Monday, 18 January 2016
Friday, 15 January 2016
ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರೆಯ ಸಕಲ ಸಿದ್ಧತೆಗೆ ಸೂಚನೆ
ಮೈಸೂರು,ಜ.14-ನಂಜನಗೂಡು ತಾಲ್ಲೂಕಿನ ಪ್ರಸಿದ್ಧ ಶ್ರೀ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಧಿಕಾರಿಗಳು ಶೀಘ್ರ ಸಕಲ ಸಿದ್ಧತೆ ಕೈಗೊಳ್ಳುಬೇಕು ಎಂದು ಅಪರ ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದರು.
ಇಂದು ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ದಾಸೋಹ ಭವನದ ವಿ.ಐ.ಪಿ ಹಾಲ್ ನಡೆದ ಶ್ರೀ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾರ್ಚ್ 14 ರಿಂದ 25ರವರೆಗೆ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಹಲವು ಉತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರ ಸಹಕಾರ ಪಡೆದು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.
ಮಾರ್ಚ್ 21 ರಂದು ರಥೋತ್ಸವ ಜರುಗಲಿದ್ದು, ರಥಗಳು ಬರುವ ನಾಲ್ಕು ಬೀದಿಗಳಲ್ಲಿ ರಥಗಳ ಚಲನೆಗೆ ಯಾವುದೇ ಅಡೆತಡೆ ಆಗದಂತೆ ರಸ್ತೆಗಳ ಸಮತಟ್ಟು ಮಾಡಬೇಕು. ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಸೂಕ್ತ ಸ್ಥಳಗಳಳ್ಲಿ ತಾತ್ಕಾಲಿಕ ನಲ್ಲಿಗಳನ್ನು ಹಾಕಬೇಕು. ದೇವಾಲಯದ ಸುತ್ತಲು ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಕಸದ ತೊಟ್ಟಿಗÀಳಿಂದ ಕಸ ಸಾಗಿಸಲು ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮವನ್ನು ನಂಜನಗೂಡು ನಗರ ಸಭೆ ಕೈಗೊಳ್ಳಬೇಕು ಎಂದರು.
ಪೊಲೀಸ್ ಇಲಾಖೆ ಜಾತ್ರೆ ನಡೆಯುವ ದಿನದಂದು, ಅಗತ್ಯ ಬಂದೋಬಸ್ತು ಮಾಡಬೇಕು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳ ವಾಹನಗಳು ಬರುವುದರಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಮಾತ್ರ ವಾಹನ ನಿಲುಗಡೆಗೆ ವ್ಯವಸ್ಥೆ, ಭಕ್ತಾದಿಗಳ ನೂಕು-ನುಗ್ಗಲು ನಿಯಂತ್ರಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಭಕ್ತಾದಿಗಳು ಸಂಚರಿಸುವ ಮುಖ್ಯ ಸ್ಥಳಗಳಲ್ಲಿ ಕಳ್ಳತನ ಆಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಜಾತ್ರಾ ದಿನಗಳಲ್ಲಿ ದೇವಸ್ತಾನಕ್ಕೆ ಬರುವ ಭಕ್ತಾದಿಗಳಿಗೆ ತಾತ್ಕಾಲಿಕ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆಗೆ ನಂಜನಗೂಡು ತಾಲ್ಲೂಕು ಪಂಚಾಯತ್ ಅಗತ್ಯ ಕ್ರಮಕೈಗೊಳ್ಳಬೇಕು. ರಥೋತ್ಸವದ ಅಂಗವಾಗಿ ನಡೆಯುವ ಉತ್ಸವಾದಿಗಳು ಮತ್ತು ತೆಪ್ಪೋತ್ಸವದ ಕಾಲದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗದಂತೆ ಇಂಧನ ಇಲಾಖೆ ಎಚ್ಚರವಹಿಸಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯವಿರುವ ಸ್ಥಳಗಳಲ್ಲಿ ಹೆಚ್ಚುವರಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದು ನಿರ್ದೇಶಿಸಿದರು.
ಕಬಿನ ನೀರಾವರಿ ಇಲಾಖೆಯು ಜಾತ್ರೆ ಮುಗಿಯುವವರೆಗೂ ಭಕ್ತಾದಿಗಳು ಹಾಗೂ ಸಾರ್ವಜನಿಕರು ಸೌಕರ್ಯಕ್ಕಾಗಿ ನದಿಯಲ್ಲಿ ಮತ್ತು ಹುಲ್ಲಹಳ್ಳಿ ನಾಲೆಯಲ್ಲಿ ನೀರನ್ನು ಹರಿಸಬೇಕು. ಕಪಿಲಾ ನದಿಯಲ್ಲಿ ತ್ಯಾಜ್ಯ ವಸ್ತುಗಳನ್ನು ತೆಗೆಸಿ ಭಕ್ತಾದಿಗಳಿಗೆ ಸ್ನಾನಕ್ಕಾಗಿ ವ್ಯವಸ್ಥೆ ಮಾಡಬೇಕು. ತೆಪ್ಪೋತ್ಸವದ ಅಂಗವಾಗಿ ಮಾರ್ಚ್ 23 ರಂದು ನದಿಯಲ್ಲಿ ದೋಣಿಯ ಚಾಲನೆಗೆ ಅಗತ್ಯ ನೀರನ್ನು ನದಿಗೆ ಹರಿಬಿಡಲು ಕ್ರಮವಹಿಸಬೇಕು ಎಂದರು.
ರಥೋತ್ಸವ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಆರೋಗ್ಯ ಇಲಾಖೆವಹಿಸಬೇಕು. ದೇವಾಲಯದ ಹತ್ತಿರ ತಾತ್ಕಾಲಿಕ ಪ್ರಥಮ ಚಿಕಿತ್ಸೆ ಹಾಗೂ ಆರೋಗ್ಯ ಕೇಂದ್ರ ತೆರೆದು, ಆಂಬ್ಯುಲೆನ್ಸ್ ವಾಹನದೊಂದಿಗೆ ಸಾಕಷ್ಟು ಸಿಬ್ಬಂದಿ ನಿಯೋಜಿಸಬೇಕು. ಅಲ್ಲದೆ ಭಕ್ತಾದಿಗಳಿಗೆ ಅಗತ್ಯ ಔಷದೋಪಚಾರ ಮಾಡಲು ಸಿದ್ಧರಿರಬೇಕು. ರಥೋತ್ಸವದ ದಿನದಂದು ರಥಗಳು ಸಂಚರಿಸುವ ಬೀದಿಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ಇಲಾಖೆ ಎರಡು ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ರಥೋತ್ಸವ ಮತ್ತು ತೆಪ್ಪೋತ್ಸವದ ದಿನಗಳಲ್ಲಿ ನಂಜನಗೂಡಿಗೆ ಹಲವು ಭಾಗಗಳಿಂದ ಬರುವ ಭಕ್ತಾದಿಗಳಿಗೆ ಸೌಕರ್ಯಕ್ಕಾಗಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ. ರಥೋತ್ಸವ ದಿನದಂದು ಮುಗಿಯುವವರೆಗೆ ರಥಗಳ ಜೊತೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎರಡು ಹೆವೀ ಕ್ರೇನ್ ವ್ಯವಸ್ಥೆ ಮಾಡಬೇಕು. ದೂರಸಂಪರ್ಕ ಇಲಾಖೆಯು ರಥಗಳು ಚಲಿಸುವ ಮಾರ್ಗದಲ್ಲಿ ಅಡ್ಡಲಾಗಿರುವ ತಂತಿಗಳನ್ನು ತೆಗೆದು ರಥಗಳು ಸ್ವಸ್ಥಾನಕ್ಕೆ ಬಂದ ನಂತರ ಮರು ಸಂಪರ್ಕ ಕಲ್ಪಿಸುಲು ಕ್ರಮವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಮೈಸೂರು ಉಪ ವಿಭಾಗಾಧಿಕಾರಿ ಆನಂದ್, ಉಪ ಪೊಲೀಸ್ ವರಿಷ್ಠ್ಠಾಧಿಕಾರಿ ದಿವ್ಯ ಸಾರಾ ಥಾಮಸ್, ತಹಶೀಲ್ದಾರ್ ರಾಮಯ್ಯ, ತಾ.ಪಂ. ಕಾರ್ಯನಿರ್ವಹಕ ಅಧಿಕಾರಿ ಕೃಷ್ಣರಾಜು, ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ಕಾರ್ಯನಿರ್ವಹಕ ಅಧಿಕಾರಿ ಜಯಪ್ರಕಾಶ್, ತಾ.ಪಂ. ಅಧ್ಯಕ್ಷೆ ಸವಿತಾ, ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ, ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಮೋಹನ್ ಹಾಗೂ ಇತರರು ಭಾಗವಹಿಸಿದರು.
ಗ್ರಂಥಾಲಯಗಳ ಬೆಳವಣಿಗೆಗೆ ಸಂಪೂರ್ಣ ಸಹಕಾರ : ಬಿ.ಎಲ್ ಭೈರಪ್ಪ
ಮೈಸೂರು,ಜ.14.ಮೈಸೂರು ನಗರ ಗ್ರಂಥಾಲಯ ಪ್ರಾಧಿಕಾರದ 2016-17 ನೇ ಸಾಲಿನ ರೂ. 350 ಲಕ್ಷಗಳ ಆಯ-ವ್ಯಯವನ್ನು ಅನುಮೋದಿಸಿ, ನಗರ ಕೇಂದ್ರ ಗ್ರಂಥಾಲಯಕ್ಕೆ ಸೇರಿದ ಪೀಪಲ್ಸ್ ಪಾರ್ಕ್ ನಿವೇಶನದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಲು ರೂ. 1.25 ಕೋಟಿ ಗ್ರಂಥಾಲಯ ಕರವನ್ನು ಸರ್ಕಾರದ ತೀರ್ಮಾನದಂತೆ ನಗರ ಗ್ರಂಥಾಲಯ ಪ್ರಾಧಿಕಾರ ನಿಧಿಗೆ ಪಾವತಿಸಲಾಗುವುದು ಹಾಗೂ ಗ್ರಂಥಾಲಯಗಳ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಮೈಸೂರು ಮಹಾನಗರ ಪಾಲಿಕೆ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ಬಿ.ಎಲ್.ಭೈರಪ್ಪ ಅವರು ತಿಳಿಸಿದರು.
ಅವರು ಇತ್ತೀಚೆಗೆ ಮೈಸೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಮೈಸೂರು ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಮೈಸೂರು ನಗರ ಕೇಂದ್ರ ಗ್ರಂಥಾಲಯದ ಅಧೀನದಲ್ಲಿ ವಿವಿಧ ಬಡಾವಣೆಗಳಲ್ಲಿರುವ ಗ್ರಂಥಾಲಯಗಳು ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಖಾ/ಸೇವಾ ಕೇಂದ್ರ ಗ್ರಂಥಾಲಯಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಿ ಕಟ್ಟಡಗಳನ್ನು ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜೆ.ಪಿ.ನಗರ ಶಾಖಾ ಗ್ರಂಥಾಲಯದಲ್ಲಿರುವ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯಕ್ಕೆ 30x40 ಅಳತೆಯ ಖಾಲಿ ನಿವೇಶನವನ್ನು ನೀಡುವುದರ ಜೊತೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರ ಗ್ರಂಥಾಲಯ ಪ್ರಾಧಿಕಾರ ನಿಧಿಗೆ ಪಾವತಿಸ ಬೇಕಾದÀ ಬಾಕಿ ಗ್ರಂಥಾಲಯ ಕರದ ಮೊತ್ತದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.
ಶಾಖಾ ಗ್ರಂಥಾಲಯಗಳು ಇಲ್ಲದೇ ಇರುವ ಸುಮಾರು 40 ವಾರ್ಡ್ಗಳಲ್ಲಿ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕಟ್ಟಡಗಳು, ಸಮುದಾಯ ಭವನಗಳಲ್ಲಿ ವಾಚನಾಲಯ ಪ್ರಾರಂಭಿಸಲು ಮಹಾನಗರ ಪಾಲಿಕೆಯ ಸದಸ್ಯರುಗಳೊಂದಿಗೆ ಚರ್ಚಿಸಿ, ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿ, ವಾಚನಾಲಯಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಎಲ್ಲಾ ಗ್ರಂಥಾಲಯಗಳ/ವಾಚನಾಲಯಗಳಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸಲು ಗ್ರಂಥಾಲಯ ವಿಜ್ಞಾನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳನ್ನು ಅಪ್ರೆಂಟಿಸ್ ರೂಪದಲ್ಲಿ ತೆಗೆದುಕೊಂಡು ಅವರಿಗೆ ಸ್ಟೈಪೆಂಡರಿಯೊಂದಿಗೆ ತರಬೇತಿ ನೀಡಲೂ ಅಧಿಕಾರಿಗಳಿಗೆ ತಿಳಿಸಿದರು.
ಮೈಸೂರಿನ ವಿವಿಧ ಬಡಾವಣೆಗಳಲ್ಲೂ ಗ್ರಂಥಾಲಯ ಕಟ್ಟಡ ನಿರ್ಮಿಸಲು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ನಿವೇಶಗಳನ್ನು ಉಚಿತವಾಗಿ ನೀಡುವಂತೆ ಹಾಗೂ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಮೈಸೂರು ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ಪಾವತಿಬೇಕಾದ ಗ್ರಂಥಾಲಯ ಕರದ ಬಾಕಿ ಮೊತ್ತವನ್ನು ಪಾವತಿಸಲು ಸಭೆಯಲ್ಲಿ ಹಾಜರಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಆರ್. ಮಂಜುನಾಥ್ ರವರಿಗೆ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ಬಾಕಿ ಬರಬೇಕಾದ ಸುಮಾರು ರೂ. 9 ಕೋಟಿ ಮೊತ್ತವನ್ನು ನಗರದ ವಿವಿಧ ಬಡಾವಣೆಗಳಲ್ಲಿಯೂ ಗ್ರಂಥಾಲಯ ಕಟ್ಟಡವನ್ನು ನಿರ್ಮಿಸಲು ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ ವೆಚ್ಚ ಮಾಡಲಾಗುವುದು ಎಂದರು.
