾರದಂತೆ ಯೋಗಾಭ್ಯಾಸ ಮಾಡಬೇಕಾಗುವುದರಿಂದ ಅವರಿಗೆ ಮುಂಚಿತವಾಗಿ ಒಂದು ವಾರಗಳ ಕಾಲ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.
     ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಜರ್ನಾಧನ್, ಜಿಲ್ಲಾ ಆಯುಷ್ ಅಧಿಕಾರಿ ಡಾ||  ಸೀತಾಲಕ್ಷ್ಮಿ, ನೆಹರೂ ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ನಟರಾಜು, ಆಹಾರ ಇಲಾಖೆಯ ಹಿರಿಯ ಉಪನಿರ್ದೇಶಕ ಡಾ|| ಕಾ. ರಾಮೇಶ್ವರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಆರ್. ಬಸಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಹಾಗೂ  ವಿವಿಧ ಇಲಾಖೆಯ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು, ಪ್ರತಿನಿಧಿಗಳು ಭಾಗವಹಿಸಿದ್ದರು.
(ಛಾಯಾಚಿತ್ರ ಲಗತ್ತಿಸಿದೆ).

ಪ್ರವಾಸ ಕಾರ್ಯಕ್ರಮ
     ಮೈಸೂರು.ಮೇ.19:- ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಹೆಚ್.ಸಿ. ಮಹದೇವಪ್ಪ ಅವರು ಮೇ  20 ಹಾಗೂ 21 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
    ಮೇ 20 ರಂದು 11 ಗಂಟೆಗೆ ಸರ್ಕಾರಿ ಅತಿಥಿಗೃಹದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಜೊತೆ ಜನತಾ ದರ್ಶನ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಹಾಗೂ ಸಾರ್ವಜನಿಕರ ಭೇಟಿ ಕುಂದು ಕೊರತೆಗಳ ವಿಚಾರಣೆಯಲ್ಲಿ ಭಾಗವಹಿಸಿ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
    ಮೇ 21 ರಂದು ಸಂಜೆ 4 ಗಂಟೆಗೆ ಜೆ.ಎಲ್.ಬಿ. ರಸ್ತೆಯಲ್ಲಿರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಹಿಮಾ ಪ್ರಕಾಶನ ಇವರ ಸಹಯೋಗದೊಂದಿಗೆ ಬಿ. ಶ್ಯಾಮಸುಂದರ ಅವರ “ಸುದ್ದಿಗೆ ಬೆಳೆದ ಕೈ ಕಾಲುಗಳು”,  “ಶಂಕ್ರುಕಟ್ಟೆ” ಕಥಾ ಸಂಕಲನ ಮತ್ತು  “ಹೆಣ್ಣು ಬೇಕು ಹೆಣ್ಣು” ಪ್ರಬಂಧ ಸಂಕಲನದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 7 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುವರು.

ಪ್ರವಾಸ ಕಾರ್ಯಕ್ರಮ
     ಮೈಸೂರು.ಮೇ.19. ಕೇಂದ್ರ ನಗರಾಭಿವೃದ್ಧಿ, ವಸತಿ, ನಗರ ಬಡತನ ನಿರ್ಮೂಲನೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರಾದ ವೆಂಕಯ್ಯ ನಾಯ್ಡು ಅವರು ಮೇ 21 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
      ಅಂದು ಮಧ್ಯಾಹ್ನ 3-45ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4 ಗಂಟೆಗೆ ಹೋಟೆಲ್ ಪ್ರೆಸಿಡೆಂಟ್ ನಲ್ಲಿ ಆಯೋಜಿಸಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5-15ಕ್ಕೆ ಶ್ರೀ  ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಸಂಜೆ 7-30 ಗಂಟೆಗೆ ಮೈಸೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳುವರು.

ಮೇ 26 ರಿಂದ 29 ರವರೆಗೆ ಕೌನ್ಸಿಲಿಂಗ್
     ಮೈಸೂರು.ಮೇ.19.(ಕರ್ನಾಟಕ ವಾರ್ತೆ):- ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಏಕಲವ್ಯ ಮಾದರಿ/ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಯ ಫಲಿತಾಂಶವು ದಿನಾಂಕ 15-05-2017 ರಂದು ಪ್ರಕಟಗೊಂಡಿರುತ್ತದೆ.
     ಕೌನ್ಸಿಲಿಂಗ್‍ಗೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ತಾಲ್ಲೂಕಿನ ಎಲ್ಲಾ ಬಿ.ಇ.ಒ ಕಚೇರಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳ ಕಚೇರಿಗಳು ಹಾಗೂ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದೆ.
     ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ದಿನಾಂಕ 26-05-2017 ರಿಂದ 29-05-2017 ರವರೆಗೆ ನಡೆಯಲಿದ್ದು, ಮೆರಿಟ್ ಮತ್ತು ಪ್ರವರ್ಗವಾರು ನಡೆಯುವ ಕೌನ್ಸಿಲಿಂಗ್  ದಿನಾಂಕ ಈ ಕೆಳಕಂಡಂತೆ ಇರುತ್ತದೆ.
     ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಾ|| ಬಾಬು ಜಗಜೀವನರಾಂ ಭವನದ ಕಟ್ಟಡ, ಆದಿಪಂಪ ರಸ್ತೆ, ನಾರಾಯಣಸ್ವಾಮಿ ಬ್ಲಾಕ್, ಪಡುವಾರಹಳ್ಳಿ ಪೂರ್ವ ಬಡಾವಣೆ, ಮೈಸೂರು ಇಲ್ಲಿ  ಮೇ 26 ರಂದು ಪರಿಶಿಷ್ಟ ಜಾತಿ ಬಾಲಕಿಯರು, ಮೇ 27 ರಂದು ಪರಿಶಿಷ್ಟ ಜಾತಿ  ಹಾಗೂ  ಪರಿಶಿಷ್ಟ ವರ್ಗದ ಬಾಲಕರು, ಮೇ 28 ರಂದು ಪರಿಶಿಷ್ಟ ವರ್ಗ ಬಾಲಕಿಯರು ಹಾಗೂ ಪ್ರವರ್ಗ-1, 2ಎ, 2ಬಿ ವರ್ಗದ ಬಾಲಕರು ಹಾಗೂ ಬಾಲಕಿಯರು ಹಾಗೂ ಮೇ 29 ರಂದು 3ಎ, 3ಬಿ ಹಾಗೂ ಕಾಯ್ದಿರಿಸಿದ ವಿದ್ಯಾರ್ಥಿಗಳು, ಬಾಲಕರು ಹಾಗೂ ಬಾಲಕಿಯರಿಗೆ ಕೌನ್ಸಿಲಿಂಗ್ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಣ್ಣದ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಸಿದರೇ ಕ್ರಿಮಿನಲ್ ಮೊಕದ್ದಮೆ
      ಮೈಸೂರು.ಮೇ.19. ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಸಂಬಂಧ  ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗಣೇಶ ಮೂರ್ತಿಗಳನ್ನು  ಬಳಸದಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಜಿ. ಜಗದೀಶ್ ಅವರು ಮನವಿ ಮಾಡಿದ್ದಾರೆ.
     ವಿಷಕಾರಿ ರಾಸಾಯನಿಕ, ಲೋಹ ಲೇಪದ, ಪ್ಲಾಸ್ಟರ್ ಆಫ್ ಪ್ಯಾರೀಸ್‍ನ ಗಣೇಶನ ಮೂರ್ತಿ ಬಳಕೆ ಮಾಡಬೇಡಿ. ಸಾದಾ ಜೇಡಿ ಮಣ್ಣಿನ ಮುದ್ದಾದ ಪುಟ್ಟ ಗಣೇಶ ವಿಗ್ರಹವನ್ನು ಸ್ಥಾಪಿಸಿ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗಣಪನನ್ನೇ ಪೂಜಿಸಿ ಎಂದು ಅವರು ಮನವಿ ಮಾಡಿದ್ದಾರೆ.
      ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ, ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬೇಡಿ. ಹಾಗೆ ಮಾಡಿದರೆ ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತವೆ. ಬದಲಿಗೆ ಬಕೆಟ್‍ನಲ್ಲಿ, ಸಂಚಾರಿ ವಿಸರ್ಜನಾ ವಾಹನದಲ್ಲಿ ವಿಸರ್ಜಿಸಿ, ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆಯಿರಿ, ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಬೇಡಿ. ಪಟಾಕಿಯ ಹೊಗೆ ವಿಷಪೂರಿತ; ಅಲ್ಲದೆ ರಸ್ತೆ ತುಂಬಾ ಕಸವಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯಬೇಡಿ. ಕಸದ ವಾಹನ ಬಳಸುವಂತೆ ಅವರು ತಿಳಿಸಿದ್ದಾರೆ.
        ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಸಿದ್ದಪಡಿಸುವವರು / ತಯಾರಿಸುವವರು / ಮಾರಾಟ ಮಾಡುವವರು ವಿಷಪೂರಿತ, ರಾಸಾಯನಿಕವುಳ್ಳ ಬಣ್ಣ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಅನ್ನು ಮೂರ್ತಿಗಳ ತಯಾರಿಕೆಗೆ ಉಪಯೋಗಿಸಬಾರದು. ಒಂದು ವೇಳೆ ಈ ರೀತಿಯ ಮೂರ್ತಿಗಳನ್ನು ತಯಾರಿಸುವುದಾಗಲೀ / ಮಾರಾಟ ಮಾಡುವುದಾಗಲೀ / ಉಪಯೋಗಿಸುವುದಾಗಲೀ ಕಂಡು ಬಂದರೆ ಅಂತಹ ಮೂರ್ತಿಗಳನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಜಪ್ತಿ ಮಾಡಿ ದಂಡ ವಿಧಿಸಲಾಗುವುದು ಹಾಗೂ ಸಂಬಂಧಪಟ್ಟವರ ವಿರುದ್ದ ಕ್ರಿಮನಲ್ ಮೊಕದಮೆ ಹೂಡಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
     ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಲ್ಲಿ ತಯಾರಿಸಿದ ಗೌರಿ, ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವುದನ್ನು ತಡೆಗಟ್ಟುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ. ಇದರೊಂದಿಗೆ ನಗರವನ್ನು ಪರಿಸರ ಪ್ರೇಮಿನಗರ, ಸ್ವಚ್ಛನಗರ ಎಂಬ ಗರಿಮೆಯನ್ನು ಕಾಪಾಡಬೇಕಾಗಿರುತ್ತದೆ ಅವರು ಮನವಿ ಮಾಡಿದ್ದಾರೆ.