ಕುವೆಂಪುನಗರ ಕಾಂಪ್ಲೆಕ್ಸ್ ಬಳಿ ಇರುವ ಹೌಸಿಂಗ್ ಬೋರ್ಡ್, ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಖಾಲಿ ಇರುವ ಕಟ್ಟಡದಲ್ಲಿ ಗ್ರಂಥಾಲಯ ಪ್ರಾರಂಭಿಸಲು ಪರಿಶೀಲನೆ ನಡೆಸಲಾಗುವುದು ಎಂದರು.
34 ರ ಮೇದರ್ ಬ್ಲಾಕ್ ಸಮುದಾಯ ಭವನದಲ್ಲಿ ಹಾಗೂ ವಾರ್ಡ್ ಸಂಖ್ಯೆ: 18 ರಲ್ಲಿ ಕುವೆಂಪು ಪ್ರತಿಮೆಯ ಕೆಳ ಭಾಗದಲ್ಲಿರುವ ವಾಚನಾಲಯ ಕಟ್ಟಡದಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸಲು ಸದರಿ ಕಟ್ಟಡಗಳನ್ನು ನಗರ ಕೇಂದ್ರ ಗ್ರಂಥಾಲಯಕ್ಕೆ ಹಸ್ತಾಂತರಿಸುವುದಾಗಿ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರಿಂದ ವಸೂಲು ಮಾಡುವ ಶೇ 6% ರ ಗ್ರಂಥಾಲಯ ಕರವನ್ನು ನೇರವಾಗಿ ಗ್ರಂಥಾಲಯ ಇಲಾಖೆಯ ಖಾತೆಗೆ ಜಮಾ ಮಾಡುವ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲಾಗುವುದು. ಜೆ.ಪಿ.ನಗರ, ಉದಯಗಿರಿ, ರಾಮಕೃಷ್ಣನಗರ, ವಿವೇಕಾನಂದನಗರ ಶಾಖೆಗಳಲ್ಲಿನ ಗ್ರಂಥಗಳನ್ನು ಗಣಕೀಕರಣಗೊಳಿಸಲು ಬೇಕಾಗುವ ವೆಚ್ಚವನ್ನು ಮೈಸೂರು ಮಹಾನಗರ ಪಾಲಿಕೆಯಿಂದ ಬಾಕಿ ಇರುವ ಗ್ರಂಥಾಲಯ ಕರದ ಮೊತ್ತವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರ ಕೇಂದ್ರ ಗ್ರಂಥಾಲಯದ ಶತಮಾನೋತ್ಸವ ಸಮಾರಂಭ ಯಶಸ್ವಿಯಾಗಿ ನಡೆಸಲು ಸಹಕಾರ ನೀಡಿದ ಮಾಜಿ ಮಹಾಪೌರರಾದ ಆರ್.ಲಿಂಗಪ್ಪ, ನಗರ ಪಾಲಿಕೆ ಸದಸ್ಯ ಕೆ.ಟಿ.ಚಲುವೇಗೌಡ ಹಾಗೂ ಮಹಾಪೌರರನ್ನು ನಗರ ಗ್ರಂಥಾಲಯ ಪ್ರಾಧಿಕಾರದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಮೈಸೂರು ನಗರ ಗ್ರಂಥಾಲಯ ಪ್ರಾಧಿಕಾರದ ಕಾರ್ಯದರ್ಶಿಗಳು ಆದ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಬಿ. ಮಂಜುನಾಥ್, ನಗರ ಕೇಂದ್ರ ಗ್ರಂಥಾಲಯದ ಅಧೀಕ್ಷಕ ಮನು.ಎಂ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ರೈಲ್ವೆ ನೇಮಕಾತಿ ಮಂಡಳಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು,ಜ.14.ರೈಲ್ವೆ ನೇಮಕಾತಿ ಮಂಡಳಿ (ಖಖಃ) ಯಲ್ಲಿ ಖಾಲಿ ಇರುವ ಕರ್ಮಷಿಯಲ್ ಅಪ್ರಂಟೀಸ್, ಟ್ರಾಫಿಕ್ ಅಪ್ರಂಟೀಸ್, ಗೂಡ್ಸ್ ಗಾರ್ಡ್, ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಅಸಿಸ್ಟೆಂಟ್, ಕಿರಿಯ ಲೆಕ್ಕ ಸಹಾಯಕರು ಹಾಗು ಬೆರಳಚ್ಚುಗಾರರು, ಹಿರಿಯ ಗುಮಾಸ್ತ ಹಾಗು ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 18-32 ವರ್ಷ ವಯೋಮಿತಿಯೊಳಗಿರಬೇಕು ಪ.ಜಾ/ಪ.ಪಂ.ದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ರಿಯಾಯಿತಿ ಇರುತ್ತದೆ. ಕರ್ಮಷಿಯಲ್ ಅಪ್ರಂಟೀಸ್, ಟ್ರಾಫಿಕ್ ಅಪ್ರಂಟೀಸ್, ಗೂಡ್ಸ್ ಗಾರ್ಡ್, ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಕಿರಿಯ ಲೆಕ್ಕ ಸಹಾಯಕರು ಹಾಗೂ ಬೆರಳಚ್ಚುಗಾರರು ಮತ್ತು ಹಿರಿಯ ಗುಮಾಸ್ತ ಹಾಗೂ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಟೈಪಿಂಗ್ನಲ್ಲಿ ಪರಿಣಿತಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಸಲ್ಲಿಸುವವರು ಜನವರಿ 25 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಹಾಗೂ ಪರೀಕ್ಷಾ ವಿಧಾನ, ನೇಮಕಾತಿಯ ಪರಿಪೂರ್ಣ ಮಾಹಿತಿಗಾಗಿ ತಿತಿತಿ.ಡಿಡಿbbಟಿಛಿ.gov.iಟಿ ವೆಬ್ಸೈಟ್ ಅಥವಾ ಉಪಮುಖ್ಯಸ್ಥರು, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ , ಮೈಸೂರು ಇವರನ್ನು ಸಂಪರ್ಕಿಸಬಹುದು.
ಪೊಲೀಸ್ ಸಬ್ಇನ್ಸ್ಪೆಕ್ಟರ್ ಮತ್ತು ಪಿ.ಡಿ.ಒ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ
ಮೈಸೂರು,ಜ.14.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಬರುವ ಏಪ್ರಿಲ್ ಮಾಹೆಯ ಒಳಗೆ ನಡೆಸಲಿರುವ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮತ್ತು ಪಿ.ಡಿ.ಒ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಟ್ಟು 50 ದಿನಗಳ ತರಬೇತಿ ನೀಡಲಾಗುವುದು.
ಆಸಕ್ತರು ದಿನಾಂಕ: 19.01.2016ರ ಒಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಕ್ಕೆ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸುವುದು.
ಸಹಕಾರ ಸಂಘಗಳÀ ನೋಂದಣಿ ರದ್ಧತಿ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಮೈಸೂರು,ಜ.14-ಹೆಚ್.ಡಿ.ಕೋಟೆ ತಾಲ್ಲೂಕಿನ ಕುಣಿಗಲ್, ಕೃಷ್ಣಾಪುರ ಹಾಗೂ ಎಂ. ಕನ್ನೇನಹಳ್ಳಿಯಲ್ಲಿರುವ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ಚಿಕ್ಕೆರೆಯೂರಿನಲ್ಲಿರುವ ವೀರಭದ್ರೇಶ್ವರ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ಕನ್ನೇನಹಳ್ಳಿಯಲ್ಲಿರುವ ಮಹಾತ್ಮಾಜಿ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ, ಗರಿಕೆಕಟ್ಟೆ ಕಾವಲ್ನಲ್ಲಿರುವ ಚಾಮುಂಡೇಶ್ವರಿ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ದೊಡ್ಡಕೆರೆಯೂರಿನಲ್ಲಿರುವ ನಂಜುಂಡೇಶ್ವರ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ಮೇಟಿಕುಪ್ಪೆ, ಚನ್ನಗುಂಡಿ, ಕೆ.ಬೆಳತ್ತೂರು, ಹಂಚಿಪುರದಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘ ನಿ, ಕಾಟವಾಳು, ಕಾನಕನಹಳ್ಳಿ, ಕೆಂಚನಹಳ್ಳಿ, ಎಲೆಹುಂಡಿಯಲ್ಲಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ, ಪುರದಲ್ಲಿರುವ ಬಳಪದ ಕಲ್ಲಿನ ಕೈಗಾರಿಕಾ ಸಹಕಾರ ಸಂಘ ನಿ.,ಶಿಂಡೇನಹಳ್ಳಿಯಲ್ಲಿರುವ ಕನಕದಾಸ ಗ್ರಾಮಾಂತರ ಕೈಗಾರಿಕಾ ಸಹಕಾರ ಸಂಘ ನಿ.,ಪಿರಿಯಾಪಟ್ಟಣ ತಾಲ್ಲೂಕು, ಸಂಗರ ಶೆಟ್ಟಹಳ್ಳಿ, ರಾಜನಬೆಳಗುಲಿ, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ, ಕಿತ್ತೂರಿನಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಕೆ.ಆರ್.ನಗರ ತಾಲ್ಲೂಕಿನ ಬೆಣಗನಹಳ್ಳಿಯಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಚುಂಚನಕಟ್ಟೆ, ಶ್ರೀರಾಮ ಸಕ್ಕರೆ ಕಾರ್ಖಾನೆ ನೌಕರರ ಸಹಕಾರ ಸಂಘ ನಿ ಹಾಗೂ ಕಿತ್ತೂರಿನಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಸಮಾಪನೆಗೊಂಡಿದ್ದು, ನೋಂದಣಿ ರದ್ಧತಿಗೆ ಸಮಾಪನಾಧಿಕಾರಿಗಳು ಕ್ರಮವಹಿಸಿರುತ್ತಾರೆ.
ಸಮಾಪನಾಧಿಕಾರಿಗಳಿಗೆ ಸದರಿ ಸಂಘಗಳಿಗೆ ಸಂಬಂಧಿಸಿದ ಲೆಕ್ಕಪುಸ್ತಕಗಳಾಗಲೀ, ಇದನ್ನು ಹೊಂದಿರುವವರ ಮಾಹಿತಿಯಾಗಲಿ ಲಭ್ಯವಿರುವುದಿಲ್ಲ. ಸಂಘಗಳು ಬೈಲಾ ರೀತ್ಯಾ ಉದ್ದೇಶಗಳನ್ನು ಈಡೇರಿಸದೆ ಇರುವುದರಿಂದ ಹಾಗೂ ಈ ಸಂಘಗಳು ಅನುಪಯುಕ್ತವಾಗಿ ಮುಂದುವರೆಯುತ್ತಿರುವುದರಿಂದ ಈ ಸಂಘಗಳ ಆಸ್ತಿ-ಜವಾಬ್ದಾರಿಯನ್ನು ನಿಯಮಾನುಸಾರ ವಿಲೇವಾರಿ ಮಾಡಿ ಸಂಘದ ನೊಂದಣಿಯನ್ನು ರದ್ಧುಪಡಿಸಲು ತೀರ್ಮಾನಿಸಿರುತ್ತಾರೆ.
ಸದರಿ ಸಂಘದ ರದ್ಧತಿಯ ಬಗ್ಗೆ ಸದಸ್ಯರುಗಳಿಗಾಗಲಿ ಅಥವಾ ಸಾರ್ವಜನಿಕರಿಗಾಗಲೀ ಆಕ್ಷೇಪಣೆಗಳಿದ್ದಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿಗಳಿಗೆ ಈ ಪ್ರಕಟಣೆ ಪ್ರಕಟಗೊಂಡ 15 ದಿನದೊಳಗಾಗಿ ಸಲ್ಲಿಸುವ್ಯದು ಎಂದು ಸಮಾಪನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಸ್ಕೆಟ್ಬಾಲ್ ಚಾಂಪಿಯನ್ಶಿಪ್ : ಸಮಾರೋಪ ಸಮಾರಂಭ
ಮೈಸೂರು,ಜ.14.ಕರ್ನಾಟಕ ರಾಜ್ಯ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ 66ನೇ ಹಿರಿಯರ ಪುರುಷ ಮತ್ತು ಮಹಿಳಾ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯ ಸಮಾರೋಪ ಸಮಾರಂಭ ಜನವರಿ 16 ರಂದು ಸಂಜೆ 4-30 ಗಂಟೆಗೆ ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ. ಪರಮೇಶ್ವರ, ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ವಸತಿ ಸಚಿವ ಎಂ.ಹೆಚ್. ಅಂಬರೀಶ್, ಸಹಕಾರ ಹಾಗೂ ಸಕ್ಕರೆ ಸಚಿವ ಮಹದೇವ ಪ್ರಸಾದ್, ಯುವ ಸಬಲೀಕರಣ, ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ, ಸಂಸತ್ ಸದಸ್ಯರಾದ ಆರ್. ಧ್ರುವನಾರಾಯಣ್, ಪ್ರತಾಪ್ ಸಿಂಹ, ವಿಧಾನ ಸಭಾ ಸದಸ್ಯರಾದ ತನ್ವೀರ್ ಸೇಠ್, ವಾಸು, ಎಂ.ಕೆ. ಸೋಮಶೇಖರ್, ಜಿ.ಟಿ. ದೇವೇಗೌಡ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಬಿ.ಎಲ್. ಭೈರಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ನೋಂದಣಿ ಆರಂಭ
ಮೈಸೂರು,ಜ.14, 8 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ ಜನವರಿ 28 ರಿಂದ ಫೆಬ್ರವರಿ 4 ರವರೆಗೆ ಬೆಂಗಳೂರು ಮತ್ತು ಮೈಸೂರು ನಗರಗಳಲ್ಲಿ ಏಕಕಾಲಕ್ಕೆ ನಡೆಯಲಿದೆ.