Thursday 11 May 2017

ತಂತ್ರಾಂಶದಲ್ಲೂ ಕನ್ನಡ ಬಳಕೆ ಮಾಡಿ; ಸಿದ್ದರಾಮಯ್ಯ

ತಂತ್ರಾಂಶದಲ್ಲೂ ಕನ್ನಡ ಬಳಕೆ ಮಾಡಿ; ಸಿದ್ದರಾಮಯ್ಯ
      ಮೈಸೂರು ಮೇ. 11. ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ಮಾಹಿತಿ ನೀಡುವ ಇಲಾಖೆಗಳು ಸಹ ತಂತ್ರಾಂಶದಲ್ಲಿ ಕನ್ನಡ ಬಳಕೆ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ತಿಳಿಸಿದರು.
      ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಪರಿಶೀಲಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಪರ ಸಂಘಟನೆಗಳು, ವೆಬ್‍ಸೈಟ್‍ಗಳನ್ನು ಪರಿಶೀಲಿಸಿ ಕನ್ನಡ ಅನುಷ್ಠಾನದಲ್ಲಿ ಲೋಪವಿದ್ದಲ್ಲಿ, ವರದಿಯನ್ನು ಸಂಬಂಧಿಸಿದ ನೀಡುವಂತೆ ತಿಳಿಸಲಾಗುವುದು. ಆದರೆ ಇಲಾಖೆಗಳು ಪ್ರಾಧಿಕಾರದಿಂದ ಬರೆಯುವ ಪತ್ರಗಳಿಗೆ ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.
     ಜಿಲ್ಲೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕನ್ನಡ ಜಾಗೃತಿ ಸಭೆ ನಡೆಸಿ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಚರ್ಚಿಸಬೇಕು. ತಾಲ್ಲೂಕು ಮಟ್ಟದಲ್ಲೂ ಸಹ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕನ್ನಡ ಜಾಗೃತಿ ಸಭೆ ನಡೆಸಬೇಕು. ಕನ್ನಡದವರನ್ನು ಕಾರ್ಖಾನೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ವರ್ಗದ ನೌಕರರನ್ನು ನೇಮಕ ಮಾಡಿಕೊಂಡಿರುವ  ಬಗ್ಗೆ ಕೈಗಾರಿಕೆ ಇಲಾಖೆಯಿಂದ ಮಾಹಿತಿ ಪಡೆದ ಅಧ್ಯಕ್ಷರು ಕೆಲವು ಕಾರ್ಖನೆಗಳಲ್ಲಿ ಕನ್ನಡ ಮಾತನಾಡುವವರ ಬಗ್ಗೆ ತಾರತಮ್ಯ ನಡೆಯುತ್ತಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಪರಿಶೀಲಿಸುವಂತೆ ಕೈಗಾರಿಕೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
      ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದರೆ ದಂಡ ವಿಧಿಸುತ್ತಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಮೈಸೂರು ಜಿಲ್ಲೆ ಪ್ರವಾಸಿ ತಾಣವಾಗಿದ್ದು, ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡದ ನಾಮಫಲಕವನ್ನು ಅಳವಡಿಸಬೇಕು. ಕನ್ನಡದ ಜೊತೆಯಲ್ಲಿ ಆಂಗ್ಲ ಅಥವಾ ಇನ್ನಿತರ ಭಾಷೆಗಳನ್ನು ಅಳವಡಿಸುವಂತೆ ತಿಳಿಸಿದರು.
      ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಸುದರ್ಶನ, ಮಡ್ಡಿಗೆರೆ ಗೋಪಾಲ್, ರೇವಣ್ಣ, ಪ್ರಮೋದ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತದ ಅಧ್ಯಕ್ಷ ವೈ.ಡಿ.ರೇವಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಆಧ್ಯಕ್ಷ ವೈ.ಡಿ.ರಾಜಣ್ಣ, ಜಿಲ್ಲಾಧಿಕಾರಿ ರಂದೀಪ್ ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಮುರುಳೀಧರ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಅವರುಗಳು ಉಪಸ್ಥಿತರಿದ್ದರು.
ವಿವಿಧ ಸೌಲಭ್ಯ ಅರ್ಜಿ ಆಹ್ವಾನ
ಮೈಸೂರು ಮೇ. 11.ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ನೇರಸಾಲ- ಹಸು/ಎಮ್ಮೆ/ಕುರಿ/ಮೇಕೆ ಸಾಕಾಣಿಕೆ, ಕಿರುಸಾಲ ಯೋಜನೆ, ಮಹಿಳಾ ಸಮೃದ್ಧಿ ಯೋಜನೆ, ಗಂಗಾಕಲ್ಯಾಣ ಯೋಜನೆ/  ವೈಯಕ್ತಿಕ ತೆರೆದ ಬಾವಿ ಯೋಜನೆ, ಏತ ನೀರಾವರಿ ಯೋಜನೆ, ಭೂ ಒಡೆತನ ಯೋಜನೆ ಹಾಗೂ ವಿಕಲಚೇತನ ಯೋಜನೆಯಡಿ ಸೌಲಭ್ಯ ಒದಗಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಮೇ 25 ಕಡೆಯ ದಿನಾಂಕವಾಗಿದ್ದು, ಅರ್ಜಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಚಾಮರಾಜಮೊಹಲ್ಲಾ, ಮೈಸೂರು ಇಲ್ಲಿ/ ತಾಲ್ಲೂಕು ಮಟ್ಟದಲ್ಲಿರುವ ನಿಗಮ ಕಚೇರಿಗಳು/ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ/ ತಾಲ್ಲೂಕು ಪಂಚಾಯತ್ ಕಚೇರಿ/ನಿಗಮದ ವೆಬ್‍ಸೈಟ್ ತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ  ಇಲ್ಲಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2332480 ನ್ನು ಸಂಪರ್ಕಿವುದು.
ಮಾವಿನ ಮೇಳ
     ಮೈಸೂರು ಮೇ. 11. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಮೇ 10 ರಿಂದ ಜೂನ್ 9 ರವರೆಗೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸಗಟು ಹಣ್ಣುಗಳ ಮಾರುಕಟ್ಟೆ ಉಪ ಪ್ರಾಂಗಣದಲ್ಲಿ ಮಾವಿನ ಮೇಳವನ್ನು ಆಯೋಜಿಸಲಾಗಿದೆ.
    ಗ್ರಾಹಕರಿಗೆ ನೇರವಾಗಿ ಉತ್ತಮ ಗುಣಮಟ್ಟದ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಉತ್ತಮ ಬೆಲೆಯಲ್ಲಿ ದೊರೆಯುವಂತೆ ಮಾಡುವುದು ಮಾವಿನ ಮೇಳದ ಉದ್ದೇಶವಾಗಿದೆ. ಗ್ರಾಹಕರು ಮತ್ತು ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಭಾರಿ ವಾಹನ ಚಾಲನಾ ತರಬೇತಿ
      ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ/ಯುವತಿಯರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
       ಅರ್ಜಿ ಸಲ್ಲಿಸುವವರ ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಲಘುವಾಹನ ಚಾಲನಾ ಪರವಾನಗಿ ಪಡೆದು ಒಂದು ವರ್ಷ ಪೂರ್ಣಗೊಳಿಸಿರಬೇಕು. ಆಸಕ್ತರು, ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಮೈಸೂರು ತಾಲ್ಲೂಕು ಇಲ್ಲಿ ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮೇ 25 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2520910 ನ್ನು ಸಂಪರ್ಕಿಸುವುದು.
ಹಳೇ ದಿನಪತ್ರಿಕೆಗಳ ವಿಲೇವಾರಿ
      ಮೈಸೂರು ಮೇ. 11. ನಗರ ಕೇಂದ್ರ ಗ್ರಂಥಾಲಯ, ಮೈಸೂರು ಹಾಗೂ ವಿವಿಧ ಶಾಖೆಗಳಲ್ಲಿ ಮತ್ತು ಸೇವಾ/ ಕೇಂದ್ರಗಳಲ್ಲಿ ಹಾಗೂ ವಾಚನಾಲಯಗಳಲ್ಲಿ 2016-17 ನೇ ಸಾಲಿಗೆ ಸಂಬಂಧಿಸಿದಂತೆ ಗ್ರಂಥಾಲಯಗಳಲ್ಲಿ ಲಭ್ಯವಿರುವ ಹಳೇ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುವುದು ದರಪಟ್ಟಿ ಸಲ್ಲಿಸಲು ಮೇ 18 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ, ಮೈಸೂರು. ದೂರವಾಣಿ ಸಂಖ್ಯೆ 0821-2423678 ನ್ನು ಸಂಪರ್ಕಿಸುವುದು.
ವಾಹನಗಳ ಬಹಿರಂಗ ಹರಾಜು
       ಮೈಸೂರು ಮೇ. 11: ಕೆ.ಎಸ್.ಆರ್.ಪಿ. 5ನೇ ಪಡೆ ಕಮಾಂಡೆಂಟ್ ಕಚೇರಿಗೆ ಸೇರಿದ ಅನುಪಯುಕ್ತ 11 ಟಾಟಾ ಬಸ್ಸುಗಳು ಹಾಗೂ 1 ಜೀಪುನ್ನು ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಲಲಿತ ಮಹಲ್ ರಸ್ತೆಯಲ್ಲಿ ಕೆ.ಎಸ್.ಆರ್.ಪಿ. 5ನೇ ಪಡೆ ಕಮಾಂಡೆಂಟ್ ಕಚೇರಿ ಆವರಣದಲ್ಲಿ ಟೆಂಡರ್ ಕಮ್ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
     ಟೆಂಡರ್ ನ್ನು ಮೇ 30 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2473549 ನ್ನು ಸಂಪರ್ಕಿಸುವುದು.