ಈ ಚಿತ್ರೋತ್ಸವದಲ್ಲಿ ಭಾಗವಹಿಸುವವರು ಹೆಸರು ನೊಂದಣಿ ಮಾಡಿಕೊಳ್ಳಬೇಕಿದ್ದು, ನೊಂದಣಿ ಕಾರ್ಯ ಧನ್ವಂತ್ರಿ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಾಲಯದಲ್ಲಿ ನಡೆಯುತ್ತಿದೆ. (ನೊಂದಣಿ ಸಂದರ್ಭದಲ್ಲಿ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು. ಒಂದು ಸಾವಿರ ಜನರಿಗೆ ಮಾತ್ರ ನೊಂದಣಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.)
7 ದಿನಗಳ ಪ್ರದರ್ಶನಕ್ಕೆ ಪ್ರತಿನಿಧಿಗಳಾಗಲು ನೋಂದಣಿ ದರ ಸಾರ್ವಜನಿಕರಿಗೆ 600/-ರೂ, ವಿದ್ಯಾರ್ಥಿಗಳಿಗೆ, ಚಿತ್ರ ಸಮಾಜದ ಸದಸ್ಯರಿಗೆ, ಹಿರಿಯ ನಾಗರಿಕರಿಗೆ ಮತ್ತು ಚಿತ್ರೋದ್ಯಮದ ಪ್ರತಿನಿಧಿಗಳಿಗೆ 300/- ರೂ.ಗಳಾಗಿರುತ್ತದೆ.
ಪ್ರತಿನಿಧಿಗಳಾಗಿ ನೊಂದಾಯಿಸಿಕೊಂಡವರು ಮೈಸೂರಿನ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ 4 ತೆರೆಗಳಲ್ಲಿ ಸಿನಿಮಾಗಳನ್ನು ವೀಕ್ಷಿಸಬಹುದು. ಅಲ್ಲದೆ ಇಚ್ಚಿಸಿದಲ್ಲಿ ಬೆಂಗಳೂರಿನ ರಾಜಾಜಿ ನಗರದ ಓರಿಯನ್ ಮಾಲ್ನ ಪಿವಿಆರ್ ಸಿನಿಮಾದ 11 ತೆರೆಗಳಲ್ಲಿ ಸಿನಿಮಾವನ್ನು ವೀಕ್ಷಿಸಬಹುದು.
ಈ ಚಿತ್ರೋತ್ಸವದಲ್ಲಿ 61 ದೇಶಗಳ 170 ಚಿತ್ರಗಳು ಪ್ರದರ್ಶನಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2420050 ಯನ್ನು ಸಂಪರ್ಕಿಸುವುದು.
ಪ್ರಮೋದ್ ಕುಮಾರ್ ಅವರಿಗೆ ಪಿಎಚ್.ಡಿ. ಪದವಿ
ಮೈಸೂರು,ಜ.14-ಮೈಸೂರು ವಿಶ್ವವಿದ್ಯಾಲಯವು ಪ್ರಮೋದ್ ಕುಮಾರ್ ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ. ಡಾ. ಎನ್. ಸುರೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “ಭರತೇಶ ವೈಭವದ ಸಾಂಸ್ಕøತಿಕ ನೋಟ” ಕುರಿತು ಸಾದರಪಡಿಸಿದ ಎಚಿiಟಿoಟogಥಿ & Pಡಿಚಿಞಡಿiಣs ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ಪ್ರಮೋದ್ ಕುಮಾರ್ ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.
ಮೈಸೂರು,ಜ.14-ನಂಜನಗೂಡು ತಾಲ್ಲೂಕಿನ ಪ್ರಸಿದ್ಧ ಶ್ರೀ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಧಿಕಾರಿಗಳು ಶೀಘ್ರ ಸಕಲ ಸಿದ್ಧತೆ ಕೈಗೊಳ್ಳುಬೇಕು ಎಂದು ಅಪರ ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದರು.
ಇಂದು ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ದಾಸೋಹ ಭವನದ ವಿ.ಐ.ಪಿ ಹಾಲ್ ನಡೆದ ಶ್ರೀ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾರ್ಚ್ 14 ರಿಂದ 25ರವರೆಗೆ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಹಲವು ಉತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರ ಸಹಕಾರ ಪಡೆದು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.
ಮಾರ್ಚ್ 21 ರಂದು ರಥೋತ್ಸವ ಜರುಗಲಿದ್ದು, ರಥಗಳು ಬರುವ ನಾಲ್ಕು ಬೀದಿಗಳಲ್ಲಿ ರಥಗಳ ಚಲನೆಗೆ ಯಾವುದೇ ಅಡೆತಡೆ ಆಗದಂತೆ ರಸ್ತೆಗಳ ಸಮತಟ್ಟು ಮಾಡಬೇಕು. ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಸೂಕ್ತ ಸ್ಥಳಗಳಳ್ಲಿ ತಾತ್ಕಾಲಿಕ ನಲ್ಲಿಗಳನ್ನು ಹಾಕಬೇಕು. ದೇವಾಲಯದ ಸುತ್ತಲು ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಕಸದ ತೊಟ್ಟಿಗÀಳಿಂದ ಕಸ ಸಾಗಿಸಲು ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮವನ್ನು ನಂಜನಗೂಡು ನಗರ ಸಭೆ ಕೈಗೊಳ್ಳಬೇಕು ಎಂದರು.
ಪೊಲೀಸ್ ಇಲಾಖೆ ಜಾತ್ರೆ ನಡೆಯುವ ದಿನದಂದು, ಅಗತ್ಯ ಬಂದೋಬಸ್ತು ಮಾಡಬೇಕು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳ ವಾಹನಗಳು ಬರುವುದರಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಮಾತ್ರ ವಾಹನ ನಿಲುಗಡೆಗೆ ವ್ಯವಸ್ಥೆ, ಭಕ್ತಾದಿಗಳ ನೂಕು-ನುಗ್ಗಲು ನಿಯಂತ್ರಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಭಕ್ತಾದಿಗಳು ಸಂಚರಿಸುವ ಮುಖ್ಯ ಸ್ಥಳಗಳಲ್ಲಿ ಕಳ್ಳತನ ಆಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಜಾತ್ರಾ ದಿನಗಳಲ್ಲಿ ದೇವಸ್ತಾನಕ್ಕೆ ಬರುವ ಭಕ್ತಾದಿಗಳಿಗೆ ತಾತ್ಕಾಲಿಕ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆಗೆ ನಂಜನಗೂಡು ತಾಲ್ಲೂಕು ಪಂಚಾಯತ್ ಅಗತ್ಯ ಕ್ರಮಕೈಗೊಳ್ಳಬೇಕು. ರಥೋತ್ಸವದ ಅಂಗವಾಗಿ ನಡೆಯುವ ಉತ್ಸವಾದಿಗಳು ಮತ್ತು ತೆಪ್ಪೋತ್ಸವದ ಕಾಲದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗದಂತೆ ಇಂಧನ ಇಲಾಖೆ ಎಚ್ಚರವಹಿಸಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯವಿರುವ ಸ್ಥಳಗಳಲ್ಲಿ ಹೆಚ್ಚುವರಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದು ನಿರ್ದೇಶಿಸಿದರು.
ಕಬಿನ ನೀರಾವರಿ ಇಲಾಖೆಯು ಜಾತ್ರೆ ಮುಗಿಯುವವರೆಗೂ ಭಕ್ತಾದಿಗಳು ಹಾಗೂ ಸಾರ್ವಜನಿಕರು ಸೌಕರ್ಯಕ್ಕಾಗಿ ನದಿಯಲ್ಲಿ ಮತ್ತು ಹುಲ್ಲಹಳ್ಳಿ ನಾಲೆಯಲ್ಲಿ ನೀರನ್ನು ಹರಿಸಬೇಕು. ಕಪಿಲಾ ನದಿಯಲ್ಲಿ ತ್ಯಾಜ್ಯ ವಸ್ತುಗಳನ್ನು ತೆಗೆಸಿ ಭಕ್ತಾದಿಗಳಿಗೆ ಸ್ನಾನಕ್ಕಾಗಿ ವ್ಯವಸ್ಥೆ ಮಾಡಬೇಕು. ತೆಪ್ಪೋತ್ಸವದ ಅಂಗವಾಗಿ ಮಾರ್ಚ್ 23 ರಂದು ನದಿಯಲ್ಲಿ ದೋಣಿಯ ಚಾಲನೆಗೆ ಅಗತ್ಯ ನೀರನ್ನು ನದಿಗೆ ಹರಿಬಿಡಲು ಕ್ರಮವಹಿಸಬೇಕು ಎಂದರು.
ರಥೋತ್ಸವ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಆರೋಗ್ಯ ಇಲಾಖೆವಹಿಸಬೇಕು. ದೇವಾಲಯದ ಹತ್ತಿರ ತಾತ್ಕಾಲಿಕ ಪ್ರಥಮ ಚಿಕಿತ್ಸೆ ಹಾಗೂ ಆರೋಗ್ಯ ಕೇಂದ್ರ ತೆರೆದು, ಆಂಬ್ಯುಲೆನ್ಸ್ ವಾಹನದೊಂದಿಗೆ ಸಾಕಷ್ಟು ಸಿಬ್ಬಂದಿ ನಿಯೋಜಿಸಬೇಕು. ಅಲ್ಲದೆ ಭಕ್ತಾದಿಗಳಿಗೆ ಅಗತ್ಯ ಔಷದೋಪಚಾರ ಮಾಡಲು ಸಿದ್ಧರಿರಬೇಕು. ರಥೋತ್ಸವದ ದಿನದಂದು ರಥಗಳು ಸಂಚರಿಸುವ ಬೀದಿಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ಇಲಾಖೆ ಎರಡು ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ರಥೋತ್ಸವ ಮತ್ತು ತೆಪ್ಪೋತ್ಸವದ ದಿನಗಳಲ್ಲಿ ನಂಜನಗೂಡಿಗೆ ಹಲವು ಭಾಗಗಳಿಂದ ಬರುವ ಭಕ್ತಾದಿಗಳಿಗೆ ಸೌಕರ್ಯಕ್ಕಾಗಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ. ರಥೋತ್ಸವ ದಿನದಂದು ಮುಗಿಯುವವರೆಗೆ ರಥಗಳ ಜೊತೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎರಡು ಹೆವೀ ಕ್ರೇನ್ ವ್ಯವಸ್ಥೆ ಮಾಡಬೇಕು. ದೂರಸಂಪರ್ಕ ಇಲಾಖೆಯು ರಥಗಳು ಚಲಿಸುವ ಮಾರ್ಗದಲ್ಲಿ ಅಡ್ಡಲಾಗಿರುವ ತಂತಿಗಳನ್ನು ತೆಗೆದು ರಥಗಳು ಸ್ವಸ್ಥಾನಕ್ಕೆ ಬಂದ ನಂತರ ಮರು ಸಂಪರ್ಕ ಕಲ್ಪಿಸುಲು ಕ್ರಮವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಮೈಸೂರು ಉಪ ವಿಭಾಗಾಧಿಕಾರಿ ಆನಂದ್, ಉಪ ಪೊಲೀಸ್ ವರಿಷ್ಠ್ಠಾಧಿಕಾರಿ ದಿವ್ಯ ಸಾರಾ ಥಾಮಸ್, ತಹಶೀಲ್ದಾರ್ ರಾಮಯ್ಯ, ತಾ.ಪಂ. ಕಾರ್ಯನಿರ್ವಹಕ ಅಧಿಕಾರಿ ಕೃಷ್ಣರಾಜು, ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ಕಾರ್ಯನಿರ್ವಹಕ ಅಧಿಕಾರಿ ಜಯಪ್ರಕಾಶ್, ತಾ.ಪಂ. ಅಧ್ಯಕ್ಷೆ ಸವಿತಾ, ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ, ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಮೋಹನ್ ಹಾಗೂ ಇತರರು ಭಾಗವಹಿಸಿದರು.
ಗ್ರಂಥಾಲಯಗಳ ಬೆಳವಣಿಗೆಗೆ ಸಂಪೂರ್ಣ ಸಹಕಾರ : ಬಿ.ಎಲ್ ಭೈರಪ್ಪ
ಮೈಸೂರು,ಜ.14.ಮೈಸೂರು ನಗರ ಗ್ರಂಥಾಲಯ ಪ್ರಾಧಿಕಾರದ 2016-17 ನೇ ಸಾಲಿನ ರೂ. 350 ಲಕ್ಷಗಳ ಆಯ-ವ್ಯಯವನ್ನು ಅನುಮೋದಿಸಿ, ನಗರ ಕೇಂದ್ರ ಗ್ರಂಥಾಲಯಕ್ಕೆ ಸೇರಿದ ಪೀಪಲ್ಸ್ ಪಾರ್ಕ್ ನಿವೇಶನದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಲು ರೂ. 1.25 ಕೋಟಿ ಗ್ರಂಥಾಲಯ ಕರವನ್ನು ಸರ್ಕಾರದ ತೀರ್ಮಾನದಂತೆ ನಗರ ಗ್ರಂಥಾಲಯ ಪ್ರಾಧಿಕಾರ ನಿಧಿಗೆ ಪಾವತಿಸಲಾಗುವುದು ಹಾಗೂ ಗ್ರಂಥಾಲಯಗಳ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಮೈಸೂರು ಮಹಾನಗರ ಪಾಲಿಕೆ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ಬಿ.ಎಲ್.ಭೈರಪ್ಪ ಅವರು ತಿಳಿಸಿದರು.
ಅವರು ಇತ್ತೀಚೆಗೆ ಮೈಸೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಮೈಸೂರು ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಮೈಸೂರು ನಗರ ಕೇಂದ್ರ ಗ್ರಂಥಾಲಯದ ಅಧೀನದಲ್ಲಿ ವಿವಿಧ ಬಡಾವಣೆಗಳಲ್ಲಿರುವ ಗ್ರಂಥಾಲಯಗಳು ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಖಾ/ಸೇವಾ ಕೇಂದ್ರ ಗ್ರಂಥಾಲಯಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಿ ಕಟ್ಟಡಗಳನ್ನು ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜೆ.ಪಿ.ನಗರ ಶಾಖಾ ಗ್ರಂಥಾಲಯದಲ್ಲಿರುವ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯಕ್ಕೆ 30x40 ಅಳತೆಯ ಖಾಲಿ ನಿವೇಶನವನ್ನು ನೀಡುವುದರ ಜೊತೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರ ಗ್ರಂಥಾಲಯ ಪ್ರಾಧಿಕಾರ ನಿಧಿಗೆ ಪಾವತಿಸ ಬೇಕಾದÀ ಬಾಕಿ ಗ್ರಂಥಾಲಯ ಕರದ ಮೊತ್ತದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.
ಶಾಖಾ ಗ್ರಂಥಾಲಯಗಳು ಇಲ್ಲದೇ ಇರುವ ಸುಮಾರು 40 ವಾರ್ಡ್ಗಳಲ್ಲಿ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕಟ್ಟಡಗಳು, ಸಮುದಾಯ ಭವನಗಳಲ್ಲಿ ವಾಚನಾಲಯ ಪ್ರಾರಂಭಿಸಲು ಮಹಾನಗರ ಪಾಲಿಕೆಯ ಸದಸ್ಯರುಗಳೊಂದಿಗೆ ಚರ್ಚಿಸಿ, ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿ, ವಾಚನಾಲಯಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಎಲ್ಲಾ ಗ್ರಂಥಾಲಯಗಳ/ವಾಚನಾಲಯಗಳಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸಲು ಗ್ರಂಥಾಲಯ ವಿಜ್ಞಾನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳನ್ನು ಅಪ್ರೆಂಟಿಸ್ ರೂಪದಲ್ಲಿ ತೆಗೆದುಕೊಂಡು ಅವರಿಗೆ ಸ್ಟೈಪೆಂಡರಿಯೊಂದಿಗೆ ತರಬೇತಿ ನೀಡಲೂ ಅಧಿಕಾರಿಗಳಿಗೆ ತಿಳಿಸಿದರು.
ಮೈಸೂರಿನ ವಿವಿಧ ಬಡಾವಣೆಗಳಲ್ಲೂ ಗ್ರಂಥಾಲಯ ಕಟ್ಟಡ ನಿರ್ಮಿಸಲು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ನಿವೇಶಗಳನ್ನು ಉಚಿತವಾಗಿ ನೀಡುವಂತೆ ಹಾಗೂ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಮೈಸೂರು ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ಪಾವತಿಬೇಕಾದ ಗ್ರಂಥಾಲಯ ಕರದ ಬಾಕಿ ಮೊತ್ತವನ್ನು ಪಾವತಿಸಲು ಸಭೆಯಲ್ಲಿ ಹಾಜರಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಆರ್. ಮಂಜುನಾಥ್ ರವರಿಗೆ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ಬಾಕಿ ಬರಬೇಕಾದ ಸುಮಾರು ರೂ. 9 ಕೋಟಿ ಮೊತ್ತವನ್ನು ನಗರದ ವಿವಿಧ ಬಡಾವಣೆಗಳಲ್ಲಿಯೂ ಗ್ರಂಥಾಲಯ ಕಟ್ಟಡವನ್ನು ನಿರ್ಮಿಸಲು ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ ವೆಚ್ಚ ಮಾಡಲಾಗುವುದು ಎಂದರು.
ಕುವೆಂಪುನಗರ ಕಾಂಪ್ಲೆಕ್ಸ್ ಬಳಿ ಇರುವ ಹೌಸಿಂಗ್ ಬೋರ್ಡ್, ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಖಾಲಿ ಇರುವ ಕಟ್ಟಡದಲ್ಲಿ ಗ್ರಂಥಾಲಯ ಪ್ರಾರಂಭಿಸಲು ಪರಿಶೀಲನೆ ನಡೆಸಲಾಗುವುದು ಎಂದರು.
34 ರ ಮೇದರ್ ಬ್ಲಾಕ್ ಸಮುದಾಯ ಭವನದಲ್ಲಿ ಹಾಗೂ ವಾರ್ಡ್ ಸಂಖ್ಯೆ: 18 ರಲ್ಲಿ ಕುವೆಂಪು ಪ್ರತಿಮೆಯ ಕೆಳ ಭಾಗದಲ್ಲಿರುವ ವಾಚನಾಲಯ ಕಟ್ಟಡದಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸಲು ಸದರಿ ಕಟ್ಟಡಗಳನ್ನು ನಗರ ಕೇಂದ್ರ ಗ್ರಂಥಾಲಯಕ್ಕೆ ಹಸ್ತಾಂತರಿಸುವುದಾಗಿ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರಿಂದ ವಸೂಲು ಮಾಡುವ ಶೇ 6% ರ ಗ್ರಂಥಾಲಯ ಕರವನ್ನು ನೇರವಾಗಿ ಗ್ರಂಥಾಲಯ ಇಲಾಖೆಯ ಖಾತೆಗೆ ಜಮಾ ಮಾಡುವ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲಾಗುವುದು. ಜೆ.ಪಿ.ನಗರ, ಉದಯಗಿರಿ, ರಾಮಕೃಷ್ಣನಗರ, ವಿವೇಕಾನಂದನಗರ ಶಾಖೆಗಳಲ್ಲಿನ ಗ್ರಂಥಗಳನ್ನು ಗಣಕೀಕರಣಗೊಳಿಸಲು ಬೇಕಾಗುವ ವೆಚ್ಚವನ್ನು ಮೈಸೂರು ಮಹಾನಗರ ಪಾಲಿಕೆಯಿಂದ ಬಾಕಿ ಇರುವ ಗ್ರಂಥಾಲಯ ಕರದ ಮೊತ್ತವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರ ಕೇಂದ್ರ ಗ್ರಂಥಾಲಯದ ಶತಮಾನೋತ್ಸವ ಸಮಾರಂಭ ಯಶಸ್ವಿಯಾಗಿ ನಡೆಸಲು ಸಹಕಾರ ನೀಡಿದ ಮಾಜಿ ಮಹಾಪೌರರಾದ ಆರ್.ಲಿಂಗಪ್ಪ, ನಗರ ಪಾಲಿಕೆ ಸದಸ್ಯ ಕೆ.ಟಿ.ಚಲುವೇಗೌಡ ಹಾಗೂ ಮಹಾಪೌರರನ್ನು ನಗರ ಗ್ರಂಥಾಲಯ ಪ್ರಾಧಿಕಾರದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಮೈಸೂರು ನಗರ ಗ್ರಂಥಾಲಯ ಪ್ರಾಧಿಕಾರದ ಕಾರ್ಯದರ್ಶಿಗಳು ಆದ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಬಿ. ಮಂಜುನಾಥ್, ನಗರ ಕೇಂದ್ರ ಗ್ರಂಥಾಲಯದ ಅಧೀಕ್ಷಕ ಮನು.ಎಂ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ರೈಲ್ವೆ ನೇಮಕಾತಿ ಮಂಡಳಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು,ಜ.14.ರೈಲ್ವೆ ನೇಮಕಾತಿ ಮಂಡಳಿ (ಖಖಃ) ಯಲ್ಲಿ ಖಾಲಿ ಇರುವ ಕರ್ಮಷಿಯಲ್ ಅಪ್ರಂಟೀಸ್, ಟ್ರಾಫಿಕ್ ಅಪ್ರಂಟೀಸ್, ಗೂಡ್ಸ್ ಗಾರ್ಡ್, ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಅಸಿಸ್ಟೆಂಟ್, ಕಿರಿಯ ಲೆಕ್ಕ ಸಹಾಯಕರು ಹಾಗು ಬೆರಳಚ್ಚುಗಾರರು, ಹಿರಿಯ ಗುಮಾಸ್ತ ಹಾಗು ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 18-32 ವರ್ಷ ವಯೋಮಿತಿಯೊಳಗಿರಬೇಕು ಪ.ಜಾ/ಪ.ಪಂ.ದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ರಿಯಾಯಿತಿ ಇರುತ್ತದೆ. ಕರ್ಮಷಿಯಲ್ ಅಪ್ರಂಟೀಸ್, ಟ್ರಾಫಿಕ್ ಅಪ್ರಂಟೀಸ್, ಗೂಡ್ಸ್ ಗಾರ್ಡ್, ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಕಿರಿಯ ಲೆಕ್ಕ ಸಹಾಯಕರು ಹಾಗೂ ಬೆರಳಚ್ಚುಗಾರರು ಮತ್ತು ಹಿರಿಯ ಗುಮಾಸ್ತ ಹಾಗೂ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಟೈಪಿಂಗ್ನಲ್ಲಿ ಪರಿಣಿತಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಸಲ್ಲಿಸುವವರು ಜನವರಿ 25 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಹಾಗೂ ಪರೀಕ್ಷಾ ವಿಧಾನ, ನೇಮಕಾತಿಯ ಪರಿಪೂರ್ಣ ಮಾಹಿತಿಗಾಗಿ ತಿತಿತಿ.ಡಿಡಿbbಟಿಛಿ.gov.iಟಿ ವೆಬ್ಸೈಟ್ ಅಥವಾ ಉಪಮುಖ್ಯಸ್ಥರು, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ , ಮೈಸೂರು ಇವರನ್ನು ಸಂಪರ್ಕಿಸಬಹುದು.
ಪೊಲೀಸ್ ಸಬ್ಇನ್ಸ್ಪೆಕ್ಟರ್ ಮತ್ತು ಪಿ.ಡಿ.ಒ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ
ಮೈಸೂರು,ಜ.14.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಬರುವ ಏಪ್ರಿಲ್ ಮಾಹೆಯ ಒಳಗೆ ನಡೆಸಲಿರುವ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮತ್ತು ಪಿ.ಡಿ.ಒ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಟ್ಟು 50 ದಿನಗಳ ತರಬೇತಿ ನೀಡಲಾಗುವುದು.
ಆಸಕ್ತರು ದಿನಾಂಕ: 19.01.2016ರ ಒಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಕ್ಕೆ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸುವುದು.
ಸಹಕಾರ ಸಂಘಗಳÀ ನೋಂದಣಿ ರದ್ಧತಿ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಮೈಸೂರು,ಜ.14-ಹೆಚ್.ಡಿ.ಕೋಟೆ ತಾಲ್ಲೂಕಿನ ಕುಣಿಗಲ್, ಕೃಷ್ಣಾಪುರ ಹಾಗೂ ಎಂ. ಕನ್ನೇನಹಳ್ಳಿಯಲ್ಲಿರುವ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ಚಿಕ್ಕೆರೆಯೂರಿನಲ್ಲಿರುವ ವೀರಭದ್ರೇಶ್ವರ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ಕನ್ನೇನಹಳ್ಳಿಯಲ್ಲಿರುವ ಮಹಾತ್ಮಾಜಿ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ, ಗರಿಕೆಕಟ್ಟೆ ಕಾವಲ್ನಲ್ಲಿರುವ ಚಾಮುಂಡೇಶ್ವರಿ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ದೊಡ್ಡಕೆರೆಯೂರಿನಲ್ಲಿರುವ ನಂಜುಂಡೇಶ್ವರ ಸಂಯುಕ್ತ ಬೇಸಾಯ ಸಹಕಾರ ಸಂಘ ನಿ., ಮೇಟಿಕುಪ್ಪೆ, ಚನ್ನಗುಂಡಿ, ಕೆ.ಬೆಳತ್ತೂರು, ಹಂಚಿಪುರದಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘ ನಿ, ಕಾಟವಾಳು, ಕಾನಕನಹಳ್ಳಿ, ಕೆಂಚನಹಳ್ಳಿ, ಎಲೆಹುಂಡಿಯಲ್ಲಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ, ಪುರದಲ್ಲಿರುವ ಬಳಪದ ಕಲ್ಲಿನ ಕೈಗಾರಿಕಾ ಸಹಕಾರ ಸಂಘ ನಿ.,ಶಿಂಡೇನಹಳ್ಳಿಯಲ್ಲಿರುವ ಕನಕದಾಸ ಗ್ರಾಮಾಂತರ ಕೈಗಾರಿಕಾ ಸಹಕಾರ ಸಂಘ ನಿ.,ಪಿರಿಯಾಪಟ್ಟಣ ತಾಲ್ಲೂಕು, ಸಂಗರ ಶೆಟ್ಟಹಳ್ಳಿ, ರಾಜನಬೆಳಗುಲಿ, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ, ಕಿತ್ತೂರಿನಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಕೆ.ಆರ್.ನಗರ ತಾಲ್ಲೂಕಿನ ಬೆಣಗನಹಳ್ಳಿಯಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಚುಂಚನಕಟ್ಟೆ, ಶ್ರೀರಾಮ ಸಕ್ಕರೆ ಕಾರ್ಖಾನೆ ನೌಕರರ ಸಹಕಾರ ಸಂಘ ನಿ ಹಾಗೂ ಕಿತ್ತೂರಿನಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಸಮಾಪನೆಗೊಂಡಿದ್ದು, ನೋಂದಣಿ ರದ್ಧತಿಗೆ ಸಮಾಪನಾಧಿಕಾರಿಗಳು ಕ್ರಮವಹಿಸಿರುತ್ತಾರೆ.