ಸಾಲಸೌಲಭ್ಯ ಅರ್ಜಿ ಆಹ್ವಾನ
      ಮೈಸೂರು ಮೇ. 11. ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆಯಡಿ  ಪ್ರಥಮ ಪೀಳಿಗೆ ಉದ್ಯಮಶೀಲರಿಗೆ ಪ್ರತಿ ಘಟಕಕ್ಕೆ ಗರಿಷ್ಟ ರೂ. 10.00 ಲಕ್ಷ ಯೋಜನಾ ವೆಚ್ಚದ  ಉತ್ಪಾದನಾ ಘಟಕ ಹಾಗೂ ಆಯ್ದ ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ವಿವಿಧ ಹಣಕಾಸು ಸಂಸ್ಥೆ ಮೂಲಕ ಸಾಲ ಒದಗಿಸಲಾಗುವುದು.
      ಅರ್ಜಿ ಸಲ್ಲಿಸುವವರ ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು. ವಿಶೇಷ ವರ್ಗದವರಿಗೆ 45 ವರ್ಷ ವಯೋಮಿತಿಯಾಗಿರುತ್ತದೆ. 8ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಸಾಮಾನ್ಯ ವರ್ಗದ ಉದ್ಯಮ ಶೀಲರಿಗೆ ಯೋಜನಾ ವೆಚ್ಚದ ಶೇ. 25 ರಷ್ಟು (ಗರಿಷ್ಠ 2.50 ಲಕ್ಷ ರೂ.,) ವಿಶೇಷ ವರ್ಗದವರಿಗೆ ಶೇ. 30 ರಷ್ಟು (ಗರಿಷ್ಠ 3.50 ಲಕ್ಷ ರೂ. ಸಹಾಯ ಧನ ಮಂಜೂರು ಮಾಡಲಾಗುವುದು.
    ಅರ್ಜಿಯನ್ನು ವೆಬ್‍ಸೈಟ್ ತಿತಿತಿ.ಛಿmegಠಿ.ಞಚಿಡಿ.ಟಿiಛಿ.iಟಿ ಆನ್‍ಲೈನ್ ಮೂಲಕ ಜೂನ್ 12 ರೊಳಗಾಗಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2520886/ 2563370 ನ್ನು ಸಂಪರ್ಕಿಸುವುದು.
ಮೇ 12 ರಂದು ರಾಮಾ ರಾಮಾ ರೇ    
       ಮೈಸೂರು ಮೇ. 11. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಮೈಸೂರು ಫಿಲ್ಮ್ ಸೊಸೈಟಿ, ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಸಿನಿಮಾ ಸಮಯದಲ್ಲಿ ಮೇ 12 ರಂದು ಸಂಜೆ 6 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಡಿ. ಸತ್ಯಪ್ರಕಾಶ್ ನಿರ್ದೇಶನದ ರಾಮಾ ರಾಮಾ ರೇ  ಕನ್ನಡ ಚಲನಚಿತ್ರ ಪ್ರದರ್ಶಿಸಲಾಗುವುದು.
     ಮನುಷ್ಯ ಸಂಬಂಧಗಳ ಮಹತ್ವ, ಶಕ್ತಿ ಮತ್ತು ಸೂಕ್ಷ್ಮತೆಗಳನ್ನು ಜನ ಮರಣಗಳ ಭಯ ಮತ್ತು ಕ್ರೋಧ, ಭದ್ರತೆ ಮತ್ತು ಅಭದ್ರತೆ ಅದೃಷ್ಟ ಮತ್ತು ವಿಧಿಗಳ ಹಿನ್ನೆಲೆಗಳಲ್ಲಿ ರಾಮಾ ರಾಮಾ ರೇ ಚಿತ್ರ ಅನಾವರಣಗೊಳ್ಳುತ್ತದೆ. ವಿಭಿನ್ನ ವ್ಯಕ್ತಿತ್ವಗಳ ಹಾಸ್ಯ ಮತ್ತು ವ್ಯಂಗಗಳ ಘಮದೊಂದಿಗೆ ಸಾಗುವ ಜೀಪ್ ಪ್ರಯಾಣದ ಸುತ್ತ ರಾಮಾ ರಾಮಾ ರೇ ಚಿತ್ರಕಥೆ ಇರುತ್ತದೆ.
      ಇದಕ್ಕೂ ಮುನ್ನ ಅಂದು ಸಂಜೆ 5-30 ಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿರುವ ವಿಸ್ತøತ ವಿಜ್ಞಾನ ಸಾಕ್ಷ್ಯಚಿತ್ರ  ಪ್ರದರ್ಶಿಸಲಾಗುವುದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
 