ಸಮಾಪನಾಧಿಕಾರಿಗಳಿಗೆ ಸದರಿ ಸಂಘಗಳಿಗೆ ಸಂಬಂಧಿಸಿದ ಲೆಕ್ಕಪುಸ್ತಕಗಳಾಗಲೀ, ಇದನ್ನು ಹೊಂದಿರುವವರ ಮಾಹಿತಿಯಾಗಲಿ ಲಭ್ಯವಿರುವುದಿಲ್ಲ. ಸಂಘಗಳು ಬೈಲಾ ರೀತ್ಯಾ ಉದ್ದೇಶಗಳನ್ನು ಈಡೇರಿಸದೆ ಇರುವುದರಿಂದ ಹಾಗೂ ಈ ಸಂಘಗಳು ಅನುಪಯುಕ್ತವಾಗಿ ಮುಂದುವರೆಯುತ್ತಿರುವುದರಿಂದ ಈ ಸಂಘಗಳ ಆಸ್ತಿ-ಜವಾಬ್ದಾರಿಯನ್ನು ನಿಯಮಾನುಸಾರ ವಿಲೇವಾರಿ ಮಾಡಿ ಸಂಘದ ನೊಂದಣಿಯನ್ನು ರದ್ಧುಪಡಿಸಲು ತೀರ್ಮಾನಿಸಿರುತ್ತಾರೆ.
ಸದರಿ ಸಂಘದ ರದ್ಧತಿಯ ಬಗ್ಗೆ ಸದಸ್ಯರುಗಳಿಗಾಗಲಿ ಅಥವಾ ಸಾರ್ವಜನಿಕರಿಗಾಗಲೀ ಆಕ್ಷೇಪಣೆಗಳಿದ್ದಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿಗಳಿಗೆ ಈ ಪ್ರಕಟಣೆ ಪ್ರಕಟಗೊಂಡ 15 ದಿನದೊಳಗಾಗಿ ಸಲ್ಲಿಸುವ್ಯದು ಎಂದು ಸಮಾಪನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಸ್ಕೆಟ್ಬಾಲ್ ಚಾಂಪಿಯನ್ಶಿಪ್ : ಸಮಾರೋಪ ಸಮಾರಂಭ
ಮೈಸೂರು,ಜ.14.ಕರ್ನಾಟಕ ರಾಜ್ಯ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ 66ನೇ ಹಿರಿಯರ ಪುರುಷ ಮತ್ತು ಮಹಿಳಾ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯ ಸಮಾರೋಪ ಸಮಾರಂಭ ಜನವರಿ 16 ರಂದು ಸಂಜೆ 4-30 ಗಂಟೆಗೆ ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ. ಪರಮೇಶ್ವರ, ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ವಸತಿ ಸಚಿವ ಎಂ.ಹೆಚ್. ಅಂಬರೀಶ್, ಸಹಕಾರ ಹಾಗೂ ಸಕ್ಕರೆ ಸಚಿವ ಮಹದೇವ ಪ್ರಸಾದ್, ಯುವ ಸಬಲೀಕರಣ, ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ, ಸಂಸತ್ ಸದಸ್ಯರಾದ ಆರ್. ಧ್ರುವನಾರಾಯಣ್, ಪ್ರತಾಪ್ ಸಿಂಹ, ವಿಧಾನ ಸಭಾ ಸದಸ್ಯರಾದ ತನ್ವೀರ್ ಸೇಠ್, ವಾಸು, ಎಂ.ಕೆ. ಸೋಮಶೇಖರ್, ಜಿ.ಟಿ. ದೇವೇಗೌಡ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಬಿ.ಎಲ್. ಭೈರಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ನೋಂದಣಿ ಆರಂಭ
ಮೈಸೂರು,ಜ.14, 8 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ ಜನವರಿ 28 ರಿಂದ ಫೆಬ್ರವರಿ 4 ರವರೆಗೆ ಬೆಂಗಳೂರು ಮತ್ತು ಮೈಸೂರು ನಗರಗಳಲ್ಲಿ ಏಕಕಾಲಕ್ಕೆ ನಡೆಯಲಿದೆ.
ಈ ಚಿತ್ರೋತ್ಸವದಲ್ಲಿ ಭಾಗವಹಿಸುವವರು ಹೆಸರು ನೊಂದಣಿ ಮಾಡಿಕೊಳ್ಳಬೇಕಿದ್ದು, ನೊಂದಣಿ ಕಾರ್ಯ ಧನ್ವಂತ್ರಿ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಾಲಯದಲ್ಲಿ ನಡೆಯುತ್ತಿದೆ. (ನೊಂದಣಿ ಸಂದರ್ಭದಲ್ಲಿ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು. ಒಂದು ಸಾವಿರ ಜನರಿಗೆ ಮಾತ್ರ ನೊಂದಣಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.)
7 ದಿನಗಳ ಪ್ರದರ್ಶನಕ್ಕೆ ಪ್ರತಿನಿಧಿಗಳಾಗಲು ನೋಂದಣಿ ದರ ಸಾರ್ವಜನಿಕರಿಗೆ 600/-ರೂ, ವಿದ್ಯಾರ್ಥಿಗಳಿಗೆ, ಚಿತ್ರ ಸಮಾಜದ ಸದಸ್ಯರಿಗೆ, ಹಿರಿಯ ನಾಗರಿಕರಿಗೆ ಮತ್ತು ಚಿತ್ರೋದ್ಯಮದ ಪ್ರತಿನಿಧಿಗಳಿಗೆ 300/- ರೂ.ಗಳಾಗಿರುತ್ತದೆ.
ಪ್ರತಿನಿಧಿಗಳಾಗಿ ನೊಂದಾಯಿಸಿಕೊಂಡವರು ಮೈಸೂರಿನ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ 4 ತೆರೆಗಳಲ್ಲಿ ಸಿನಿಮಾಗಳನ್ನು ವೀಕ್ಷಿಸಬಹುದು. ಅಲ್ಲದೆ ಇಚ್ಚಿಸಿದಲ್ಲಿ ಬೆಂಗಳೂರಿನ ರಾಜಾಜಿ ನಗರದ ಓರಿಯನ್ ಮಾಲ್ನ ಪಿವಿಆರ್ ಸಿನಿಮಾದ 11 ತೆರೆಗಳಲ್ಲಿ ಸಿನಿಮಾವನ್ನು ವೀಕ್ಷಿಸಬಹುದು.
ಈ ಚಿತ್ರೋತ್ಸವದಲ್ಲಿ 61 ದೇಶಗಳ 170 ಚಿತ್ರಗಳು ಪ್ರದರ್ಶನಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2420050 ಯನ್ನು ಸಂಪರ್ಕಿಸುವುದು.
ಪ್ರಮೋದ್ ಕುಮಾರ್ ಅವರಿಗೆ ಪಿಎಚ್.ಡಿ. ಪದವಿ
ಮೈಸೂರು,ಜ.14-ಮೈಸೂರು ವಿಶ್ವವಿದ್ಯಾಲಯವು ಪ್ರಮೋದ್ ಕುಮಾರ್ ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ. ಡಾ. ಎನ್. ಸುರೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “ಭರತೇಶ ವೈಭವದ ಸಾಂಸ್ಕøತಿಕ ನೋಟ” ಕುರಿತು ಸಾದರಪಡಿಸಿದ ಎಚಿiಟಿoಟogಥಿ & Pಡಿಚಿಞಡಿiಣs ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ಪ್ರಮೋದ್ ಕುಮಾರ್ ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.
Sunday, 10 January 2016
ಆಧುನಿಕ ಜೀವನ ಪದ್ಧತಿಯಿಂದ ಪರಂಪರೆ ನಾಶ-ನಾಗರಾಜು
ಮಂಡ್ಯ: ಇಂದಿನ ಯುವಜನತೆ ಆಧುನಿಕ ಜೀವನ ಪದ್ಧತಿಯ ಕಡೆ ಆಕರ್ಷಿತರಾಗುತ್ತಿದ್ದು ಇದರಿಂದ ನಮ್ಮ ಮೌಲ್ಯ ಪರಂಪರೆಗಳು ನಾಶದತ್ತ ಸಾಗುತ್ತಿವೆ ಎಂದು ಹೊನ್ನಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಸಿ.ನಾಗರಾಜು ಅಭಿಪ್ರಾಯಪಟ್ಟರು.
ಬಸರಾಳು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ಮೌಢ್ಯ ಅಂಧಕಾರಗಳು ಹೆಚ್ಚುತ್ತಿದ್ದು ಜನ ಅವುಗಳ ಕಡೆ ವಾಲುತ್ತಿದ್ದು ಜನರನ್ನು ದಿಕ್ಕು ತಪ್ಪಿಸುವ ಶಕ್ತಿಗಳು ಹೆಚ್ಚಾಗಿವೆ.ಹಿಂದೆ ಮದುವೆಗಳು ಸಾಂಪ್ರದಾಯಿಕ ಪದ್ಧತಿಯಲ್ಲಿ ಊರುಗಳಲ್ಲಿ ಸರಳವಾಗಿ ನಡೆಯುತ್ತಿದ್ದವು.ಆದರೆ ಇಂದು ಪೈಪೋಟಿಗೆ ಬಿದ್ದಂತೆ ಅದ್ಧೂರಿ ಮದುವೆಗಳ ಸಂಖ್ಯೆ ಹೆಚ್ಚಾಗುತ್ತಿವೆ.ಅದಕ್ಕಾಗಿ ಸಾಲ ಮಾಡಿಕೊಳ್ಳುವವರೂ ಇದ್ದಾರೆ.ದೇವರು ದಿಂಡರ ಹೆಸರಿನಲ್ಲಿ ಶೋಷಣೆಗೆ ಒಳಗಾಗುತ್ತಿರುವುದೂ ಕಂಡುಬರುತ್ತಿದೆ.ಬಸವಣ್ಣನವರಂತ ದಾರ್ಶನಿಕರು ಇಂತಹ ಮೌಢ್ಯಗಳ ವಿರುದ್ಧ ಸಮರ ಸಾರಿದ್ದರು.ಕುವೆಂಪು ಮಂತ್ರ ಮಾಂಗಲ್ಯ ಪ್ರತಿಪಾದಿಸಿದ್ದರು.ಇದ್ಯಾವುದನ್ನು ನಾವು ಅನುಸರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಮಾತಿನಿಂದ ಸಮಾಜ ಕಟ್ಟುವ ಕೆಲಸವಾಗಬೇಕೆ ಹೊರತು ಪರಸ್ಪರ ದ್ವೇಷ ಅಸೂಯೆ ಹುಟ್ಟಿಸುವಂತಿರಬಾರದು.ಮಾತು ಮೃದು ಮಧುರವಾಗಿರಬೇಕು.ಮಾತಿನಲ್ಲಿ ನಯವಿನಯ ಶುದ್ಧತೆ ಇರಬೇಕು.ಬೇರೆಯವರಿಗೆ ಹಿತವನ್ನು ಉಂಟುಮಾಡುವಂತಿರಬೇಕು ಶರಣರು ಹೇಳಿರುವಂತೆ ನಮ್ಮ ಮಾತು ಲಿಂಗ ಮೆಚ್ಚಿ ಅಹುದಹುದು ಎನ್ನುವಂತಿರಬೇಕು ಆಗ ಸಂಬಂಧಗಳು ಸುಧಾರಿಸುತ್ತವೆ ಎಂದರು.
ಸಮಾರೋಪ ಭಾಷಣ ಮಾಡಿದ ನಿವೃತ್ತ ಪ್ರಾಂಶುಪಾಲ ಚಂದ್ರಶೇಖರಮೂರ್ತಿ ವಿದ್ಯಾರ್ಥಿ ಜೀವನ ನಿಮ್ಮ ಪಾಲಿಗೆ ಅತಿಮುಖ್ಯ ಕಾಲಘಟ್ಟ.ಈ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ಇಟ್ಟು ಅಭ್ಯಸಿಸಿದರೆ ಮುಂದಿನ ಜೀವನ ಸುಗಮವಾಗುತ್ತದೆ.ಈ ಸಮಯದಲ್ಲಿ ಕಷ್ಟಪಟ್ಟರೆ ಜೀವನದ ದಿಕ್ಕು ದೆಸೆಯೆ ಬದಲಾಗುತ್ತದೆ.ಮನಸ್ಸಿನಂತೆ ಮಾದೇವ ಎನ್ನುವಂತೆ ವಿದ್ಯಾರ್ಥಿ ಮನಸ್ಸು ಮಾಡಿದರೆ ಯಾವುದೂ ಅಸಾಧ್ಯ ಎಂಬುದಿಲ್ಲ.ನಿಮ್ಮನ್ನು ನೀವು ನಂಬಿದರೆ ಯಶಸ್ಸು ಖಂಡಿತಾ ಸಾಧ್ಯ.ಈ ನಿಟ್ಟಿನಲ್ಲಿ ಮುಂದುವರೆದು ಪರೀಕ್ಷೆಯನ್ನು ಎದುರಿಸಿ ಯಶಸ್ವಿಯಾಗಿ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದುದ್ದ ಕಾಲೇಜಿನ ಪ್ರಾಂಶುಪಾಲ ತೂಬಿನಕೆರೆ ಲಿಂಗರಾಜು ವಿದ್ಯಾರ್ಥಿಗಳು ಜೀವನದ ಮುಂದಿನ ಗುರಿ ಇರಿಸಿಕೊಂಡು ಗುರಿ ಸಾಧಿಸುವ ಛಲದಿಂದ ಮುನ್ನಡೆದರೆ ಗುರಿ ಮುಟ್ಟಲು ಸಾಧ್ಯ.ನಿಮ್ಮ ಭವಿಷ್ಯ ನಿಮ್ಮ ಕೈಯ್ಯಲ್ಲಿದೆ ಅದನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದು ತಿಳಿಸಿದರು.
ಮತ್ತೋರ್ವ ಅತಿಥಿ ಕನ್ನಲಿ ಕಾಲೇಜು ಪ್ರಾಂಶುಪಾಲ ಕೆ.ಎನ್.ಮಲ್ಲೇಗೌಡ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು,ಸಮಯಪ್ರಜ್ಞೆ ಇಟ್ಟುಕೊಂಡು ಅಭ್ಯಸಿಸಿದರೆ ಯಶಸ್ಸು ಸಾಧ್ಯ.ಶ್ರಮಪಟ್ಟರೆ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬಹುದು ಎಂದರು.