ಕುಡಿಯುವ ನೀರು ಪೋಲಾಗಾದಂತೆ ಎಚ್ಚರ ವಹಿಸಿ
ಮೈಸೂರು ಮೇ. 11. ಮೈಸೂರು ನಗರದ ನೀರು ಸರಬರಾಜು ಮಾಡುವ ಮೂಲಗಳಾದ ಕಾವೇರಿ ಮತ್ತು ಕಬಿನಿ ನದಿಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಇಳಿದಿರುವುದರಿಂದ ಮೈಸೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೊಂಗಳ್ಳಿ, ಬೆಳಗೊಳ, ಮೇಳಾಪುರ ಮತ್ತು ಬಿದರಗೋಡುಗಳಲ್ಲಿನ ಮೂಲ ಸ್ಥಾವರ ಯಂತ್ರಾಗಾರಗಳಿಗೆ ನೀರಿನ ಹರಿವು ಇಲ್ಲದಂತಾಗಿ ನೀರು ಸರಬರಾಜಿಗೆ ತೊಂದರೆಯಾಗಿದೆ.
ಮೈಸೂರು ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಪೋಲು ಮಾಡದಂತೆ ಗೃಹಬಳಕೆಗೆ ಮಾತ್ರ ನೀರು ಬಳಕೆ ಮಾಡಿ  ನೀರು ಉಳಿತಾಯಕ್ಕಾಗಿ P್ಪ್ರಮ ಕೈಗೊಳ್ಳುವ ಮೂಲಕ ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ. ಸಾರ್ವಜನಿಕರು ಕುಡಿಯುವ ನೀರನ್ನು ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಉಪಯೋಗಿಸಬಾರದು, ಕುಡಿಯುವ ನೀರನ್ನು ಮನೆಯ ಅಂಗಳ ತೊಳೆಯಲು, ವಾಹನ ತೊಳೆಯಲು,  ಗಿಡಗಳಿಗೆ ನೀರು ಹಾಯಿಸಲು, ತೋಟಗಳಿಗೆ ನೀರು ಸರಬರಾಜು ಮಾಡಲು, ನಳವನ್ನು ಸದಾಕಾಲ ತೆರೆದು ನೀರು ಹರಿಯುವಂತೆ ಮಾಡುವುದು, ಟ್ಯಾಂಕ್‍ನಿಂದ ನೀರು ಸೋರುವಿಕೆಯಾಗಲು ಹಾಗೂ ನೀರು ಹರಿಯುವಂತೆ ಪೋಲು ಮಾಡುವುದನ್ನು  ಸ್ಥಗಿತಗೊಳಿಸಬೇಕಾಗಿ ಮೈಸೂರು ಮಹಾನಗರ ಪಾಲಿಕೆಯವರು ಮನವಿ ಮಾಡಿದ್ದಾರೆ.
ಗ್ರಾಹಕರು ಕುಡಿಯುವ ನೀರು ಪಡೆಯಲು ಕೊಳವೆ ಮಾರ್ಗಕ್ಕೆ ಪಂಪ್ ಅಳವಡಿಸಿ ನೀರು ತೆಗೆದುಕೊಳ್ಳುವುದು, ನಳಗಳನ್ನು ಅಳವಡಿಸದೆ ಇರುವುದರಿಂದ ಅನ್ಯತಹ ನೀರು ಪೋಲಾಗುವುದು ಕಂಡುಬಂದಲ್ಲಿ ಅಂತಹ ಗ್ರಾಹಕರುಗಳ ಪಂಪ್‍ಗಳನ್ನು ವಶಕ್ಕೆ ತೆಗೆದುಕೊಂಡು ಹಿಂದಿರುಗಿಸುವುದಿಲ್ಲ. ಹಾಗೂ ನೀರು ಸರಬರಾಜು ಸಂಪರ್ಕವನ್ನು ಕಡಿತಗೊಳಿಸುವುದಲ್ಲದೆ ದಾವೆ ಹಾಕಲು ಕ್ರಮವಹಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ವಾಣಿವಿಲಾಸ ನೀರು ಸರಬರಾಜು ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Sunday 19 March 2017

ರಾಜ್ಯದ ಬೇರೆ ಜಿಲ್ಲೆಗಳಿಗಿಂತ ಮಂಡ್ಯ ಜಿಲ್ಲೆಯಲ್ಲಿ ಪೌರಾಣಿಕ ನಾಟಕಗಳಿಗೆ ವಿಶೇಷ

ಮಂಡ್ಯ ,19- ರಾಜ್ಯದ ಬೇರೆ ಜಿಲ್ಲೆಗಳಿಗಿಂತ ಮಂಡ್ಯ ಜಿಲ್ಲೆಯಲ್ಲಿ ಪೌರಾಣಿಕ ನಾಟಕಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಜಿಲ್ಲೆ ಪೌರಾಣಿಕ ನಾಟಕಗಳ ತೊಟ್ಟಿ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ವೈ.ಎನ್. ಶಂಕರೇಗೌಡ ತಿಳಿಸಿದರು.
ನಗರದ ಕಲಾಮಂದಿರದಲ್ಲಿ ಶ್ರೀ ರೇವಣಸಿದ್ದೇಶ್ವರ ಕಲಾ ಸಂಘದ ವತಿಯಿಂದ ನಡೆದ ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕ ಪ್ರದರ್ಶನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಪೌರಾಣಿಕ ನಾಟಕ ಕಲೆಯನ್ನು ಜೀವಂತವಾಗಿಟ್ಟಿರುವ ಜಿಲ್ಲೆ. ನಾಟಕಗಳನ್ನು ಉಳಿಸಿ ಬೆಳೆಸಿ ಕಾಪಾಡಿ ಎಂದು ಕರೆ ನೀಡಿದರು.
ಪೌರಾಣಿಕ ನಾಟಕಗಳ ಸಂಬಂಧ ರಾಜ್ಯದ ಇತರ ಜಿಲ್ಲೆಗಳೊಂದಿಗೆ ಉತ್ತಮ ಬಾಂಧವ್ಯ ಮೂಡಿಬರಲಿ ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ಎಂ. ಅಪ್ಪಾಜಪ್ಪ ಮಾತನಾಡಿ, ಈ ಬರಗಾಲದ ನಡುವೆಯೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಕಡಿಮೆ ಮಾಡಬೇಕಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲಿ ನೀರು ಸಿಗುತ್ತಿಲ್ಲವೋ  ಆ ಭಾಗಗಳಿಗೆ ಕಲಾ ಸಂಘಗಳ ಮೂಲಕ  ಟ್ಯಾಂಕರ್‍ಗಳನ್ನು ಬಾಡಿಗೆಗೆ ಪಡೆದು ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯಕ್ರಮ ರೂಪಿಸುವಂತೆ ಕರೆ ನೀಡಿದರು.
ಮಳೆ ಬೆಳೆ ಇಲ್ಲ, ಬರಗಾಲದ ತೀವ್ರತೆ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದೆ. ಇದರಿಂದಾಗಿ ಸಾಂಸ್ಕøತಿಕ ಕಾರ್ಯಕ್ರಮಗಳತ್ತ ರೈತರಿಗೆ ಒಲವು ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆ ಬೆಳೆ ಚೆನ್ನಾಗಿ ಆಗಿ  ರೈತನ ಬದುಕು ಹಸನಾಗಲಿ ಎಂದು ಆಶಿಸಿದರು.
ಭೆರವೇಶ್ವರ ಜಲ್ಲಿ ಕ್ರಷರ್ ಮಾಲೀಕ ಸಿ.ಕೆ. ದೇವರಾಜು, ಮಾಂಡವ್ಯ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಡಾ. ಉಮೇಶ್, ಮಾಸ್ಟರ್ ನಾಗಣ್ಣ, ಕಲಾವಿದರಾದ ಕಾಳೇನಹಳ್ಳಿ ಕೆಂಚೇಗೌಡ, ಸಾತನೂರು ವೆಂಕಟೇಶ್, ಕೆ.ಬಿ. ಬೋರೇಗೌಡ, ಸುರೇಶ್, ಕೆಪಿಸಿಸಿ ಮುಖಂಡ ರಮೇಶ್ ತಿಬ್ಬನಹಳ್ಳಿ ಇತರರು ಇದ್ದರು.

ಗುಣಮಟ್ಟದ ಹಾಲನ್ನು ಪೂರೈಸುವ ಮೂಲಕ ಒಕ್ಕೂಟದ ಬೆಳವಣಿಗೆಗೆ ಸಹಕರಿಸಬೇಕು-ಮನ್‍ಮುಲ್ ನಿರ್ದೇಶಕ ಎಸ್.ಪಿ. ಮಹೇಶ್