ಉಪನ್ಯಾಸಕ ಹೊಳಲು ಶ್ರೀಧರ್ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು.ಹಿರಿಯ ಉಪನ್ಯಾಸಕ ಹೆಚ್.ಪುಟ್ಟಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀನಿವಾಸ್,ತಿಮ್ಮೇಗೌಡ,ಅಕ್ಷಯ ಬಹುಮಾನ ವಿತರಿಸಿದರು.ಉಪನ್ಯಾಸಕಿ ಬಿ.ಜಿ.ಲತಾ ವಾರ್ಷಿಕ ವರದಿ ಮಂಡಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಚಂದ್ರೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಜಿ.ಎನ್.ಮನುಕುಮಾರ್,ಪ್ರೌಢಶಾಲಾ ವಿಭಾಗದ ಹಿರಿಯ ಸಹಶಿಕ್ಷಕಿ ರುಕ್ಮಿಣಮ್ಮ,ಉಪನ್ಯಾಸಕರಾದ ಮಂಜುನಾಥ್,ರೂಪಶ್ರೀ,ವಿಶ್ವನಾಥ್,ಸುರೇಶ್,ಚೇತನಾ,ನಾಗರಾಜು ಉಪಸ್ಥಿತರಿದ್ದರು.
ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದುವು.
ಮಂಡ್ಯ: ಇಂದಿನ ಯುವಜನತೆ ಆಧುನಿಕ ಜೀವನ ಪದ್ಧತಿಯ ಕಡೆ ಆಕರ್ಷಿತರಾಗುತ್ತಿದ್ದು ಇದರಿಂದ ನಮ್ಮ ಮೌಲ್ಯ ಪರಂಪರೆಗಳು ನಾಶದತ್ತ ಸಾಗುತ್ತಿವೆ ಎಂದು ಹೊನ್ನಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಸಿ.ನಾಗರಾಜು ಅಭಿಪ್ರಾಯಪಟ್ಟರು.
ಬಸರಾಳು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ಮೌಢ್ಯ ಅಂಧಕಾರಗಳು ಹೆಚ್ಚುತ್ತಿದ್ದು ಜನ ಅವುಗಳ ಕಡೆ ವಾಲುತ್ತಿದ್ದು ಜನರನ್ನು ದಿಕ್ಕು ತಪ್ಪಿಸುವ ಶಕ್ತಿಗಳು ಹೆಚ್ಚಾಗಿವೆ.ಹಿಂದೆ ಮದುವೆಗಳು ಸಾಂಪ್ರದಾಯಿಕ ಪದ್ಧತಿಯಲ್ಲಿ ಊರುಗಳಲ್ಲಿ ಸರಳವಾಗಿ ನಡೆಯುತ್ತಿದ್ದವು.ಆದರೆ ಇಂದು ಪೈಪೋಟಿಗೆ ಬಿದ್ದಂತೆ ಅದ್ಧೂರಿ ಮದುವೆಗಳ ಸಂಖ್ಯೆ ಹೆಚ್ಚಾಗುತ್ತಿವೆ.ಅದಕ್ಕಾಗಿ ಸಾಲ ಮಾಡಿಕೊಳ್ಳುವವರೂ ಇದ್ದಾರೆ.ದೇವರು ದಿಂಡರ ಹೆಸರಿನಲ್ಲಿ ಶೋಷಣೆಗೆ ಒಳಗಾಗುತ್ತಿರುವುದೂ ಕಂಡುಬರುತ್ತಿದೆ.ಬಸವಣ್ಣನವರಂತ ದಾರ್ಶನಿಕರು ಇಂತಹ ಮೌಢ್ಯಗಳ ವಿರುದ್ಧ ಸಮರ ಸಾರಿದ್ದರು.ಕುವೆಂಪು ಮಂತ್ರ ಮಾಂಗಲ್ಯ ಪ್ರತಿಪಾದಿಸಿದ್ದರು.ಇದ್ಯಾವುದನ್ನು ನಾವು ಅನುಸರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಮಾತಿನಿಂದ ಸಮಾಜ ಕಟ್ಟುವ ಕೆಲಸವಾಗಬೇಕೆ ಹೊರತು ಪರಸ್ಪರ ದ್ವೇಷ ಅಸೂಯೆ ಹುಟ್ಟಿಸುವಂತಿರಬಾರದು.ಮಾತು ಮೃದು ಮಧುರವಾಗಿರಬೇಕು.ಮಾತಿನಲ್ಲಿ ನಯವಿನಯ ಶುದ್ಧತೆ ಇರಬೇಕು.ಬೇರೆಯವರಿಗೆ ಹಿತವನ್ನು ಉಂಟುಮಾಡುವಂತಿರಬೇಕು ಶರಣರು ಹೇಳಿರುವಂತೆ ನಮ್ಮ ಮಾತು ಲಿಂಗ ಮೆಚ್ಚಿ ಅಹುದಹುದು ಎನ್ನುವಂತಿರಬೇಕು ಆಗ ಸಂಬಂಧಗಳು ಸುಧಾರಿಸುತ್ತವೆ ಎಂದರು.
ಸಮಾರೋಪ ಭಾಷಣ ಮಾಡಿದ ನಿವೃತ್ತ ಪ್ರಾಂಶುಪಾಲ ಚಂದ್ರಶೇಖರಮೂರ್ತಿ ವಿದ್ಯಾರ್ಥಿ ಜೀವನ ನಿಮ್ಮ ಪಾಲಿಗೆ ಅತಿಮುಖ್ಯ ಕಾಲಘಟ್ಟ.ಈ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ಇಟ್ಟು ಅಭ್ಯಸಿಸಿದರೆ ಮುಂದಿನ ಜೀವನ ಸುಗಮವಾಗುತ್ತದೆ.ಈ ಸಮಯದಲ್ಲಿ ಕಷ್ಟಪಟ್ಟರೆ ಜೀವನದ ದಿಕ್ಕು ದೆಸೆಯೆ ಬದಲಾಗುತ್ತದೆ.ಮನಸ್ಸಿನಂತೆ ಮಾದೇವ ಎನ್ನುವಂತೆ ವಿದ್ಯಾರ್ಥಿ ಮನಸ್ಸು ಮಾಡಿದರೆ ಯಾವುದೂ ಅಸಾಧ್ಯ ಎಂಬುದಿಲ್ಲ.ನಿಮ್ಮನ್ನು ನೀವು ನಂಬಿದರೆ ಯಶಸ್ಸು ಖಂಡಿತಾ ಸಾಧ್ಯ.ಈ ನಿಟ್ಟಿನಲ್ಲಿ ಮುಂದುವರೆದು ಪರೀಕ್ಷೆಯನ್ನು ಎದುರಿಸಿ ಯಶಸ್ವಿಯಾಗಿ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದುದ್ದ ಕಾಲೇಜಿನ ಪ್ರಾಂಶುಪಾಲ ತೂಬಿನಕೆರೆ ಲಿಂಗರಾಜು ವಿದ್ಯಾರ್ಥಿಗಳು ಜೀವನದ ಮುಂದಿನ ಗುರಿ ಇರಿಸಿಕೊಂಡು ಗುರಿ ಸಾಧಿಸುವ ಛಲದಿಂದ ಮುನ್ನಡೆದರೆ ಗುರಿ ಮುಟ್ಟಲು ಸಾಧ್ಯ.ನಿಮ್ಮ ಭವಿಷ್ಯ ನಿಮ್ಮ ಕೈಯ್ಯಲ್ಲಿದೆ ಅದನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದು ತಿಳಿಸಿದರು.
ಮತ್ತೋರ್ವ ಅತಿಥಿ ಕನ್ನಲಿ ಕಾಲೇಜು ಪ್ರಾಂಶುಪಾಲ ಕೆ.ಎನ್.ಮಲ್ಲೇಗೌಡ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು,ಸಮಯಪ್ರಜ್ಞೆ ಇಟ್ಟುಕೊಂಡು ಅಭ್ಯಸಿಸಿದರೆ ಯಶಸ್ಸು ಸಾಧ್ಯ.ಶ್ರಮಪಟ್ಟರೆ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬಹುದು ಎಂದರು.
ಉಪನ್ಯಾಸಕ ಹೊಳಲು ಶ್ರೀಧರ್ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು.ಹಿರಿಯ ಉಪನ್ಯಾಸಕ ಹೆಚ್.ಪುಟ್ಟಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀನಿವಾಸ್,ತಿಮ್ಮೇಗೌಡ,ಅಕ್ಷಯ ಬಹುಮಾನ ವಿತರಿಸಿದರು.ಉಪನ್ಯಾಸಕಿ ಬಿ.ಜಿ.ಲತಾ ವಾರ್ಷಿಕ ವರದಿ ಮಂಡಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಚಂದ್ರೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಜಿ.ಎನ್.ಮನುಕುಮಾರ್,ಪ್ರೌಢಶಾಲಾ ವಿಭಾಗದ ಹಿರಿಯ ಸಹಶಿಕ್ಷಕಿ ರುಕ್ಮಿಣಮ್ಮ,ಉಪನ್ಯಾಸಕರಾದ ಮಂಜುನಾಥ್,ರೂಪಶ್ರೀ,ವಿಶ್ವನಾಥ್,ಸುರೇಶ್,ಚೇತನಾ,ನಾಗರಾಜು ಉಪಸ್ಥಿತರಿದ್ದರು.
ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದುವು.
Thursday, 7 January 2016
ರಸ್ತೆ ಅಭಿವೃದ್ಧಿ ಮೂಲಕ ಜನರ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು,ಜ.7.(ಕ.ವಾ):-ಸಾರ್ವಜನಿಕರಿಗೆ ರಸ್ತೆ ಸಂಪರ್ಕ ಅತ್ಯಂತ ಅವಶ್ಯಕವಾದ ಮೂಲಭೂತ ಸೌಕರ್ಯ. ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದರಿಂದ ಜನರ ಅಭಿವೃದ್ಧಿಯ ಜೊತೆಯಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ಹಾಸನ-ರಾಮನಾಥಪುರ-ಪಿರಿಯಾಪಟ್ಟಣ ರಾಜ್ಯ ಹೆದ್ದಾರಿ-21ರ ಅಗಲೀಕರಣ ಹಾಗೂ ಅಭಿವೃದ್ಧಿ ಪಡಿಸುವ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರ ಪ್ರದೇಶದಲ್ಲಿ ರಸ್ತೆ ಎಷ್ಟು ಅವಶ್ಯಕವೊ ಅಷ್ಟೇ ಅವಶ್ಯಕ ಗಾಮೀಣ ಪ್ರದೇಶಕ್ಕೂ ಸಹ ಇದೆ. ಈ ನಿಟ್ಟಿನಲ್ಲಿ ಸರ್ಕಾರ ರಾಜ್ಯದಲ್ಲಿ ಅನೇಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಬಹಳಷ್ಟು ಕಾಮಗಾರಿಗಳನ್ನು ಕೈಗೆತ್ತಕೊಂಡಿದೆ. ಗ್ರಾಮಾಂತರ ಪ್ರದೇಶದ ನಿವಾಸಿಗಳಿಗೆ, ರೈತರಿಗೆ, ಮಹಿಳೆಯರಿಗೆ ಹಾಗೂ ಶಾಲಾ ಮಕ್ಕಳಿಗೆ ಸಂಚರಿಸಲು ಅನುಕೂಲ ಕಲ್ಪಿಸಲು ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಗಲೀಕರಣ ಹಾಗೂ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.
ಹಾಸನ-ರಾಮನಾಥಪುರ-ಪಿರಿಯಾಪಟ್ಟಣ ರಾಜ್ಯ ಹೆದ್ದಾರಿ-21ರ ಅಗಲೀಕರಣ ಹಾಗೂ ಅಭಿವೃದ್ಧಿ ಪಡಿಸುವ
ನಿಟ್ಟಿನಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ರಸ್ತೆಯ ಗುಣಮಟ್ಟ ಅಂತರಾಷ್ಟ್ರೀಯ ರಸ್ತೆಗಳ ಗುಣಮಟ್ಟಕ್ಕೆ ಸಮಾನವಿರುತ್ತದೆ. ಒಟ್ಟು 73.69 ಕಿ.ಮೀ. ಉದ್ದದ ರಸ್ತೆಯನ್ನು ಅಗಲೀಕರಣ ಹಾಗೂ ಅಭಿವೃದ್ಧಿ ಪಡಿಸಲು 221.93 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ರಸ್ತೆಯ ನಿರ್ಮಾಣ ಅವಧಿ 2 ವರ್ಷಗಳಿದ್ದು, 8 ವರ್ಷಗಳ ಕಾಲ ರಸ್ತೆ ನಿರ್ವಹಣಾ ಅವಧಿ ಇರುತ್ತದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ಜನರ ಅಭಿವೃದ್ಧಿಯ ದೃಷ್ಠಿಯಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರು, ದಲಿತರು, ರೈತರು ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಸಾಮಾಜಿಕವಾಗಿ ಶಕ್ತಿ ತುಂಬಲ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ಪ್ರಸಕ್ತ ವರ್ಷ ಅನೇಕ ಭಾಗದಲ್ಲಿ ನೀರಿನ ಹಾಗೂ ವಿದ್ಯುತ್ ಕೊರತೆ ಕಾಡಿದೆ. ಜೂನ್ ತಿಂಗಳೊತ್ತಿಗೆ ರಾಜ್ಯಕ್ಕೆ 2300 ಮೇಗಾ ವ್ಯಾಟ್ ವಿದ್ಯುತ್ ಹೊಸದಾಗಿ ಸೇರಲಿದೆ. ರಾಜ್ಯದಲ್ಲಿ ಪ್ರತಿ ವರ್ಷ ರೈತರ ವಿದ್ಯುತ್ ದರಕ್ಕೆ 7200 ಕೋಟಿ ರಿಯಾಯಿತಿ ನೀಡಲಾಗುತ್ತದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ರೈತರು ಅನುಕೂಲಕ್ಕಾಗಿ ಹಾಗೂ ಅಂರ್ತಜಲ ಮಟ್ಟವನ್ನು ಹೆಚ್ಚಿಸಲು ಕೆರೆಗಳಿಗೆ ನದಿ ಮೂಲವಾಗಿ ನೀರು ತುಂಬಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಪ್ರದೇಶದ ಕೆರೆಗಳಲ್ಲಿ ನೀರು ತುಂಬಿದ್ದು, ಜನರು ಸಂತೋಷ ಪಡುವಂತಾಗಿದೆ. ರಾಜ್ಯದಲ್ಲಿ 1200 ಕರೆಗಳಿಗೆ ನೀರು ತುಂಬಿಸಲು 5000 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಲೋಕೋಪಯೋಗಿ ಇಲಾಖೆ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಡಾ. ಬಿ.ಪುಷ್ಪಾ ಅಮರನಾಥ್, ಶಾಸಕರಾದ ವೆಂಕಟೇಶ್, ಮಂಜುನಾಥ್, ಧರ್ಮಸೇನಾ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಎನ್.ಕೃಷ್ಣ ರಾಜು, ಉಪಾಧ್ಯಕ್ಷರಾದ ಎ.ಹೆಚ್.ಭೀಮಾ ಶಂಕರ, ಪ್ರಾದೇಶಿಕ ಆಯುಕ್ತರಾದ ಎ.ಎಂ.ಕುಂಜಪ್ಪ, ಜಿಲ್ಲಾಧಿಕಾರಿ ಸಿ.ಶಿಖಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಹಾಗೂ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Tuesday, 5 January 2016
ಮಂಡ್ಯ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಛೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಪ್ರಯೋಗಶಾಲಾ ಟೆಕ್ನಾಲಜಿಸ್ಟ್ರ ಸಂಘದ ವರ್ಷದ ಕ್ಯಾಲೆಂಡರ್ ಅನ್ನು ರಾಜ್ಯಾಧ್ಯಕ್ಷ ಪುಟ್ಟರಾಜು ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು, ವೈದ್ಯರುಗಳು, ಶುಶ್ರೂಷಕಿಯರು ಸೇರಿದಂತೆ ಸಿಬ್ಬಂದಿಗಳ ಹೊಂದಾಣಿಕೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಅಭಿವೃದ್ಧಿ ಹೊಂದಿ, ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು.
ವೃತ್ತಿಗೆ ಗೌರವ ಸ್ಥಾನ-ಮಾನ ಸಿಗಬೇಕಾಗಿದ್ದು, ಬೇಡಿಕೆಗಳನ್ನು ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಬೇಕಾಗಿದೆ. ಹೋರಾಟದಲ್ಲಿ ಮಂಡ್ಯ ಜಿಲ್ಲೆ ಗಮನ ಸೆಳೆಯುತ್ತಿದೆ. ಒಳ್ಳೆಯ ಸಂಘಟನಾ ಮನೋಭಾವ ಬೆಳೆಸಿಕೊಂಡು ಸಂಘಟನೆಗೆ ಶಕ್ತಿ ತುಂಬಿ ಸಂಘದ ಯಶಸ್ಸಿಗೆ ಹಾಗೂ ನ್ಯಾಯಬದ್ಧ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವೀರನಾಗಪ್ಪ, ಜಿ.ಸಿ.ನಟರಾಜು, ಬಿ.ಟಿ.ಚಿಕ್ಕಣ್ಣ, ಪಿ.ಮಹೇಶ್, ಎಸ್.ಎಲ್.ದಿನೇಶ್ ಸೇರಿದಂತೆ ಇನ್ನಿತರರಿದ್ದರು.
ನಂತರ ಮಾತನಾಡಿದ ಅವರು, ವೈದ್ಯರುಗಳು, ಶುಶ್ರೂಷಕಿಯರು ಸೇರಿದಂತೆ ಸಿಬ್ಬಂದಿಗಳ ಹೊಂದಾಣಿಕೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಅಭಿವೃದ್ಧಿ ಹೊಂದಿ, ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು.
ವೃತ್ತಿಗೆ ಗೌರವ ಸ್ಥಾನ-ಮಾನ ಸಿಗಬೇಕಾಗಿದ್ದು, ಬೇಡಿಕೆಗಳನ್ನು ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಬೇಕಾಗಿದೆ. ಹೋರಾಟದಲ್ಲಿ ಮಂಡ್ಯ ಜಿಲ್ಲೆ ಗಮನ ಸೆಳೆಯುತ್ತಿದೆ. ಒಳ್ಳೆಯ ಸಂಘಟನಾ ಮನೋಭಾವ ಬೆಳೆಸಿಕೊಂಡು ಸಂಘಟನೆಗೆ ಶಕ್ತಿ ತುಂಬಿ ಸಂಘದ ಯಶಸ್ಸಿಗೆ ಹಾಗೂ ನ್ಯಾಯಬದ್ಧ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವೀರನಾಗಪ್ಪ, ಜಿ.ಸಿ.ನಟರಾಜು, ಬಿ.ಟಿ.ಚಿಕ್ಕಣ್ಣ, ಪಿ.ಮಹೇಶ್, ಎಸ್.ಎಲ್.ದಿನೇಶ್ ಸೇರಿದಂತೆ ಇನ್ನಿತರರಿದ್ದರು.
Monday, 4 January 2016
ಮಂಡ್ಯ : ಗ್ರಾಮೀಣ ಕ್ರೀಡಾಕೂಟಗಳನ್ನು ಮರೆತುಹೋಗುತ್ತಿರುವ ಸಂದರ್ಭದಲ್ಲಿ ಟಿ.ಎಲ್. ಪುರುಷೋತ್ತಮ್ ಅವರ 9ನೇ ವರ್ಷದ ಸಂಸ್ಮರಣೆ ಪ್ರಯುಕ್ತ ನೇತಾಜಿ ಟ್ರಸ್ಟ್ನವರು ಗ್ರಾಮೀಣ ಕ್ರೀಡಾಕೂಟವನ್ನು ಏರ್ಪಡಿಸಿ ಮತ್ತೆ ಈ ಆಟವನ್ನು ಮುಂದುವರಿಸುತ್ತಿರುವುದು ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾ ಅಧ್ಯಕ್ಷ ಎಚ್.ವಿ. ಜಯರಾಂ ತಿಳಿಸಿದರು.
ನಗರದ ಗುತ್ತಲು ರಸ್ತೆಯಲ್ಲಿರುವ ಬೆನಕ ಸಮುದಾಯ ಭವನದಲ್ಲಿ ನೇತಾಜಿ ಟ್ರಸ್ಟ್ ಹಾಗೂ ಟಿ.ಎಲ್. ಪುರುಷೋತ್ತಮ್ ಅಭಿಮಾನಿ ಬಳಗದ ವತಿಯಿಂದ ನಡೆದ ವಿಶ್ವಮಾನವ ಕುವೆಂಪು ಅವರ ಜನ್ಮ ಸಂಭ್ರಮ ಹಾಗೂ ಟಿ.ಎಲ್. ಪುರುಷೋತ್ತಮ್ ಅವರ 9ನೇ ವರ್ಷದ ಸಂಸ್ಮರಣೆ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಟಿ.ಎಲ್. ಪುರುಷೋತ್ತಮ್ ಅವರು ನಗರಸಭಾಧ್ಯಕ್ಷರಾಗಿ ಸುಂದರ ನಗರ ನಿರ್ಮಾಣದ ಕನಸು ಕಂಡಿದ್ದರು. ರಸ್ತೆ, ಚರಂಡಿ, ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ ಎಂದು ಹೇಳಿದರು.
ಕ್ರೀಡಾಪಟುಗಳು ಕ್ರೀಡೆಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.
ಕುವೆಂಪುರವರ ಪಂಚ ಮಂತ್ರಗಳಾದ ಮನುಜಪತ, ವಿಶ್ವಪತ, ಸರ್ವೋದಯ, ಸಮನ್ವಯ, ಪೂರ್ಣದೃಷ್ಠಿ ಇವುಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ರೈತರು ಆಡಂಬರದ ಮದುವೆಗಳಿಗೆ ಮಾರುಹೋಗದೆ ಕುವೆಂಪುರವರ ಮಂತ್ರ ಮಾಂಗಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಎಂ. ಎಸ್. ಆತ್ಮಾನಂದ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಸಂಸದ ಜಿ.ಮಾದೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಿಎಸ್ಐ ಬಿ.ಎಸ್. ಶಿವರುದ್ರ, ನಗರಸಭಾ ಸದಸ್ಯರಾದ ಟಿ.ಕೆ. ರಾಮಲಿಂಗಯ್ಯ, ರಫೀವುಲ್ಲಾ, ನೇತಾಜಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್, ಡಿ.ಎಸ್. ಮೋಹನ್, ಕೆ.ಸಿ. ಪ್ರಕಾಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಿವಾಸ್ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಮಂಡ್ಯ : ರಂಗಭೂಮಿ ಎಲ್ಲಾ ಕಲಾವಿದರಿಗೆ ತಾಯಿ ಬೇರು ಇದ್ದಂತೆ ಎಂದು ಸಾವಯವ ಕೃಷಿಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ. ಮಧುಚಂದನ್ ತಿಳಿಸಿದರು.
ನಗರದ ಕಲಾಮಂದಿರದಲ್ಲಿ ಕಾರಸವಾಡಿಯ ಸರ್ವಚೇತನ ಅಭಿವೃದ್ಧಿ ಸಂಸ್ಥೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶ್ರೀ ಶಿವ ಹಾಗೂ ಕೃಷ್ಣ ಡ್ರಾಮಾ ಸೀನರಿ ವತಿಯಿಂದ ಶ್ರೀ ಶಿವಸೀನರಿಯ ಬೆಳ್ಳಿ ಹಬ್ಬದ ಅಂಗವಾಗಿ ಏಳು ದಿನಗಳ ರಾಜ್ಯ ಮಟ್ಟದ ಗ್ರಾಮೀಣ ನಾಟಕೋತ್ಸವ ಹಾಗೂ ರಂಗನಿರ್ದೇಶಕರುಗಳ ಸಮಾವೇಶ ಮತ್ತು ಅಭಿನಂದನಾ ಸಮಾರಂಭ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಶಿವಲಿಂಗೇಗೌಡರಿಗೆ ಬೆಳ್ಳಿ ಕಿರೀಟಧಾರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಎಂದರೆ ಕೃಷಿ ಎನ್ನುವಂತಹ ಮಾತಿದೆ ಆದರೆ ಮಂಡ್ಯದಲ್ಲಿ ಇರುವಂತಹ ಕಲಾವಿದರು ಬೇರೆ ಯಾವ ಜಿಲ್ಲೆಯಲ್ಲೂ ಇಲ್ಲ. ಚಿತ್ರರಂಗ, ಬಾಲಿವುಡ್, ಹಾಲಿವುಡ್ ಸೇರಿದಂತೆ ಎಲ್ಲಾ ರಂಗದಲ್ಲೂ ಮಂಡ್ಯದ ಜನ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಶೀಘ್ರ ಸ್ಕೂಲ್ ಆಫ್ ಡ್ರಾಮಾ ಸಂಸ್ಥೆಯನ್ನು ಮಂಡ್ಯದಲ್ಲಿ ಸ್ಥಾಪನೆ ಮಾಡುವಂತೆ ಶಿವಡ್ರಾಮಾ ಸೀನ್ಸ್ ಮಾಲೀಕ ಶಿವಲಿಂಗೇಗೌಡ ಅವರಿಗೆ ಸಲಹೆ ನೀಡಿದರು. ಮಂಡ್ಯದಲ್ಲಿ ಇದು ತುಂಬಾ ಅಗತ್ಯವಿದೆ ಎಂದರು.
ಹಿಂದೆ ರಂಗಭೂಮಿಯಲ್ಲಿ ಡಾ. ರಾಜ್ಕುಮಾರ್, ಕಲ್ಯಾಣ್ಕುಮಾರ್, ಲೀಲಾವತಿ ಯಂತಹ ಕಲಾವಿದರು ಒಮ್ಮೆ ಸಂಭಾಷಣೆಯನ್ನು ಒಂದು ಬಾರಿ ಹೇಳಿಕೊಟ್ಟರೆ ಸುಲಲಿತವಾಗಿ ಚಿತ್ರರಂಗದಲ್ಲಿ ಅಭಿನಯಿಸುತ್ತಿದ್ದರು. ಆದರೆ ಇಂದು ಹತ್ತಕ್ಕಿಂತಲೂ ಹೆಚ್ಚು ಬಾರಿ ಹೇಳಿಕೊಟ್ಟರೂ ಇಂದಿನ ಕಲಾವಿದರಿಗೆ ಸಾಧ್ಯವಾಗುವುದಿಲ್ಲ. ಹಿಂದೆ ಇದ್ದಂತ ಶಕ್ತಿ ಇಂದು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿಸಿz್ದÉೀಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಶಾಂತಮ್ಮ, ಸಾವಯವ ಕೃಷಿಕರ ಸಹಕಾರ ಸಂಘದ ಸಿಇಓ ಕಾರಸವಾಡಿ ಮಹದೇವು, ರಂಗಭೂಮಿ ಕಲಾವಿದ ಕಾಳೇನಹಳ್ಳಿ ಕೆಂಚೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘಟನಾ ಕಾರ್ಯದರ್ಶಿ ಬಿ.ಎಂ. ಅಪ್ಪಾಜಪ್ಪ, ಗ್ರಾ.ಪಂ. ಸದಸ್ಯೆ ಮಮತಾ ರಮೇಶ್, ಮಾಜಿ ಸದಸ್ಯ ಆಟೋ ದೇವರಾಜು, ರಾಘವೇಂದ್ರ ಡ್ರಾಮಾ ಸೀನ್ಸ್ ಮಾಲೀಕ ನಾರಾಯಣಪ್ಪ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಕನ್ನಡಿಗ ನ್ಯಾಯಮೂರ್ತಿಗಳನ್ನೇ ನೇಮಕ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಕೆ.ಟಿ. ಶಂಕರೇಗೌಡ, ಬಸವರಾಜು, ಭಾರತಿ, ಕಾಂತರಾಜು, ವೇಣು ಇತರರಿದ್ದರು. ಚಿತ್ರ-ಸಿದ್ದರಾಜು
ಮಂಡ್ಯದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕದಂಬ ಸೈನ್ಯ ವತಿಯಿಂದ ರಾಷ್ಟ್ರ ಕವಿ ಕುವೆಂಪುರವರ 111ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಬೇಕ್ರಿ ರಮೇಶ್, ಉಮ್ಮಡಹಳ್ಳಿ ನಾಗೇಶ್, ಸಿ. ಮಹದೇವು, ಯೋಗೇಶ್,ರಾಮಯ್ಯ, ಥಾಮಸ್ ಬೆಂಜಮಿನ್, ಎನ್. ರಾಜೇಗೌಡ ಇತರರಿದ್ದರು.