ಮಂಡ್ಯ,19. ಬರಗಾಲದ ನಡುವೆಯೂ ಹೈನುಗಾರಿಕೆಯನ್ನು ನಂಬಿರುವ ರೈತರು ಸ್ವಾಭಿಮಾನದ ಬದುಕು ನಡೆಸುತ್ತಿದ್ದಾರೆ. ಅದೇ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಬೇಕು ಹಾಗೂ ಉತ್ಪಾದಕರು ಡೈರಿಗಳಿಗೆ ಗುಣಮಟ್ಟದ ಹಾಲನ್ನು ಪೂರೈಸುವ ಮೂಲಕ ಒಕ್ಕೂಟದ ಬೆಳವಣಿಗೆಗೆ ಸಹಕರಿಸಬೇಕು ಎಂದು ಮನ್‍ಮುಲ್ ನಿರ್ದೇಶಕ ಎಸ್.ಪಿ. ಮಹೇಶ್ ತಿಳಿಸಿದರು.
ನಗರದ ರೈತ ಸಭಾಂಗದಣದಲ್ಲಿರುವ ಮನ್‍ಮುಲ್ ಉಪ ಕಚೇರಿಯಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಮೃತ ಸದಸ್ಯರ ವಾರಸುದಾರರ ಕುಟುಂಬಕ್ಕೆ ಪರಿಹಾರದ ಚೆಕ್ ಹಾಗೂ ಕಟ್ಟಡ ನಿರ್ಮಾಣ ಮಾಡುವ ಹಾಲು ಉತ್ಪಾದಕರ ಸಂಘಗಳಿಗೆ ಚೆಕ್ ಮತ್ತು ಶಿಕ್ಷಣ ಪೆÇ್ರೀ ತ್ಸಾಹ ಧನ ವಿತರಿಸಿ ಮಾತನಾಡಿ, ಹೆಚ್ಚು ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಭಿಸಬೇಕು. ಅದೇ ರೀತಿ ಜಾನುವಾರುಗಳಿಗೆ ತಪ್ಪದೇ ವಿಮೆ ಮಾಡಿಸಬೇಕು. ಶೇ. 70ರಷ್ಟನ್ನು ಒಕ್ಕೂಟವೇ ಭರಿಸುತ್ತದೆ. ಉಳಿದ ಶೇ. 30ರಷ್ಟನ್ನು ಉತ್ಪಾದಕರು ಭರಿಸಿ ತಪ್ಪದೇ ವಿಮೆ ಮಾಡಿಸುವಂತೆ ಸಲಹೆ ನೀಡಿದರು.
ಮೊತ್ತಹಳ್ಳಿಯ ಅಂಕುಗೌಡ ಎಂಬ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗೆ 20 ಸಾವಿರ, ಒಕ್ಕೂಟದ ಕಟ್ಟಡ ಅನುದಾನಕ್ಕೆ 3 ಲಕ್ಷ ರೂ. ಹಾಲು ಉತ್ಪಾದಕರ ಮೃತ 15 ಸದಸ್ಯರುಗಳ ಕುಟುಂಬಕ್ಕೆ ತಲಾ 10 ಸಾವಿರ ರೂ.ಗಳ ಚೆಕ್‍ನ್ನು ಮರಣ ಪರಿಹಾರ ನಿಧಿಯಿಂದ ವಿತರಿಸಿದರು.
ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕ ಡಾ. ಕೆ.ಎನ್. ಕೃಷ್ಣಮೂರ್ತಿ, ವಿಸ್ತರಣಾಧಿಕಾರಿಗಳಾದ ಎ.ಎಸ್. ಸಿದ್ದರಾಜು, ಶರತ್‍ಕುಮಾರ್, ತೇಜಸ್ವಿನಿ ಇತರರಿದ್ದರು.

ಉಪ ಚುನಾವಣೆ ಅನುಮಾನಸ್ಪದ ವಹಿವಾಟು ಕಂಡುಬಂದರೆ ನೀಡಲು : ಡಿ.ಸಿ. ಸೂಚನೆ

ಉಪ ಚುನಾವಣೆ ಅನುಮಾನಸ್ಪದ ವಹಿವಾಟು ಕಂಡುಬಂದರೆ ನೀಡಲು : ಡಿ.ಸಿ. ಸೂಚನೆ
ಮೈಸೂರು, ಮಾ.19. ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ನಡೆಯದಂತೆ ನೋಡಿಕೊಳ್ಳಲು ಬ್ಯಾಂಕುಗಳಲ್ಲಿ ಅನುಮಾನಾಸ್ಪದವಾಗಿ ವಹಿವಾಟು ನಡೆಸುವವರ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ರಂದೀಪ್ ಡಿ ಅವರು ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಮಾತನಾಡಿದರು. ನಂಜನಗೂಡು ಉಪಚುನಾವಣೆ ಪ್ರಕ್ರಿಯೆ ಈಗಾಗಲೇ ಜಾರಿಯಲ್ಲಿದ್ದು, ಏಪ್ರಿಲ್ 15 ರವರೆಗೆ ಹೆಚ್ಚಿನ ನಗದು ಹಿಂಪಡೆಯುವ ಮತ್ತು ವರ್ಗಾವಣೆ ಮಾಡುವವರ ವಹಿವಾಟಿನ ಬಗ್ಗೆ ಪ್ರತಿ ದಿನ ವರದಿ ನೀಡುವಂತೆ ತಿಳಿಸಿದರು.
ಚುನಾವಣಾ ಸಂದರ್ಭದಲ್ಲಿ ಅಕ್ರಮಕ್ಕೆ ಆಸ್ಪದ ನೀಡದೆ ಇರುವ ಉದ್ದೇಶದಿಂದ ಹಣ ವಹಿವಾಟು, ವಾಹನಗಳ ತಪಾಸಣೆ ಇನ್ನಿತರ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಒಂದು ಬ್ಯಾಂಕ್‍ನಿಂದ ಇನ್ನೊಂದು ಬ್ಯಾಂಕಿಗೆ ಅಥವಾ ಎ.ಟಿ.ಎಂಗೆ ಹಣ ಜಮೆ ಮಾಡುವಾಗ ಬ್ಯಾಂಕಿನ ಕ್ಯಾಷಿಯರ್ ಹಾಗೂ ಭದ್ರತಾ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಬಳಿ ಗುರುತಿನ ಚೀಟಿ ಹೊಂದಿರಬೇಕು ಹಾಗೂ ತಮ್ಮ ಬಳಿ ಇರುವ ನಗದು ಹಣದ ಬಗ್ಗೆ ದಾಖಲೆ ಹೊಂದಿರಬೇಕು ಎಂದರು.
ಒಬ್ಬರೇ ವ್ಯಕ್ತಿ ಕಾರಣ ಹಾಗೂ ಸೂಕ್ತ ದಾಖಲೆಗಳನ್ನು ನೀಡದೆ ಪ್ರತಿ ದಿನ ಹೆಚ್ಚು ಹಣ ಪಡೆಯುವುದು, ವರ್ಗಾವಣೆ ಮಾಡುವುದು ಅಥವ ಜಮೆ ಮಾಡುವ ಪ್ರಕ್ರಿಯೆ ಕಂಡುಬಂದಲ್ಲಿ ಪರಿಶೀಲಿಸಬೇಕು. ಯಾವುದೇ ನಿರ್ದಿಷ್ಟ ಉದ್ದೇಶವಿಲ್ಲದೆ ಅಸಹಜವಾಗಿ ಹಾಗೂ ಹೆಚ್ಚು ಪ್ರಮಾಣದಲ್ಲಿ ಹಣ ಹಿಂಪಡೆಯುವ ಅನುಮಾನಾಸ್ಪದ ಪ್ರಕ್ರಿಯೆಗಳು ನಡೆದರೆ ಹಾಗೂ ಸ್ವಸಹಾಯ ಗುಂಪುಗಳು, ಸ್ತ್ರೀ ಶಕ್ತಿ  ಸಂಘಗಳಿಗೆ ಬ್ಯಾಂಕುಗಳಿಂದ ಮಂಜೂರಾಗಿರುವ ಸಾಲ, ಫಲಾನುಭವಿಗಳಿಗೆ ಮಂಜೂರಾಗಿರುವ ಸವಲತ್ತು ಹಣ ಹೊರತುಪಡಿಸಿ ಹೆಚ್ಚಿನ ಮೊತ್ತದ ಹಣ ಜಮೆಯಾದಲ್ಲಿ ವರದಿ ಸಲ್ಲಿಸುವುದು. ಚುನಾವಣೆ ಅಕ್ರಮ ತಡೆಗಟ್ಟಲು ಬ್ಯಾಂಕ್ ವಹಿವಾಟಿನ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ ಎಂದು ಸಾರ್ವಜನಿಕರಿಗೆ ತಿಳಿಸಿ ಎಂದರು.
ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ.ಎನ್ ಶಿವಲಿಂಗಯ್ಯ, ಕೆನರಾ, ಎಸ್.ಬಿ.ಎಂ, ವಿಜಯಾ, ಸಿಂಡಿಕೇಟ್, ಕಾವೇರಿ ಗ್ರಾಮೀಣ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಎಂ.ಡಿ.ಸಿ.ಸಿ, ಐಓಬಿ ಹಾಗೂ ಇನ್ನಿತರ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.
ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
      ಮೈಸೂರು, ಮಾ.19-“2015-16ನೇ ಸಾಲಿನಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ವರ್ಗದ ಕಾಲೇಜು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲು  ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಜಿಯನ್ನು ಮಾರ್ಚ್ 20 ರೊಳಗೆ
ಸಲ್ಲಿಸಬಹುದಾಗಿದೆ. ಈವರೆವಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಸಲ್ಲಿಸದಿರುವ ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ವರ್ಗದ ಕಾಲೇಜು ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯುತ್ ನಿಲುಗÀಡೆ
     

33 ದೂರು ದಾಖಲಿಸಿ ರೂ. 6,300/- ದಂಡ ವಸೂಲಿ
    ಮೈಸೂರು.ಮಾ.19. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗು ಜಿಲ್ಲಾ ತಂಬಾಕು ನಿಷೇಧ ಕೋಶದ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಅಔಖಿPಂ   ಕಾಯಿದೆ 2003ರ ಅಡಿಯಲ್ಲಿ ಸೆಕ್ಷನ್ 4  ಉಲ್ಲಂಘಿಸಿದವರ ವಿರುದ್ದ ಇತ್ತೀಚೆಗೆ ಮೈಸೂರು  ಟೌನಿನ ವಿ.ವಿ.ಮೊಹಲ್ಲಾದ ವ್ಯಾಪ್ತಿಯಲ್ಲಿ  ದಾಳಿ ನಡೆಸಲಾಯಿತು.
    ಅಔಖಿPಂ  ಕಾಯಿದೆ 2003 ಉಲ್ಲಂಘಿಸಿದವರ ವಿರುದ್ದ 33 ದೂರು ದಾಖಲಿಸಿ ರೂ. 6,300/- ದಂಡ ವಸೂಲಿ ಮಾಡಲಾಯಿತು. ದಾಳಿ ವೇಳೆಯಲ್ಲಿ ನಕಲಿ ಬೀಡಿ, ನಕಲಿ ಜಗಿಯುವ ತಂಬಾಕು ಮತ್ತು ಸಿಗರೇಟುಗಳನ್ನು ಜಪ್ತಿ ಮಾಡಲಾಯಿತು. ಈ ದಾಳಿಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕುಸುಮ ಹಾಗೂ ರವರ ನೇತೃತ್ವದಲಿ ಹಾಗೂ ಪೋಲೀಸ್ ನಿರೀಕ್ಷಕರು ಸಿ.ವಿ.ರವಿರವರ ಸಹಯೋಗದೊಂದಿಗೆ ನಡೆಸಲಾಯಿತು. ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರ ಶಿವಕುಮಾರ್ ಜಿ. ಜಿಲ್ಲಾ ಸಮಾಜ ಕಾರ್ಯಕರ್ತ ನವೀದುಲ್ಲಾ ಷರೀಫ್, ವಿ.ವಿ.ಮೊಹಲ್ಲಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಪೇದೆಯಾದ ಹನುಮಂತ ಮತ್ತು ಪೇದೆ ಮಹೇಶ್  ಭಾಗಿಯಾಗಿದ್ದರು.
 
ಕಚೇರಿ ಸ್ಥಳಾಂತರ
      ಮೈಸೂರು.ಮಾ.19. ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿಯು ಹಾಲಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಆವರಣ ನಜûರ್‍ಬಾದ್ ಮೈಸೂರು -10 ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯು ಸ್ಥಳಂತರವಾಗಿದ್ದು, ಮಾರ್ಚ್ 20 ಮೈಸೂರು. ಡಾ.ಬಾಬು ಜಗಜೀವನರಾಂ ಭವನದ ಕಟ್ಟಡ, ನಾರಾಯಣಸ್ವಾಮಿ ಬ್ಲಾಕ್, ಆದಿಪಂಪಾ ರಸ್ತೆ, ಒಂಟಿಕೊಪ್ಪಲು ಮೈಸೂರು ಇಲ್ಲಿ ಕಾರ್ಯನಿರ್ವಹಿಸಲಿದೆ ಹೆಚ್ಚಿನ ಮಾಹಿತಿಗೆ  ದೂರವಾಣಿ ಸಂಖ್ಯೆ 0821-2344661 ನ್ನು ಸಂಪರ್ಕಿಸುವುದು.