ನಗರದ ಗುತ್ತಲು ರಸ್ತೆಯಲ್ಲಿರುವ ಬೆನಕ ಸಮುದಾಯ ಭವನದಲ್ಲಿ ನೇತಾಜಿ ಟ್ರಸ್ಟ್ ಹಾಗೂ ಟಿ.ಎಲ್. ಪುರುಷೋತ್ತಮ್ ಅಭಿಮಾನಿ ಬಳಗದ ವತಿಯಿಂದ ನಡೆದ ವಿಶ್ವಮಾನವ ಕುವೆಂಪು ಅವರ ಜನ್ಮ ಸಂಭ್ರಮ ಹಾಗೂ ಟಿ.ಎಲ್. ಪುರುಷೋತ್ತಮ್ ಅವರ 9ನೇ ವರ್ಷದ ಸಂಸ್ಮರಣೆ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಟಿ.ಎಲ್. ಪುರುಷೋತ್ತಮ್ ಅವರು ನಗರಸಭಾಧ್ಯಕ್ಷರಾಗಿ ಸುಂದರ ನಗರ ನಿರ್ಮಾಣದ ಕನಸು ಕಂಡಿದ್ದರು. ರಸ್ತೆ, ಚರಂಡಿ, ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ ಎಂದು ಹೇಳಿದರು.
ಕ್ರೀಡಾಪಟುಗಳು ಕ್ರೀಡೆಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.
ಕುವೆಂಪುರವರ ಪಂಚ ಮಂತ್ರಗಳಾದ ಮನುಜಪತ, ವಿಶ್ವಪತ, ಸರ್ವೋದಯ, ಸಮನ್ವಯ, ಪೂರ್ಣದೃಷ್ಠಿ ಇವುಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ರೈತರು ಆಡಂಬರದ ಮದುವೆಗಳಿಗೆ ಮಾರುಹೋಗದೆ ಕುವೆಂಪುರವರ ಮಂತ್ರ ಮಾಂಗಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಎಂ. ಎಸ್. ಆತ್ಮಾನಂದ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಸಂಸದ ಜಿ.ಮಾದೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಿಎಸ್ಐ ಬಿ.ಎಸ್. ಶಿವರುದ್ರ, ನಗರಸಭಾ ಸದಸ್ಯರಾದ ಟಿ.ಕೆ. ರಾಮಲಿಂಗಯ್ಯ, ರಫೀವುಲ್ಲಾ, ನೇತಾಜಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್, ಡಿ.ಎಸ್. ಮೋಹನ್, ಕೆ.ಸಿ. ಪ್ರಕಾಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಿವಾಸ್ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಮಂಡ್ಯ : ರಂಗಭೂಮಿ ಎಲ್ಲಾ ಕಲಾವಿದರಿಗೆ ತಾಯಿ ಬೇರು ಇದ್ದಂತೆ ಎಂದು ಸಾವಯವ ಕೃಷಿಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ. ಮಧುಚಂದನ್ ತಿಳಿಸಿದರು.
ನಗರದ ಕಲಾಮಂದಿರದಲ್ಲಿ ಕಾರಸವಾಡಿಯ ಸರ್ವಚೇತನ ಅಭಿವೃದ್ಧಿ ಸಂಸ್ಥೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶ್ರೀ ಶಿವ ಹಾಗೂ ಕೃಷ್ಣ ಡ್ರಾಮಾ ಸೀನರಿ ವತಿಯಿಂದ ಶ್ರೀ ಶಿವಸೀನರಿಯ ಬೆಳ್ಳಿ ಹಬ್ಬದ ಅಂಗವಾಗಿ ಏಳು ದಿನಗಳ ರಾಜ್ಯ ಮಟ್ಟದ ಗ್ರಾಮೀಣ ನಾಟಕೋತ್ಸವ ಹಾಗೂ ರಂಗನಿರ್ದೇಶಕರುಗಳ ಸಮಾವೇಶ ಮತ್ತು ಅಭಿನಂದನಾ ಸಮಾರಂಭ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಶಿವಲಿಂಗೇಗೌಡರಿಗೆ ಬೆಳ್ಳಿ ಕಿರೀಟಧಾರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಎಂದರೆ ಕೃಷಿ ಎನ್ನುವಂತಹ ಮಾತಿದೆ ಆದರೆ ಮಂಡ್ಯದಲ್ಲಿ ಇರುವಂತಹ ಕಲಾವಿದರು ಬೇರೆ ಯಾವ ಜಿಲ್ಲೆಯಲ್ಲೂ ಇಲ್ಲ. ಚಿತ್ರರಂಗ, ಬಾಲಿವುಡ್, ಹಾಲಿವುಡ್ ಸೇರಿದಂತೆ ಎಲ್ಲಾ ರಂಗದಲ್ಲೂ ಮಂಡ್ಯದ ಜನ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಶೀಘ್ರ ಸ್ಕೂಲ್ ಆಫ್ ಡ್ರಾಮಾ ಸಂಸ್ಥೆಯನ್ನು ಮಂಡ್ಯದಲ್ಲಿ ಸ್ಥಾಪನೆ ಮಾಡುವಂತೆ ಶಿವಡ್ರಾಮಾ ಸೀನ್ಸ್ ಮಾಲೀಕ ಶಿವಲಿಂಗೇಗೌಡ ಅವರಿಗೆ ಸಲಹೆ ನೀಡಿದರು. ಮಂಡ್ಯದಲ್ಲಿ ಇದು ತುಂಬಾ ಅಗತ್ಯವಿದೆ ಎಂದರು.
ಹಿಂದೆ ರಂಗಭೂಮಿಯಲ್ಲಿ ಡಾ. ರಾಜ್ಕುಮಾರ್, ಕಲ್ಯಾಣ್ಕುಮಾರ್, ಲೀಲಾವತಿ ಯಂತಹ ಕಲಾವಿದರು ಒಮ್ಮೆ ಸಂಭಾಷಣೆಯನ್ನು ಒಂದು ಬಾರಿ ಹೇಳಿಕೊಟ್ಟರೆ ಸುಲಲಿತವಾಗಿ ಚಿತ್ರರಂಗದಲ್ಲಿ ಅಭಿನಯಿಸುತ್ತಿದ್ದರು. ಆದರೆ ಇಂದು ಹತ್ತಕ್ಕಿಂತಲೂ ಹೆಚ್ಚು ಬಾರಿ ಹೇಳಿಕೊಟ್ಟರೂ ಇಂದಿನ ಕಲಾವಿದರಿಗೆ ಸಾಧ್ಯವಾಗುವುದಿಲ್ಲ. ಹಿಂದೆ ಇದ್ದಂತ ಶಕ್ತಿ ಇಂದು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿಸಿz್ದÉೀಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಶಾಂತಮ್ಮ, ಸಾವಯವ ಕೃಷಿಕರ ಸಹಕಾರ ಸಂಘದ ಸಿಇಓ ಕಾರಸವಾಡಿ ಮಹದೇವು, ರಂಗಭೂಮಿ ಕಲಾವಿದ ಕಾಳೇನಹಳ್ಳಿ ಕೆಂಚೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘಟನಾ ಕಾರ್ಯದರ್ಶಿ ಬಿ.ಎಂ. ಅಪ್ಪಾಜಪ್ಪ, ಗ್ರಾ.ಪಂ. ಸದಸ್ಯೆ ಮಮತಾ ರಮೇಶ್, ಮಾಜಿ ಸದಸ್ಯ ಆಟೋ ದೇವರಾಜು, ರಾಘವೇಂದ್ರ ಡ್ರಾಮಾ ಸೀನ್ಸ್ ಮಾಲೀಕ ನಾರಾಯಣಪ್ಪ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಕನ್ನಡಿಗ ನ್ಯಾಯಮೂರ್ತಿಗಳನ್ನೇ ನೇಮಕ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಕೆ.ಟಿ. ಶಂಕರೇಗೌಡ, ಬಸವರಾಜು, ಭಾರತಿ, ಕಾಂತರಾಜು, ವೇಣು ಇತರರಿದ್ದರು. ಚಿತ್ರ-ಸಿದ್ದರಾಜು
ಮಂಡ್ಯದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕದಂಬ ಸೈನ್ಯ ವತಿಯಿಂದ ರಾಷ್ಟ್ರ ಕವಿ ಕುವೆಂಪುರವರ 111ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಬೇಕ್ರಿ ರಮೇಶ್, ಉಮ್ಮಡಹಳ್ಳಿ ನಾಗೇಶ್, ಸಿ. ಮಹದೇವು, ಯೋಗೇಶ್,ರಾಮಯ್ಯ, ಥಾಮಸ್ ಬೆಂಜಮಿನ್, ಎನ್. ರಾಜೇಗೌಡ ಇತರರಿದ್ದರು.
ಮಂಡ್ಯ: ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಮುಖ್ಯವಾಗಿದೆ ಎಂದು ಮಂಡ್ಯದ ಚುಂಚನಗಿರಿ ಶಾಖಾ ಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಹೇಳಿದರು.
ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಬಿ.ಹೊಸೂರು ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಸ್ಥರಿಂದ ಹಾಗೂ ಶ್ರೀ ಸಾಯಿ ಟ್ರಾಕ್ಟರ್ ವತಿಯಿಂದ ಬಿ.ಹೊಸೂರಿನ ಪ್ರೌಢಶಾಲಾ ಆವರಣದಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಆರೋಗ್ಯದಿಂದಿರಲು ಧ್ಯಾನ, ಯೋಗ, ವ್ಯಾಯಾಮ, ಉತ್ತಮ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಉತ್ತಮ ಆರೋಗ್ಯ ಇದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು ಎಂದರು.
ಮನುಷ್ಯನಿಗೆ ಕಾಯಿಲೆಗಳು ಸರ್ವೇ ಸಾಮಾನ್ಯವಾಗಿದ್ದು, ಅದನ್ನು ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಹೆಚ್ಚು ಹೆಚ್ಚು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಕಡೆ ಗಮನಹರಿಸಬೇಕು. ಇಂತಹ ಆರೋಗ್ಯ ಶಿಬಿರಗಳನ್ನು ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿ ಬಾಳಿ ಎಂದು ಸಲಹೆ ನೀಡಿದರು.
ಶಿಬಿರದಲ್ಲಿ 40ಕ್ಕೂ ಹೆಚ್ಚು ವೈದ್ಯರಿಂದ ಸುಮಾರು 350ಕ್ಕೂ ಹೆಚ್ಚು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಗೋಪಿನಾಥ್, ಡಾ.ಶಿಲ್ಪಶ್ರೀ, ಸಾಯಿ ಟ್ರಾಕ್ಟರ್ನ ರವೀಂದ್ರ, ಉಷರಾಣಿರವೀಂದ್ರ, ಎಸ್.ಶಿವಕುಮಾರ್ ಆರಾಧ್ಯ, ಹೆಚ್.ಆರ್.ಅಶೋಕ್ಕುಮಾರ್, ಬಸವರಾಜು, ಬೋಜಮ್ಮ, ವಿಜಿಕುಮಾರ್ ಸೇರಿದಂತೆ ಇನ್ನಿತರರಿದ್ದರು.
ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಬಿ.ಹೊಸೂರು ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಸ್ಥರಿಂದ ಹಾಗೂ ಶ್ರೀ ಸಾಯಿ ಟ್ರಾಕ್ಟರ್ ವತಿಯಿಂದ ಬಿ.ಹೊಸೂರಿನ ಪ್ರೌಢಶಾಲಾ ಆವರಣದಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಆರೋಗ್ಯದಿಂದಿರಲು ಧ್ಯಾನ, ಯೋಗ, ವ್ಯಾಯಾಮ, ಉತ್ತಮ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಉತ್ತಮ ಆರೋಗ್ಯ ಇದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು ಎಂದರು.
ಮನುಷ್ಯನಿಗೆ ಕಾಯಿಲೆಗಳು ಸರ್ವೇ ಸಾಮಾನ್ಯವಾಗಿದ್ದು, ಅದನ್ನು ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಹೆಚ್ಚು ಹೆಚ್ಚು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಕಡೆ ಗಮನಹರಿಸಬೇಕು. ಇಂತಹ ಆರೋಗ್ಯ ಶಿಬಿರಗಳನ್ನು ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿ ಬಾಳಿ ಎಂದು ಸಲಹೆ ನೀಡಿದರು.
ಶಿಬಿರದಲ್ಲಿ 40ಕ್ಕೂ ಹೆಚ್ಚು ವೈದ್ಯರಿಂದ ಸುಮಾರು 350ಕ್ಕೂ ಹೆಚ್ಚು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಗೋಪಿನಾಥ್, ಡಾ.ಶಿಲ್ಪಶ್ರೀ, ಸಾಯಿ ಟ್ರಾಕ್ಟರ್ನ ರವೀಂದ್ರ, ಉಷರಾಣಿರವೀಂದ್ರ, ಎಸ್.ಶಿವಕುಮಾರ್ ಆರಾಧ್ಯ, ಹೆಚ್.ಆರ್.ಅಶೋಕ್ಕುಮಾರ್, ಬಸವರಾಜು, ಬೋಜಮ್ಮ, ವಿಜಿಕುಮಾರ್ ಸೇರಿದಂತೆ ಇನ್ನಿತರರಿದ್ದರು.
Subscribe to:
Posts (Atom)

